ಮುಂಬೈ: ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಕುರಿತಂತೆ ಬಂಧನಕ್ಕೆ ಒಳಗಾಗಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಬಲಕ್ಕೆ ಖ್ಯಾತ ನಟ ಸುನಿಲ್ ಶೆಟ್ಟಿ ಬಂದಿದ್ದು. ಆತ ಇನ್ನೂ ಮಗು, ನೀವೇ ಅಂತಿಮ ತೀರ್ಪು ನೀಡಬೇಡಿ ಎಂದು ಮಾಧ್ಯಮಗಳಿಗೆ ಹಾಗೂ ನೆಟ್ಟಿಗರಿಗೆ ಮನವಿ ಮಾಡಿದ್ದಾರೆ.
ಶನಿವಾರ ರಾತ್ರಿ ಮುಂಬೈನ ತೀರ ಪ್ರದೇಶದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆದಿದೆ ಎನ್ನಲಾದ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಹಾಗೂ ಇತರೆ ಏಳು ಜನರನ್ನು ಎನ್ಸಿಬಿ ಅಧಿಕಾರಿಗಳು ಭಾನುವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ನಟ ಸುನೀಲ್ ಶೆಟ್ಟಿ, ಎನ್ಸಿಬಿ ಯಾವುದೇ ಸ್ಥಳದಲ್ಲಿ ದಾಳಿ ಮಾಡಿದಾಗ ಅಲ್ಲಿದ್ದ ಎಲ್ಲರನ್ನೂ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತದೆ. ಆ ನಂತರ ಆರೋಪಿಗಳನ್ನು ಪತ್ತೆ ಹಚ್ಚುತ್ತೆ. ಅದೇ ರೀತಿ ಆರ್ಯನ್ನ್ನು ವಿಚಾರಣೆ ಮಾಡುತ್ತಿದ್ದಾರೆ ಅಷ್ಟೇ. ಆದರೆ, ನಾವು ಈ ಹುಡುಗ ಡ್ರಗ್ಸ್ ತೆಗೆದುಕೊಂಡಿದ್ದಾನೆ ಎಂದು ನಾವು ಊಹಿಸಿ ಬಿಡುತ್ತೇವೆ. ಇದು ತಪ್ಪು. ಈ ಪ್ರಕರಣದಲ್ಲಿ ಆತನ ವಿಚಾರಣೆ ನಡೆಯುತ್ತಿದೆ. ಈಗಲೇ ಆತ ಅಪರಾಧಿ ಎನ್ನುವುದು ಸರಿಯಲ್ಲ. ಆ ಮಗುವಿಗೆ ಉಸಿರಾಡಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.
ಬಾಲಿವುಡ್ನಲ್ಲಿ ಏನಾದರೂ ಸಂಭವಿಸಿದಾಗ, ಮಾಧ್ಯಮಗಳು ಎಲ್ಲಕ್ಕೂ ತಾವೇ ತೀರ್ಮಾನಕ್ಕೆ ಬರುತ್ತವೆ. ವಾಸ್ತವ ವರದಿಗಳು ಹೊರಬರಲಿ. ಅವನು ಮಗು ಆತನನ್ನು ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….