ನಾಡಹಬ್ಬಕ್ಕೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ / ದಸರಾ ಪ್ಯಾಕೇಜ್ ಟೂರ್ ಮಾಡಲು ಸಲಹೆ

ಮೈಸೂರು: ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶ್ವವಿಖ್ಯಾತ ಮೈಸೂರು ದಸಾರಾಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚಾಲನೆ ನೀಡಿದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಯಾವ ಜನ್ಮದ ಪುಣ್ಯವೋ ಗೊತ್ತಿಲ್ಲ ನನಗೆ ಅವಕಾಶ ಸಿಕ್ಕಿದೆ. ಮೈಸೂರು ದಸರಾ ಉದ್ಘಾಟನೆ ಮಾಡುವ ಅವಕಾಶ ಸಿಕ್ಕಿದೆ. ಈ ಅವಕಾಶ ಮಾಡಿಕೊಟ್ಟ ಸಿಎಂಗೆ ನನ್ನ ಅನಂತ ಧನ್ಯವಾದ. ನನ್ನ ವಿದ್ಯಾಭ್ಯಾಸದ ದಿನಗಳಲ್ಲಿ ಪ್ರತಿನಿತ್ಯ ತಾಯಿಗೆ ನಮಿಸುತ್ತಿದ್ದೆ. ಶಾಲೆಗೆ ಹೋಗುವುದಕ್ಕೂ ಮುನ್ನ ದೇವಿಗೆ ನಮಿಸುತ್ತಿದ್ದೆ. ಮೈಸೂರು ದಸರಾಗೆ ವಿದೇಶಗಳಿಂದಲೂ ಜನ ಬರುತ್ತಿದ್ದರು. ದಸರಾ ವೇಳೆ ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡಿಯುತಿತ್ತು ಎಂದು ಇದೇ ವೇಳೆ ಎಸ್.ಎಂ.ಕೃಷ್ಣ ಅವರು, ತಮ್ಮ ಬಾಲ್ಯದ ದಿನದಲ್ಲಿ ನಡೆಯುತ್ತಿದ್ದ ದಸರಾ ಬಗ್ಗೆ ಸ್ಮರಿಸಿದರು.

ಹನ್ನೆರಡು ವರ್ಷ ಇದ್ದಾಗಲೇ ನಮ್ಮ ತಂದೆ ಓದಲು ಕಳುಹಿಸಿಕೊಟ್ಟರು. ಒಂಟಿಕೊಪ್ಪಲು ಶಾಲೆಯಲ್ಲಿ ಓದಿ, ಮಹಾಜನ ಶಾಲೆಯಲ್ಲಿ ಕಲಿತೆ. ನಂತರ ಯುವರಾಜ ಕಾಲೇಜು, ಮಹಾರಾಜ ಕಾಲೇಜಿನಲ್ಲಿ ಕಲಿತೆ. ನಾನು ಮೈಸೂರಿನ ಜೊತೆಯಲ್ಲೇ ಬೆಳೆದೆ. ಪ್ರತಿದಿನ ಚಾಮುಂಡಿ ಬೆಟ್ಟ ನೋಡುತ್ತಿದ್ದೆ, ಕೈ ಮುಗಿಯುತ್ತಿದೆ. ದಸರಾ ಆ ವೇಳೆ ಸಂಭ್ರಮದಿಂದ ನಡೆಯುತ್ತಿತ್ತು. ರಾಜ್ಯದ ನಾನಾ ಕಡೆ ಹಾಗೂ ವಿದೇಶದಿಂದ ಬರುತ್ತಿದ್ದರು. 

ಪ್ರಜಾಪ್ರತಿನಿಧಿ ಜಗನ್ಮೋಹನ ಅರಮನೆಯಲ್ಲಿ ನಡೆಯುತ್ತಿತ್ತು. ಪೀಟಿಲ್ ಚೌಡಯ್ಯ, ದೇವೇಂದ್ರಪ್ಪ ಹಲವರು ಪ್ರಾತಃಸ್ಮರಣೀಯರು ಇದ್ದರು. ಮೈಸೂರು ಕುಸ್ತಿಗೆ ಹೆಸರಾಂತ ಜಿಲ್ಲೆ. ಸಾಹುಕಾರ್ ಚನ್ನಯ್ಯ ಅವರು ಕುಸ್ತಿಗೆ ಸಹಮತ ಹೆಚ್ಚಾಗಿತ್ತು. ಯದುವಂಶದವರು ದಸರಾ ಉತ್ಸವಕ್ಕೆ ಮೆರಗು ತಂದಿದ್ದಾರೆ. ನಾಲ್ವಡಿ ಒಡೆಯರ್, ಜಯಚಾಮರಾಜ ಒಡೆಯರ್ ಕೊಡುಗೆ ಅಪಾರವಾಗಿದೆ. ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆ ಇದೆ ಅಂತ ಎಸ್ಎಂ ಕೃಷ್ಣ ಭಾಷಣದಲ್ಲಿ ಬಾಲ್ಯದ ದಿನ ಸೇರಿದಂತೆ ಮೈಸೂರಿನ ಪ್ರಮುಖರನ್ನ ನೆನೆದರು.

ದಸರಾ ಪ್ಯಾಕೇಜ್ ಟೂರ್ ಮಾಡಿ: ಬೊಮ್ಮಾಯಿಗೆ ಸಲಹೆ: ಭಾಷಣದಲ್ಲಿ ಪ್ಯಾಕೇಜ್ ಟೂರಿಸಂಗೆ ಎಸ್ಎಂ ಕೃಷ್ಣ ಸಲಹೆ ನೀಡಿದ್ದಾರೆ. ಸಿಎಂ ಬೊಮ್ಮಾಯಿಗೆ ಸಲಹೆ ನೀಡಿದ ಅವರು, ಇದರಿಂದ ಪ್ರವಾಸೋದ್ಯಮ ಕೂಡ ಅಭಿವೃದ್ಧಿಯಾಗುತ್ತದೆ. ಸಿಂಗಾಪುರ ನೋಡಲು ಲಕ್ಷಾಂತರ ಜನ ಹೋಗುತ್ತಾರೆ. ಸಿಂಗಾಪುರ ತುಂಬಾ ಸ್ವಚ್ಛವಾಗಿರುವುದರಿಂದ ಹೋಗುತ್ತಾರೆ. ನಮ್ಮ ಮೈಸೂರನ್ನು ಕೂಡ ಸುಂದರ ನಗರ ಮಾಡಬೇಕು. ಪ್ರಕೃತಿದತ್ತವಾಗಿ ಎಲ್ಲ ಸಿಗಬೇಕಾದರೆ ಬಳಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಪ್ರಧಾನಿ ಮೋದಿಯವರನ್ನು ಹೊಗಳಿದ ಎಸ್.ಎಂ.ಕೃಷ್ಷ, ಮೋದಿ ಬಹಳ ಒಳ್ಳೆಯ ಕೆಲಸ ಮಾಡಿ ದೇಶ ಕಟ್ಟುತ್ತಿದ್ದಾರೆ. ನಾನು ಬಹಳಷ್ಟು ಜನಪ್ರತಿನಿಧಿಗಳ ಆಡಳಿತ ನೋಡಿದ್ದೇನೆ. ಮೋದಿ ಬಹಳ ಶ್ರದ್ಧೆ, ಅಚ್ಚುಕಟ್ಟಾಗಿ ದೇಶ ಕಟ್ಟುತ್ತಿದ್ದಾರೆ. ತಾಯಿ ಚಾಮುಂಡಿ ಮೋದಿ ಅವರಿಗೆ ಇನ್ನಷ್ಟು ಶಕ್ತಿ ಕೊಡಲಿ. ಭಾರತ ಇದೀಗ ಅಭಿವೃದ್ಧಿಯತ್ತ ಸಾಗುತ್ತಿದೆ. ಭಾರತ ಚೀನಾದ ನಡುವೆ ಪೈಪೋಟಿಯಿದೆ. ಮತ್ಸರವಿಲ್ಲದ ಸ್ಪರ್ಧೆ ಸ್ವಾಗತರ್ಹ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಎಸ್.ಟಿ. ಸೋಮಶೇಖರ್, ಸುನಿಲ್ ಕುಮಾರ್, ಆರ್ ಅಶೋಕ್, ಶಿವರಾಂ ಹೆಬ್ಬಾರ್, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಕೆ.ಸುಧಾಕರ್, ನಾರಾಯಣ ಗೌಡ, ಬಿ.ಸಿ. ಪಾಟೀಲ್, ಶಾಸಕರಾದ ಎಲ್. ನಾಗೇಂದ್ರ, ರಾಮದಾಸ್ , ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಅರವಿಂದ ಬೆಲ್ಲದ್, ಮಹದೇವ್ ಸೇರಿ ಸಂಸದರು, ಶಾಸಕರು ಭಾಗಿಯಾಗಿದ್ದರು.

ಪೊಟೋ ಕೃಪೆ: ಅರುಣ್ ಮೈಸೂರು

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……. 

ರಾಜಕೀಯ

ಮೋದಿ ಮಿತ್ರನಿಂದ ಭಾರತದ ಮೇಲೆ ಶೇ.500 ತೆರಿಗೆ?

ಮೋದಿ ಮಿತ್ರನಿಂದ ಭಾರತದ ಮೇಲೆ ಶೇ.500 ತೆರಿಗೆ?

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಪ್ತ ಮಿತ್ರ ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಭಾರತಕ್ಕೆ ಮಾರಕವಾಗುವಂಹ ನಿರ್ಣಯಗಳನ್ನು ಕೈಗೊಳ್ಳುತ್ತಿದ್ದು, ಈ ಕುರಿತಂತೆ ಭಾರತ ಸರ್ಕಾರ ಕನಿಷ್ಠ ಪ್ರತಿಕ್ರಿಯೆ ನೀಡದೆ

[ccc_my_favorite_select_button post_id="118268"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!