ನಾಡಹಬ್ಬಕ್ಕೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ / ದಸರಾ ಪ್ಯಾಕೇಜ್ ಟೂರ್ ಮಾಡಲು ಸಲಹೆ

ಮೈಸೂರು: ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶ್ವವಿಖ್ಯಾತ ಮೈಸೂರು ದಸಾರಾಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚಾಲನೆ ನೀಡಿದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಯಾವ ಜನ್ಮದ ಪುಣ್ಯವೋ ಗೊತ್ತಿಲ್ಲ ನನಗೆ ಅವಕಾಶ ಸಿಕ್ಕಿದೆ. ಮೈಸೂರು ದಸರಾ ಉದ್ಘಾಟನೆ ಮಾಡುವ ಅವಕಾಶ ಸಿಕ್ಕಿದೆ. ಈ ಅವಕಾಶ ಮಾಡಿಕೊಟ್ಟ ಸಿಎಂಗೆ ನನ್ನ ಅನಂತ ಧನ್ಯವಾದ. ನನ್ನ ವಿದ್ಯಾಭ್ಯಾಸದ ದಿನಗಳಲ್ಲಿ ಪ್ರತಿನಿತ್ಯ ತಾಯಿಗೆ ನಮಿಸುತ್ತಿದ್ದೆ. ಶಾಲೆಗೆ ಹೋಗುವುದಕ್ಕೂ ಮುನ್ನ ದೇವಿಗೆ ನಮಿಸುತ್ತಿದ್ದೆ. ಮೈಸೂರು ದಸರಾಗೆ ವಿದೇಶಗಳಿಂದಲೂ ಜನ ಬರುತ್ತಿದ್ದರು. ದಸರಾ ವೇಳೆ ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡಿಯುತಿತ್ತು ಎಂದು ಇದೇ ವೇಳೆ ಎಸ್.ಎಂ.ಕೃಷ್ಣ ಅವರು, ತಮ್ಮ ಬಾಲ್ಯದ ದಿನದಲ್ಲಿ ನಡೆಯುತ್ತಿದ್ದ ದಸರಾ ಬಗ್ಗೆ ಸ್ಮರಿಸಿದರು.

ಹನ್ನೆರಡು ವರ್ಷ ಇದ್ದಾಗಲೇ ನಮ್ಮ ತಂದೆ ಓದಲು ಕಳುಹಿಸಿಕೊಟ್ಟರು. ಒಂಟಿಕೊಪ್ಪಲು ಶಾಲೆಯಲ್ಲಿ ಓದಿ, ಮಹಾಜನ ಶಾಲೆಯಲ್ಲಿ ಕಲಿತೆ. ನಂತರ ಯುವರಾಜ ಕಾಲೇಜು, ಮಹಾರಾಜ ಕಾಲೇಜಿನಲ್ಲಿ ಕಲಿತೆ. ನಾನು ಮೈಸೂರಿನ ಜೊತೆಯಲ್ಲೇ ಬೆಳೆದೆ. ಪ್ರತಿದಿನ ಚಾಮುಂಡಿ ಬೆಟ್ಟ ನೋಡುತ್ತಿದ್ದೆ, ಕೈ ಮುಗಿಯುತ್ತಿದೆ. ದಸರಾ ಆ ವೇಳೆ ಸಂಭ್ರಮದಿಂದ ನಡೆಯುತ್ತಿತ್ತು. ರಾಜ್ಯದ ನಾನಾ ಕಡೆ ಹಾಗೂ ವಿದೇಶದಿಂದ ಬರುತ್ತಿದ್ದರು. 

ಪ್ರಜಾಪ್ರತಿನಿಧಿ ಜಗನ್ಮೋಹನ ಅರಮನೆಯಲ್ಲಿ ನಡೆಯುತ್ತಿತ್ತು. ಪೀಟಿಲ್ ಚೌಡಯ್ಯ, ದೇವೇಂದ್ರಪ್ಪ ಹಲವರು ಪ್ರಾತಃಸ್ಮರಣೀಯರು ಇದ್ದರು. ಮೈಸೂರು ಕುಸ್ತಿಗೆ ಹೆಸರಾಂತ ಜಿಲ್ಲೆ. ಸಾಹುಕಾರ್ ಚನ್ನಯ್ಯ ಅವರು ಕುಸ್ತಿಗೆ ಸಹಮತ ಹೆಚ್ಚಾಗಿತ್ತು. ಯದುವಂಶದವರು ದಸರಾ ಉತ್ಸವಕ್ಕೆ ಮೆರಗು ತಂದಿದ್ದಾರೆ. ನಾಲ್ವಡಿ ಒಡೆಯರ್, ಜಯಚಾಮರಾಜ ಒಡೆಯರ್ ಕೊಡುಗೆ ಅಪಾರವಾಗಿದೆ. ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆ ಇದೆ ಅಂತ ಎಸ್ಎಂ ಕೃಷ್ಣ ಭಾಷಣದಲ್ಲಿ ಬಾಲ್ಯದ ದಿನ ಸೇರಿದಂತೆ ಮೈಸೂರಿನ ಪ್ರಮುಖರನ್ನ ನೆನೆದರು.

ದಸರಾ ಪ್ಯಾಕೇಜ್ ಟೂರ್ ಮಾಡಿ: ಬೊಮ್ಮಾಯಿಗೆ ಸಲಹೆ: ಭಾಷಣದಲ್ಲಿ ಪ್ಯಾಕೇಜ್ ಟೂರಿಸಂಗೆ ಎಸ್ಎಂ ಕೃಷ್ಣ ಸಲಹೆ ನೀಡಿದ್ದಾರೆ. ಸಿಎಂ ಬೊಮ್ಮಾಯಿಗೆ ಸಲಹೆ ನೀಡಿದ ಅವರು, ಇದರಿಂದ ಪ್ರವಾಸೋದ್ಯಮ ಕೂಡ ಅಭಿವೃದ್ಧಿಯಾಗುತ್ತದೆ. ಸಿಂಗಾಪುರ ನೋಡಲು ಲಕ್ಷಾಂತರ ಜನ ಹೋಗುತ್ತಾರೆ. ಸಿಂಗಾಪುರ ತುಂಬಾ ಸ್ವಚ್ಛವಾಗಿರುವುದರಿಂದ ಹೋಗುತ್ತಾರೆ. ನಮ್ಮ ಮೈಸೂರನ್ನು ಕೂಡ ಸುಂದರ ನಗರ ಮಾಡಬೇಕು. ಪ್ರಕೃತಿದತ್ತವಾಗಿ ಎಲ್ಲ ಸಿಗಬೇಕಾದರೆ ಬಳಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಪ್ರಧಾನಿ ಮೋದಿಯವರನ್ನು ಹೊಗಳಿದ ಎಸ್.ಎಂ.ಕೃಷ್ಷ, ಮೋದಿ ಬಹಳ ಒಳ್ಳೆಯ ಕೆಲಸ ಮಾಡಿ ದೇಶ ಕಟ್ಟುತ್ತಿದ್ದಾರೆ. ನಾನು ಬಹಳಷ್ಟು ಜನಪ್ರತಿನಿಧಿಗಳ ಆಡಳಿತ ನೋಡಿದ್ದೇನೆ. ಮೋದಿ ಬಹಳ ಶ್ರದ್ಧೆ, ಅಚ್ಚುಕಟ್ಟಾಗಿ ದೇಶ ಕಟ್ಟುತ್ತಿದ್ದಾರೆ. ತಾಯಿ ಚಾಮುಂಡಿ ಮೋದಿ ಅವರಿಗೆ ಇನ್ನಷ್ಟು ಶಕ್ತಿ ಕೊಡಲಿ. ಭಾರತ ಇದೀಗ ಅಭಿವೃದ್ಧಿಯತ್ತ ಸಾಗುತ್ತಿದೆ. ಭಾರತ ಚೀನಾದ ನಡುವೆ ಪೈಪೋಟಿಯಿದೆ. ಮತ್ಸರವಿಲ್ಲದ ಸ್ಪರ್ಧೆ ಸ್ವಾಗತರ್ಹ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಎಸ್.ಟಿ. ಸೋಮಶೇಖರ್, ಸುನಿಲ್ ಕುಮಾರ್, ಆರ್ ಅಶೋಕ್, ಶಿವರಾಂ ಹೆಬ್ಬಾರ್, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಕೆ.ಸುಧಾಕರ್, ನಾರಾಯಣ ಗೌಡ, ಬಿ.ಸಿ. ಪಾಟೀಲ್, ಶಾಸಕರಾದ ಎಲ್. ನಾಗೇಂದ್ರ, ರಾಮದಾಸ್ , ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಅರವಿಂದ ಬೆಲ್ಲದ್, ಮಹದೇವ್ ಸೇರಿ ಸಂಸದರು, ಶಾಸಕರು ಭಾಗಿಯಾಗಿದ್ದರು.

ಪೊಟೋ ಕೃಪೆ: ಅರುಣ್ ಮೈಸೂರು

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……. 

ರಾಜಕೀಯ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಅಂಡರ್ ಪಾಸ್ ಅವೈಜ್ಞಾನಿಕ: ಸಂಸದ ಡಾ. ಕೆ. ಸುಧಾಕರ

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸಂಸದ ಡಾ.ಕೆ ಸುಧಾಕರ್ (Dr.K. Sudhakar) ಅವರು ಸೂಚನೆ ನೀಡಿದರು.

[ccc_my_favorite_select_button post_id="120824"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]