ಭೂಮಿಯ ಮೇಲೆ ವನ್ಯಜೀವಿಗಳು ನಶಿಸಿದರೆ ಮಾನವ ಜನಾಂಗದ ನಾಶ: ಲೋಹಿತ್.ವೈ.ಟಿ

ದೊಡ್ಡಬಳ್ಳಾಪುರ: ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ, ಜಿ ಕೆ ವಿ ಕೆ ಹಾಗು ನವೋದಯ ಚಾರಿಟೆಬಲ್ ಟ್ರಸ್ಟ್ ಸಹಯೋಗದಲ್ಲಿ ತಾಲೂಕಿನ ಮೆಳೇಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ರಾಷ್ಟ್ರೀಯ ವನ್ಯಜೀವಿ ಸಪ್ತಾಹ’ ಆಚರಿಸಲಾಯಿತು.

ಅಕ್ಟೋಬರ್ 2 ರಿಂದ 8 ರ ವರೆಗೂ ನಡೆಯುವ ಈ ಸಪ್ತಾಹವನ್ನು ಶಾಲಾ ಮಕ್ಕಳಿಗೆ ವನ್ಯಜೀವಿಗಳ ಕುರಿತು ಅರಿವು ಮತ್ತು ರಸಪ್ರೆಶ್ನೆ ಕಾರ್ಯಕ್ರಮವನ್ನು ಆಚರಿಸುವುದರ ಮೂಲಕ ಆಚರಿಸಲಾಯಿತು ಮತ್ತು ಸಸಿ ನೆಡುವುದರ ಮೂಲಕ ಉದ್ಘಾಟಿಸಲಾಯಿತು.

ಡಬ್ಲ್ಯೂ ಡಬ್ಲ್ಯೂ ಎಫ್ ಸಂಸ್ಥೆಯ ಹಿರಿಯ ಯೋಜನಾಧಿಕಾರಿ ಲೋಹಿತ್.ವೈ.ಟಿ ಮಾತನಾಡಿ, ಹುಲಿ, ಆನೆಗಳನ್ನಷ್ಟೆ ವನ್ಯಜೀವಿಗಳೆಂದು ಪರಿಗಣಿಸಿದರೆ ಸಾಲದು, ಸಾಕು ಪ್ರಾಣಿಗಳನ್ನೂರತುಪಡಿಸಿ ನಮ್ಮ ಸುತ್ತಮುತ್ತಲಿನ ಪಕ್ಷಿಗಳು, ಕೀಟಗಳು, ಜೇಡಗಳು, ಸರೀಸೃಪಗಳು, ಜಲಚರಗಳು ಹಾಗೂ ಇತರೆ ಜೀವಿಗಳೆಲ್ಲವೂ ವನ್ಯಜೀವಿಗಳೆ ಮತ್ತು ಕೃಷಿಯನ್ನೊರೆತು ಪಡಿಸಿದ ಎಲ್ಲಾ ಸಸ್ಯವರ್ಗವೂ ವನ್ಯಜೀವಿಗಳೆಂದು ಪರಿಗಣಿಸಲಾಗುವುದು ಎಂದು ತಿಳಿಸಿದರು.

ಕಳೆದ 50 ವರ್ಷಗಳಲ್ಲಿ ಶೇ 70 ಪ್ರತಿಷ್ಠಿತ ಕಶೇರುಕಗಳ ನಾಶ, 75 ಪ್ರತಿಷಿತ ಕೀಟಗಳ ನಾಶ ಮತ್ತು 98 ಪ್ರತಿಷಿತ ರಣಹದ್ದುಗಳ ನಾಶವಾಗಿದೆ. ಭೂಮಿಯ ಮೇಲೆ ವನ್ಯಜೀವಿಗಳು ನಶಿಸಿದರೆ ಮಾನವ ಜನಾಂಗವು ನಶಿಸುತ್ತದೆ ಎಂದು ಎಚ್ಚರಿಸಿದರು.

ಅರಣ್ಯ ಇಲಾಖೆಯ ಸುಭಾಷ್ ಮಾತನಾಡಿ, ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ವನ್ಯಜೀವಿಗಳನ್ನು ರಕ್ಷಿಸಲಾಗುವುದು ಹಾಗು ಅವುಗಳಿಗೆ ತೊಂದರೆ ನೀಡುವುದು ಕಾನೂನಿನ ಪ್ರಕಾರ ಅಪರಾಧ ಎಂದು ತಿಳಿಸಿದರು.

ಮುಖ್ಯಶಿಕ್ಷಕ ಚಿದಾನಂದ ಐಹೊಳೆ ಮಾತನಾಡಿ, ಮಕ್ಕಳು ವಯಸ್ಸಿನಿಂದಲೆ ಪರಿಸರ ಹಾಗೂ ವನ್ಯಜೀವಿಗಳ ಕುರಿತು ಆಸಕ್ತಿ ಮೂಡಿಸಿಕೊಳ್ಳಬೇಕು ಮತ್ತು ಸಂರಕ್ಷಣೆ ಕಾರ್ಯದಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ಜಿ.ಕೆ.ವಿ.ಕೆ ಯ ವಿದ್ಯಾರ್ಥಿಗಳು ಶಾಲಾಮಕ್ಕಳಿಗೆ ವನ್ಯಜೀವಿಗಳ ಕುರಿತ ರಸಪ್ರಶ್ನೆ ಕಾರ್ಯಕ್ರಮ ನಡೆಸಿದರು ಮತ್ತು ಪಕ್ಷಿ ಕೈಪಿಡಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮೆಳೇಕೋಟೆ ಗ್ರಾಮ ಪಂಚಾಯತಿ ಸದಸ್ಯರಾದ ನಂಜೇಗೌಡ, ಹೈದರಾಲಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷನಂದೀಶ್, ನವೋದಯ ಚಾರಿಟೆಬಲ್ ಟ್ರಸ್ಟ್‌ನ ಜನಾರ್ಧನ.ಆರ್, ಜಿ.ಕೆ.ವಿ.ಕೆ ವಿದ್ಯಾರ್ಥಿ ಸಂಚಾಲಕಿ ಪೂಜಾ ರೆಡ್ಡಿ ಹಾಗು ಸಹಪಾಠಿಗಳು, ಶಾಲಾ ಶಿಕ್ಷಕರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!