ನಾಡಹಬ್ಬಕ್ಕೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ / ದಸರಾ ಪ್ಯಾಕೇಜ್ ಟೂರ್ ಮಾಡಲು ಸಲಹೆ

ಮೈಸೂರು: ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶ್ವವಿಖ್ಯಾತ ಮೈಸೂರು ದಸಾರಾಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚಾಲನೆ ನೀಡಿದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಯಾವ ಜನ್ಮದ ಪುಣ್ಯವೋ ಗೊತ್ತಿಲ್ಲ ನನಗೆ ಅವಕಾಶ ಸಿಕ್ಕಿದೆ. ಮೈಸೂರು ದಸರಾ ಉದ್ಘಾಟನೆ ಮಾಡುವ ಅವಕಾಶ ಸಿಕ್ಕಿದೆ. ಈ ಅವಕಾಶ ಮಾಡಿಕೊಟ್ಟ ಸಿಎಂಗೆ ನನ್ನ ಅನಂತ ಧನ್ಯವಾದ. ನನ್ನ ವಿದ್ಯಾಭ್ಯಾಸದ ದಿನಗಳಲ್ಲಿ ಪ್ರತಿನಿತ್ಯ ತಾಯಿಗೆ ನಮಿಸುತ್ತಿದ್ದೆ. ಶಾಲೆಗೆ ಹೋಗುವುದಕ್ಕೂ ಮುನ್ನ ದೇವಿಗೆ ನಮಿಸುತ್ತಿದ್ದೆ. ಮೈಸೂರು ದಸರಾಗೆ ವಿದೇಶಗಳಿಂದಲೂ ಜನ ಬರುತ್ತಿದ್ದರು. ದಸರಾ ವೇಳೆ ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡಿಯುತಿತ್ತು ಎಂದು ಇದೇ ವೇಳೆ ಎಸ್.ಎಂ.ಕೃಷ್ಣ ಅವರು, ತಮ್ಮ ಬಾಲ್ಯದ ದಿನದಲ್ಲಿ ನಡೆಯುತ್ತಿದ್ದ ದಸರಾ ಬಗ್ಗೆ ಸ್ಮರಿಸಿದರು.

ಹನ್ನೆರಡು ವರ್ಷ ಇದ್ದಾಗಲೇ ನಮ್ಮ ತಂದೆ ಓದಲು ಕಳುಹಿಸಿಕೊಟ್ಟರು. ಒಂಟಿಕೊಪ್ಪಲು ಶಾಲೆಯಲ್ಲಿ ಓದಿ, ಮಹಾಜನ ಶಾಲೆಯಲ್ಲಿ ಕಲಿತೆ. ನಂತರ ಯುವರಾಜ ಕಾಲೇಜು, ಮಹಾರಾಜ ಕಾಲೇಜಿನಲ್ಲಿ ಕಲಿತೆ. ನಾನು ಮೈಸೂರಿನ ಜೊತೆಯಲ್ಲೇ ಬೆಳೆದೆ. ಪ್ರತಿದಿನ ಚಾಮುಂಡಿ ಬೆಟ್ಟ ನೋಡುತ್ತಿದ್ದೆ, ಕೈ ಮುಗಿಯುತ್ತಿದೆ. ದಸರಾ ಆ ವೇಳೆ ಸಂಭ್ರಮದಿಂದ ನಡೆಯುತ್ತಿತ್ತು. ರಾಜ್ಯದ ನಾನಾ ಕಡೆ ಹಾಗೂ ವಿದೇಶದಿಂದ ಬರುತ್ತಿದ್ದರು. 

ಪ್ರಜಾಪ್ರತಿನಿಧಿ ಜಗನ್ಮೋಹನ ಅರಮನೆಯಲ್ಲಿ ನಡೆಯುತ್ತಿತ್ತು. ಪೀಟಿಲ್ ಚೌಡಯ್ಯ, ದೇವೇಂದ್ರಪ್ಪ ಹಲವರು ಪ್ರಾತಃಸ್ಮರಣೀಯರು ಇದ್ದರು. ಮೈಸೂರು ಕುಸ್ತಿಗೆ ಹೆಸರಾಂತ ಜಿಲ್ಲೆ. ಸಾಹುಕಾರ್ ಚನ್ನಯ್ಯ ಅವರು ಕುಸ್ತಿಗೆ ಸಹಮತ ಹೆಚ್ಚಾಗಿತ್ತು. ಯದುವಂಶದವರು ದಸರಾ ಉತ್ಸವಕ್ಕೆ ಮೆರಗು ತಂದಿದ್ದಾರೆ. ನಾಲ್ವಡಿ ಒಡೆಯರ್, ಜಯಚಾಮರಾಜ ಒಡೆಯರ್ ಕೊಡುಗೆ ಅಪಾರವಾಗಿದೆ. ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆ ಇದೆ ಅಂತ ಎಸ್ಎಂ ಕೃಷ್ಣ ಭಾಷಣದಲ್ಲಿ ಬಾಲ್ಯದ ದಿನ ಸೇರಿದಂತೆ ಮೈಸೂರಿನ ಪ್ರಮುಖರನ್ನ ನೆನೆದರು.

ದಸರಾ ಪ್ಯಾಕೇಜ್ ಟೂರ್ ಮಾಡಿ: ಬೊಮ್ಮಾಯಿಗೆ ಸಲಹೆ: ಭಾಷಣದಲ್ಲಿ ಪ್ಯಾಕೇಜ್ ಟೂರಿಸಂಗೆ ಎಸ್ಎಂ ಕೃಷ್ಣ ಸಲಹೆ ನೀಡಿದ್ದಾರೆ. ಸಿಎಂ ಬೊಮ್ಮಾಯಿಗೆ ಸಲಹೆ ನೀಡಿದ ಅವರು, ಇದರಿಂದ ಪ್ರವಾಸೋದ್ಯಮ ಕೂಡ ಅಭಿವೃದ್ಧಿಯಾಗುತ್ತದೆ. ಸಿಂಗಾಪುರ ನೋಡಲು ಲಕ್ಷಾಂತರ ಜನ ಹೋಗುತ್ತಾರೆ. ಸಿಂಗಾಪುರ ತುಂಬಾ ಸ್ವಚ್ಛವಾಗಿರುವುದರಿಂದ ಹೋಗುತ್ತಾರೆ. ನಮ್ಮ ಮೈಸೂರನ್ನು ಕೂಡ ಸುಂದರ ನಗರ ಮಾಡಬೇಕು. ಪ್ರಕೃತಿದತ್ತವಾಗಿ ಎಲ್ಲ ಸಿಗಬೇಕಾದರೆ ಬಳಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಪ್ರಧಾನಿ ಮೋದಿಯವರನ್ನು ಹೊಗಳಿದ ಎಸ್.ಎಂ.ಕೃಷ್ಷ, ಮೋದಿ ಬಹಳ ಒಳ್ಳೆಯ ಕೆಲಸ ಮಾಡಿ ದೇಶ ಕಟ್ಟುತ್ತಿದ್ದಾರೆ. ನಾನು ಬಹಳಷ್ಟು ಜನಪ್ರತಿನಿಧಿಗಳ ಆಡಳಿತ ನೋಡಿದ್ದೇನೆ. ಮೋದಿ ಬಹಳ ಶ್ರದ್ಧೆ, ಅಚ್ಚುಕಟ್ಟಾಗಿ ದೇಶ ಕಟ್ಟುತ್ತಿದ್ದಾರೆ. ತಾಯಿ ಚಾಮುಂಡಿ ಮೋದಿ ಅವರಿಗೆ ಇನ್ನಷ್ಟು ಶಕ್ತಿ ಕೊಡಲಿ. ಭಾರತ ಇದೀಗ ಅಭಿವೃದ್ಧಿಯತ್ತ ಸಾಗುತ್ತಿದೆ. ಭಾರತ ಚೀನಾದ ನಡುವೆ ಪೈಪೋಟಿಯಿದೆ. ಮತ್ಸರವಿಲ್ಲದ ಸ್ಪರ್ಧೆ ಸ್ವಾಗತರ್ಹ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಎಸ್.ಟಿ. ಸೋಮಶೇಖರ್, ಸುನಿಲ್ ಕುಮಾರ್, ಆರ್ ಅಶೋಕ್, ಶಿವರಾಂ ಹೆಬ್ಬಾರ್, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಕೆ.ಸುಧಾಕರ್, ನಾರಾಯಣ ಗೌಡ, ಬಿ.ಸಿ. ಪಾಟೀಲ್, ಶಾಸಕರಾದ ಎಲ್. ನಾಗೇಂದ್ರ, ರಾಮದಾಸ್ , ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಅರವಿಂದ ಬೆಲ್ಲದ್, ಮಹದೇವ್ ಸೇರಿ ಸಂಸದರು, ಶಾಸಕರು ಭಾಗಿಯಾಗಿದ್ದರು.

ಪೊಟೋ ಕೃಪೆ: ಅರುಣ್ ಮೈಸೂರು

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……. 

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!