ದಸರಾ ಮಹೋತ್ಸವ-2021ರ ದೀಪಾಲಂಕಾರ ನಾಳಿಯಿಂದ ಆರಂಭ

ಮೈಸೂರು: ಮೈಸೂರು ದಸರಾ ಮಹೋತ್ಸವದ ಸಲುವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ ಅಕ್ಟೋಬರ್ 07 ರಿಂದ ಅಕ್ಟೋಬರ್ 15ರವರೆಗೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಿ ಚಾಲನೆಗೊಳಿಸಲಾಗಿದೆ.

ಮೈಸೂರು ನಗರದ ಹೊರ ವರ್ತುಲ ರಸ್ತೆಯ ಒಳ ಭಾಗಕ್ಕೆ ಸೇರಿದ ರಸ್ತೆಗಳು, ವೃತ್ತಗಳನ್ನು ದೀಪಾಲಂಕಾರಗೊಳಿಸಲಾಗಿದ್ದು, ಅತ್ಯಂತ ಆಕರ್ಷಣಿಯ ಹಾಗೂ ವಿನೂತನ ರೀತಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ.

ಈ ದೀಪಾಲಂಕಾರವನ್ನು ಪ್ರತೀ ದಿನ ಸಂಜೆ 6:30 ರಿಂದ ರಾತ್ರಿ 9:30 ಗಂಟೆಯವರೆಗೆ ಬೆಳಗಿಸಲಾಗುವುದು. ಮೈಸೂರು ನಗರದ ನಿವಾಸಿಗಳು, ಪ್ರವಾಸಿಗರು, ಯಾತ್ರಾರ್ಥಿಗಳು, ಪ್ರಮುಖ ಗಣ್ಯ ವ್ಯಕ್ತಿಗಳು ದೀಪಾಲಂಕಾರವನ್ನು ವೀಕ್ಷಿಸಲು ಬರುತ್ತಿರುವುದರಿಂದ ರಸ್ತೆಗಳಲ್ಲಿ ಜನ ದಟ್ಟಣೆ, ವಾಹನ ದಟ್ಟಣೆ ಹೆಚ್ಚಾಗುತ್ತಿದೆ.

ದೀಪಾಲಂಕಾರವನ್ನು ವೀಕ್ಷಿಸುವ ಜನರು ವಿದ್ಯುತ್ ದೀಪಗಳನ್ನು ಸ್ಪರ್ಶಿಸುವುದು, ಸೆಲ್ಫಿ ತೆಗೆದುಕೊಳ್ಳುವುದು, ಸ್ಪರ್ಶಿಸಲು ಪ್ರಯತ್ನಿಸುವುದು, ಮಾರ್ಗಗಳನ್ನು ಸ್ಪರ್ಶಿಸುವಂತೆ ಮಕ್ಕಳಿಗೆ ಪ್ರೇರೇಪಿಸುವುದು ಇತ್ಯಾದಿ ಅಸುರಕ್ಷಿತ ಚಟುವಟಿಕೆಗಳನ್ನು ಮಾಡಿದರೆ ವಿದ್ಯುತ್ ಅವಘಡ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಇದರಿಂದ ಸುರಕ್ಷತೆಯನ್ನು ಕಾಪಾಡಲು ಚಾ.ವಿ.ಸ.ನಿ.ನಿ. ವತಿಯಿಂದ ಈಗಾಗಲೇ ಅಗತ್ಯ ಸಿಬ್ಬಂದಿ ವರ್ಗದವರು, ಅಧಿಕಾರಿಗಳನ್ನು ಆಯ್ದ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗಿದೆ.

ದೀಪಾಲಂಕಾರ ರಸ್ತೆಗಳು ಮತ್ತು ವೃತ್ತಗಳಲ್ಲಿ ಗಸ್ತು ತಿರುಗಿ ವಾಹನ ಬಳಕೆ ಮಾಡಿ ಧ್ವನಿ ವರ್ಧಕದ ಮೂಲಕ ಈಗಾಗಲೇ ಸುರಕ್ಷತೆಯ ಮೂಲಕ ಅರಿವು ಮೂಡಿಸುವ ಕ್ರಮ ಕೈಗೊಳ್ಳಲಾಗಿದೆ. ಆದರೂ ಸಾರ್ವಜನಿಕರು ಅವಘಡಗಳ ಬಗ್ಗೆ ಲೆಕ್ಕಿಸದೆ ದೀಪಾಲಂಕಾರ ವ್ಯವಸ್ಥೆಯನ್ನು ಸ್ಪರ್ಶಿಸಲು ಪ್ರಯತ್ನಿಸಬಾರದೆಂದು ತಿಳಿಸಲಾಗಿದೆ. ಪೊಲೀಸ್ ಆಯುಕ್ತರು, ಮೈಸೂರು ನಗರದÀವರಿಗೂ ಸಹ ಈ ಬಗ್ಗೆ ಮನವಿ ಮಾಡಿದ್ದು ಅಗತ್ಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅಗತ್ಯ ಸಿಬ್ಬಂದಿ ವರ್ಗದವರನ್ನು ನಿಯೋಜಿಸಿ ಕೊಡುವಂತೆ ಕೋರಲಾಗಿದೆ.

ಚಾ.ವಿ.ಸ.ನಿ.ನಿ. ಇಲಾಖೆಯು ದಸರಾ ಮಹೋತ್ಸವ ದಿವಸಗಳಂದು ಸಾರ್ವಜನಿಕರಿಗಾಗಿ, ಅತ್ಯಂತ ಕಾಳಜಿವಹಿಸಿ ವಿನೂತನ ವಿನ್ಯಾಸದಿಂದ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದ್ದು, ಸುರಕ್ಷತಾ ದೃಷ್ಟಿಯಿಂದ ಸಾರ್ವಜನಿಕರು ದೀಪಾಲಂಕಾರವನ್ನು ವೀಕ್ಷಿಸುವಾಗ ಯಾವುದೇ ರೀತಿಯಾಗಿ ದೀಪಾಲಂಕಾರ ಸ್ಪರ್ಶಿಸುವ ಪ್ರಯತ್ನ ಮಾಡಬಾರದು, ತಮ್ಮ ಜೊತೆಯಲ್ಲಿರುವ ಮಕ್ಕಳನ್ನು ಯಾವುದೇ ಕಾರಣಕ್ಕೂ ವಿದ್ಯುತ್ ದೀಪ ಹಾಗೂ ತಂತಿಗಳನ್ನು ಮುಟ್ಟಲು ಪ್ರಯತ್ನಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ.

ಯಾವುದೇ ವಿದ್ಯುತ್ ತಂತಿಗಳು ತುಂಡಾಗಿ ನೆಲದ ಮೇಲೆ ಬಿದ್ದಿದ್ದರೆ ತುರ್ತಾಗಿ 1912ಗೆ ಕರೆ ಮಾಡುವುದು.

ಸೆಲ್ಫಿ ಅಥವಾ ಫೋಟೋ ತೆಗೆಯುವ ಸಂದರ್ಭದಲ್ಲಿ ವಿದ್ಯುತ್‌ತಂತಿ ಮತ್ತು ವಿದ್ಯುತ್ ಬಲ್ಬ್ಗಳಿಂದ ದೂರ ಇರಬೇಕಾಗಿದ್ದು, ವಿದ್ಯುತ್ ಕಂಬಗಳಿಗೆ, ವಿದ್ಯುತ್ ತಂತಿಗಳಿಗೆ ತಾಗಿ ನಿಲ್ಲಬಾರದು. ಮಳೆ ಬರುವ ಸಮಯದಲ್ಲಿ ವಿದ್ಯುತ್ ಕಂಬ ಹಾಗೂ ತಂತಿಗಳಿAದ ದೂರ ಇರುವುದು. ದೀಪಾಲಂಕಾರ ವ್ಯವಸ್ಥೆಯನ್ನು ಹಾನಿ ಮಾಡುವ / ವಿಕಾರಗೊಳಿಸುವ ಪ್ರಯತ್ನ ಮಾಡಬಾರದು.

ಮಳೆ ಬರುವ ಸಮಯದಲ್ಲಿ ವಿದ್ಯುತ್ ಕಂಬ ಹಾಗೂ ತಂತಿಗಳಿಂದ ದೂರಇರುವುದು. ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯಲ್ಲಿನ ದೋಷ ಅಥವಾ ದೂರುಗಳಿದ್ದಲ್ಲಿ ತಕ್ಷಣವೇ ಚಾ.ವಿ.ಸ.ನಿ.ನಿ.ಯ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆ ಕಾರ್ಯ ನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!