ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲೇ ಲಸಿಕಾ ಮೇಳದ ಲಸಿಕಾಕರಣದಲ್ಲಿ ಮತ್ತೊಮ್ಮೆ ಪ್ರಥಮ

ಚಿಕ್ಕಬಳ್ಳಾಪುರ: ಸೆಪ್ಟೆಂಬರ್ 29ರಂದು ಹಮ್ಮಿಕೊಂಡಿದ್ದ ಲಸಿಕಾ ಮೇಳದಲ್ಲಿ 40ಸಾವಿರ ಲಸಿಕೆ ಹಾಕಲು  ಸರ್ಕಾರ ಗುರಿ ನಿಗದಿಪಡಿಸಿತ್ತು ಆ ಗುರಿಯಲ್ಲಿ ಶೆ.95 ರಷ್ಟು ಸಾಧನೆ ಮಾಡುವ  ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಲು ಕಾರಣೀಭೂತರಾದ ಜಿಲ್ಲೆಯ ಜನರು ಅದ್ಭುತ ಸ್ಪಂದನಾಶೀಲರು ಎಂಬುದನ್ನ ರಾಜ್ಯಕ್ಕೆ  ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ ಈ ಸಹಕಾರ ಲಸಿಕಾಕರಣ ಶೇ.100ರಷ್ಟು ಪ್ರಗತಿಯಾಗುವವರೆಗೂ ಹೀಗೇಯೇ ಮುಂದುವರಿಯಲಿ ಎಂದು ಜಿಲ್ಲಾಧಿಕಾರಿ ಆರ್.ಲತಾ ಜನರಲ್ಲಿ ಮನವಿ ಮಾಡಿದ್ದಾರೆ.

ಅವರು ಲಸಿಕಾ ಮೇಳದ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ನಗರಕ್ಕೆ ಭೇಟಿ ನೀಡಿ ಲಸಿಕಾಕರಣದ ಬಗ್ಗೆ ಜನರಲ್ಲಿ  ಜಾಗೃತಿ ಮೂಡಿಸಿ ಮಾತನಾಡುತ್ತಾ ,  ಜಿಲ್ಲೆಯಲ್ಲಿ ಈವರೆಗೆ 11,83,467  ಡೋಸ್ ಗಳ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ ಈ ಪೈಕಿ ಮೊದಲ ಡೋಸ್ ಲಸಿಕೆಯನ್ನ 7,98,771 ಜನರಿಗೆ ನೀಡಲಾಗಿದ್ದು, ಎರಡನೆಯ ಡೋಸನ್ನು 3,84,696ಜನರು ಪಡೆದಿದ್ದಾರೆ .ಲಸಿಕಾ ಮೇಳ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಲ್ಲರೂ ಎರಡೂ ಡೋಸ್ ಲಸಿಕೆ ಪಡೆಯುವವರೆಗೆ ಲಸಿಕಾ ಮೇಳ ಆಗಬೇಕು ಎಂದರು.

ಶೇ.100ರಷ್ಟ ಕ್ಕಿಂತ ಅಧಿಕ ಸಾಧನೆಯ ವಿಶ್ವಾಸ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21ರಂದು ಹಮ್ಮಿಕೊಂಡಿದ್ದ ಲಸಿಕಾ ಮೇಳದಲ್ಲಿ 30 ರಿಂದ 35ಸಾವಿರ ಲಸಿಕೆ ಹಾಕಲು ಗುರಿ ನಿಗಧಿಪಡಿಸಿಕೊಳ್ಳಲಾಗಿತ್ತು ಆ ಗುರಿಯನ್ನು ಮೀರಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲೆಯ ಜನರು ಅದ್ಭುತ ಸ್ಪಂದನಾಶೀಲರು ಎಂಬುದನ್ನ ರಾಜ್ಯಕ್ಕೆ ತೋರಿಸಿಕೊಟ್ಟಿದ್ದರು ಹಾಗೂ ಸೆ.17 ರಂದು ರಾಷ್ಟ್ರಾದ್ಯಂತ ನಡೆದ ವಿಶೇಷ ಲಸಿಕಾ ಮೇಳದ ಭಾಗವಾಗಿ  ಜಿಲ್ಲೆಯಲ್ಲಿ ಒಂದೇ ದಿನ 88,570 ಜನರಿಗೆ ಲಸಿಕೆ ಹಾಕುವ ಮೂಲಕ  ಲಸಿಕಾಕರಣದಲ್ಲಿ ಈ ಹಿಂದಿನ ದಾಖಲೆಗಳನ್ನು ಮೀರಿದ ಸಾಧನೆ ಜಿಲ್ಲೆ  ಮಾಡಿತ್ತು. ಇಂದಿನ ಮೇಳದಲ್ಲಿಯೂ  ನಿಗದಿತ 40 ಸಾವಿರ ಗುರಿಯಲ್ಲಿ ಈವರೆಗೆ 37,128 ಜನರಿಗೆ ಲಸಿಕೆ ಹಾಕಲಾಗಿದೆ. ಜಿಲ್ಲೆಯಾದ್ಯಂತ  ಲಸಿಕಾಕರಣ ಇನ್ನೂ  ಮುಂದುವರಿಯುತ್ತಿದ್ದು ನಿಗದಿತ  ಗುರಿಯನ್ನು  ಮೀರಿದ  ಸಾಧನೆಯನ್ನು  ಇಂದೇ  ಮಾಡುತ್ತೇವೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೀರೀಕ್ಷೆಗೂ ಮೀರಿದ ಸಾಧನೆಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ  ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ.ಸುಧಾಕರ್ ಅವರು ಮಂಗಳವಾರ ಕೋವಿಡ್-19ರ ಲಸಿಕಾಕರಣ ಪ್ರಗತಿ ಪರಿಶೀಲನೆ  ಹಾಗೂ  ವಿಶೇಷ ಲಸಿಕಾ ಮೇಳ ಆಯೋಜಿಸುವ ಬಗ್ಗೆ ವಿಡಿಯೋ ಸಂವಾದ ಸಭೆ ನಡೆಸಿದ ವೇಳೆ  ನೀಡಿದ ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಈ ಮಟ್ಟದ ಸಾಧನೆಗೆ ಪ್ರಮುಖ ಕಾರಣವಾಯಿತು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದಾರೆ ,ಜಿಲ್ಲಾಡಳಿದ ಇತರ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳು,ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಪಡೆಗಳ ಸದಸ್ಯರು, ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರು ಆರೋಗ್ಯ ಇಲಾಖೆಗೆ ಉತ್ತಮ ಸಾತ್ ನೀಡಿದ್ದಾರೆ, ಮಾಧ್ಯಮದವರು ವ್ಯಾಪಕ ಪ್ರಚಾರ ನೀಡಿದ್ದಾರೆ ಎಲ್ಲಕ್ಕೂ ಮಿಗಿಲಾಗಿ ಜಿಲ್ಲೆಯ ಜನರು ಅದ್ಭುತ ಸ್ಪಂದನೆ ನೀಡಿದ್ದಾರೆ  ಇದೆಲ್ಲದರ ಪರಿಣಾಮ ಈ ಸಾಧನೆಗೈಯ್ಯಲು ಸಾಧ್ಯವಾಗಿದೆ,ಮುಂದೆಯೂ ನಿಮ್ಮೆಲ್ಲರ  ಸಹಕಾರ ಹೀಗೆಯೇ ಮುಂದುವರಿಯಲಿ ಎಂದು ಜನರಲ್ಲಿ ಮನವಿ ಮಾಡಿ ಎಲ್ಲರಿಗೂ ಧನ್ಯವಾದಗಳನ್ನ ಹಾಗೂ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆಯನ್ನು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಅಕ್ರಮ ಶ್ರೀಗಂಧ ಸಾಗಾಣಿಕೆ: ಇಬ್ಬರ ಬಂಧನ

ಅಕ್ರಮ ಶ್ರೀಗಂಧ ಸಾಗಾಣಿಕೆ: ಇಬ್ಬರ ಬಂಧನ

ಸಂಡೂರು ಉತ್ತರ ಮತ್ತು ದಕ್ಷಿಣ ವಲಯದ ಅರಣ್ಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಶ್ರೀಗಂಧ (Sandalwood) ಸಾಗಿಸುತ್ತಿದ್ದ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ.

[ccc_my_favorite_select_button post_id="119542"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!