ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಲಸಿಕಾ ಮೇಳದ ಲಸಿಕಾಕರಣದಲ್ಲಿ ಮತ್ತೊಮ್ಮೆ ಪ್ರಥಮ

ಚಿಕ್ಕಬಳ್ಳಾಪುರ: ಸೆಪ್ಟೆಂಬರ್ 29ರಂದು ಹಮ್ಮಿಕೊಂಡಿದ್ದ ಲಸಿಕಾ ಮೇಳದಲ್ಲಿ 40ಸಾವಿರ ಲಸಿಕೆ ಹಾಕಲು  ಸರ್ಕಾರ ಗುರಿ ನಿಗದಿಪಡಿಸಿತ್ತು ಆ ಗುರಿಯಲ್ಲಿ ಶೆ.95 ರಷ್ಟು ಸಾಧನೆ ಮಾಡುವ  ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಲು ಕಾರಣೀಭೂತರಾದ ಜಿಲ್ಲೆಯ ಜನರು ಅದ್ಭುತ ಸ್ಪಂದನಾಶೀಲರು ಎಂಬುದನ್ನ ರಾಜ್ಯಕ್ಕೆ  ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ ಈ ಸಹಕಾರ ಲಸಿಕಾಕರಣ ಶೇ.100ರಷ್ಟು ಪ್ರಗತಿಯಾಗುವವರೆಗೂ ಹೀಗೇಯೇ ಮುಂದುವರಿಯಲಿ ಎಂದು ಜಿಲ್ಲಾಧಿಕಾರಿ ಆರ್.ಲತಾ ಜನರಲ್ಲಿ ಮನವಿ ಮಾಡಿದ್ದಾರೆ.

ಅವರು ಲಸಿಕಾ ಮೇಳದ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ನಗರಕ್ಕೆ ಭೇಟಿ ನೀಡಿ ಲಸಿಕಾಕರಣದ ಬಗ್ಗೆ ಜನರಲ್ಲಿ  ಜಾಗೃತಿ ಮೂಡಿಸಿ ಮಾತನಾಡುತ್ತಾ ,  ಜಿಲ್ಲೆಯಲ್ಲಿ ಈವರೆಗೆ 11,83,467  ಡೋಸ್ ಗಳ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ ಈ ಪೈಕಿ ಮೊದಲ ಡೋಸ್ ಲಸಿಕೆಯನ್ನ 7,98,771 ಜನರಿಗೆ ನೀಡಲಾಗಿದ್ದು, ಎರಡನೆಯ ಡೋಸನ್ನು 3,84,696ಜನರು ಪಡೆದಿದ್ದಾರೆ .ಲಸಿಕಾ ಮೇಳ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಲ್ಲರೂ ಎರಡೂ ಡೋಸ್ ಲಸಿಕೆ ಪಡೆಯುವವರೆಗೆ ಲಸಿಕಾ ಮೇಳ ಆಗಬೇಕು ಎಂದರು.

ಶೇ.100ರಷ್ಟ ಕ್ಕಿಂತ ಅಧಿಕ ಸಾಧನೆಯ ವಿಶ್ವಾಸ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21ರಂದು ಹಮ್ಮಿಕೊಂಡಿದ್ದ ಲಸಿಕಾ ಮೇಳದಲ್ಲಿ 30 ರಿಂದ 35ಸಾವಿರ ಲಸಿಕೆ ಹಾಕಲು ಗುರಿ ನಿಗಧಿಪಡಿಸಿಕೊಳ್ಳಲಾಗಿತ್ತು ಆ ಗುರಿಯನ್ನು ಮೀರಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲೆಯ ಜನರು ಅದ್ಭುತ ಸ್ಪಂದನಾಶೀಲರು ಎಂಬುದನ್ನ ರಾಜ್ಯಕ್ಕೆ ತೋರಿಸಿಕೊಟ್ಟಿದ್ದರು ಹಾಗೂ ಸೆ.17 ರಂದು ರಾಷ್ಟ್ರಾದ್ಯಂತ ನಡೆದ ವಿಶೇಷ ಲಸಿಕಾ ಮೇಳದ ಭಾಗವಾಗಿ  ಜಿಲ್ಲೆಯಲ್ಲಿ ಒಂದೇ ದಿನ 88,570 ಜನರಿಗೆ ಲಸಿಕೆ ಹಾಕುವ ಮೂಲಕ  ಲಸಿಕಾಕರಣದಲ್ಲಿ ಈ ಹಿಂದಿನ ದಾಖಲೆಗಳನ್ನು ಮೀರಿದ ಸಾಧನೆ ಜಿಲ್ಲೆ  ಮಾಡಿತ್ತು. ಇಂದಿನ ಮೇಳದಲ್ಲಿಯೂ  ನಿಗದಿತ 40 ಸಾವಿರ ಗುರಿಯಲ್ಲಿ ಈವರೆಗೆ 37,128 ಜನರಿಗೆ ಲಸಿಕೆ ಹಾಕಲಾಗಿದೆ. ಜಿಲ್ಲೆಯಾದ್ಯಂತ  ಲಸಿಕಾಕರಣ ಇನ್ನೂ  ಮುಂದುವರಿಯುತ್ತಿದ್ದು ನಿಗದಿತ  ಗುರಿಯನ್ನು  ಮೀರಿದ  ಸಾಧನೆಯನ್ನು  ಇಂದೇ  ಮಾಡುತ್ತೇವೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೀರೀಕ್ಷೆಗೂ ಮೀರಿದ ಸಾಧನೆಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ  ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್ ಅವರು ಮಂಗಳವಾರ ಕೋವಿಡ್-19ರ ಲಸಿಕಾಕರಣ ಪ್ರಗತಿ ಪರಿಶೀಲನೆ  ಹಾಗೂ  ವಿಶೇಷ ಲಸಿಕಾ ಮೇಳ ಆಯೋಜಿಸುವ ಬಗ್ಗೆ ವಿಡಿಯೋ ಸಂವಾದ ಸಭೆ ನಡೆಸಿದ ವೇಳೆ  ನೀಡಿದ ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಈ ಮಟ್ಟದ ಸಾಧನೆಗೆ ಪ್ರಮುಖ ಕಾರಣವಾಯಿತು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ ,ಜಿಲ್ಲಾಡಳಿದ ಇತರ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು,ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಪಡೆಗಳ ಸದಸ್ಯರು, ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರು ಆರೋಗ್ಯ ಇಲಾಖೆಗೆ ಉತ್ತಮ ಸಾತ್ ನೀಡಿದ್ದಾರೆ, ಮಾಧ್ಯಮದವರು ವ್ಯಾಪಕ ಪ್ರಚಾರ ನೀಡಿದ್ದಾರೆ ಎಲ್ಲಕ್ಕೂ ಮಿಗಿಲಾಗಿ ಜಿಲ್ಲೆಯ ಜನರು ಅದ್ಭುತ ಸ್ಪಂದನೆ ನೀಡಿದ್ದಾರೆ  ಇದೆಲ್ಲದರ ಪರಿಣಾಮ ಈ ಸಾಧನೆಗೈಯ್ಯಲು ಸಾಧ್ಯವಾಗಿದೆ,ಮುಂದೆಯೂ ನಿಮ್ಮೆಲ್ಲರ  ಸಹಕಾರ ಹೀಗೆಯೇ ಮುಂದುವರಿಯಲಿ ಎಂದು ಜನರಲ್ಲಿ ಮನವಿ ಮಾಡಿ ಎಲ್ಲರಿಗೂ ಧನ್ಯವಾದಗಳನ್ನ ಹಾಗೂ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆಯನ್ನು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ -ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ

ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ

[ccc_my_favorite_select_button post_id="120239"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!