ದೊಡ್ಡಬಳ್ಳಾಪುರ: ತಾಲೂಕಿನ ನೆಲ್ಲುಕುಂಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ತಿಮ್ಮರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
11 ಸದಸ್ಯರು ಬಲದ ಎಂಪಿಸಿಎಸ್ಗೆ ಚುನಾವಣಾಧಿಕಾರಿ ವಾಸುದೇವ ರೆಡ್ಡಿ ಸಮ್ಮುಖದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ, ತಿಮ್ಮರಾಜು ಅವರು ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಎಂಪಿಸಿಎಸ್ ಮಾಜಿ ಅಧ್ಯಕ್ಷ ಗಣೇಶಪ್ಪ, ವಸಂತ್ ಕುಮಾರ್, ನರಸಿಂಹರಾಜು, ನರಸಿಂಹಮೂರ್ತಿ, ಯುವ ಮುಖಂಡರಾದ ಸುರೇಶ್ ಕುಮಾರ್, ರಂಜಿತ್ ಯಾದವ್ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……..