ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 14 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಹೊಸದಾಗಿ 20 ಕರೊನಾ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ಉತ್ತರದ 73 ವರ್ಷದ ಸೋಂಕಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆಂದು ವರದಿ ತಿಳಿಸಿದೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ತಾಲೂಕಿನ 10 ಪುರುಷರು, ಓರ್ವ ಮಹಿಳೆ ಸೇರಿ 11. ಹೊಸಕೋಟೆ ತಾಲೂಕಿನ 03 ಪುರುಷರು, 02 ಮಹಿಳೆಯರು ಸೇರಿ 05. ದೇವನಹಳ್ಳಿ ತಾಲೂಕಿನ 02 ಮಹಿಳೆಯರು. ದೊಡ್ಡಬಳ್ಳಾಪುರ ತಾಲೂಕಿನ ಓರ್ವ ಪುರುಷ. ಅನ್ಯ ಜಿಲ್ಲೆಯ ಓರ್ವ ಪುರುಷ ಸೇರಿ ಜಿಲ್ಲೆಯಲ್ಲಿ ಒಟ್ಟು 20 ಮಂದಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಮೃತರ ವರದಿ: ಬೆಂಗಳೂರು ಉತ್ತರದ 73 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ 105 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 171ಕ್ಕೆ ಏರಿಕೆಯಾಗಿದೆ.
ಉಳಿದಂತೆ ಜಿಲ್ಲೆಯ 2128 ಮಂದಿಯನ್ನು ಕಡ್ಡಾಯ ಗೃಹ ಬಂದನದಲ್ಲಿ ಇಡಲಾಗಿದ್ದು,
ಇಂದಿನ ವರದಿಯ ಪ್ರಕಾರ 1978 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….