ಶೀಘ್ರದಲ್ಲಿ ಎತ್ತಿನಹೊಳೆ ಯೋಜನೆ ನೀರು ಕೋಲಾರ ಜಿಲ್ಲೆಗೆ ಲಭ್ಯ: ಜೆ.ಸಿ.ಮಧುಸ್ವಾಮಿ

ಕೋಲಾರ: ರಾಜ್ಯದಲ್ಲಿ ಅತೀ ಹೆಚ್ಚು ನೀರನ್ನು ಅಂದರೆ 8 ಟಿ.ಎಂ.ಸಿ ನೀರನ್ನು ಜಿಲ್ಲೆಗೆ ಕೆ.ಸಿ.ವ್ಯಾಲಿ ಮೂಲಕ  ಹರಿಸಲಾಗಿದೆ. ಜಿಲ್ಲೆಯ ರೈತರು ಎತ್ತಿನಹೊಳೆ ಯೋಜನೆಗೆ ಅಗತ್ಯವಾದ ಭೂಮಿಯನ್ನು ಬಿಟ್ಟು ಕೊಟ್ಟರೆ ಶೀಘ್ರದಲ್ಲಿ ಎತ್ತಿನಹೊಳೆ ನೀರನ್ನು ಜಿಲ್ಲೆಗೆ ಹರಿಸಲಾಗುವುದು ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಧುಸ್ವಾಮಿ ತಿಳಿಸಿದರು. 

ಇಂದು ಮುಳಬಾಗಿಲು ತಾಲ್ಲೂಕಿನ ಜಮ್ಮನಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ. ಮುಳಬಾಗಿಲು ತಾಲ್ಲೂಕಿನ, ಹೊಳಲಿ ಕೆರೆ ಪಂಪ್‍ಹೌಸ್‍ನಿಂದ ನೀರನ್ನು ಎತ್ತುವಳಿ ಮಾಡಿ 32 ಕೆರೆಗಳನ್ನು ತುಂಬಿಸುವ ಕಾಮಗಾರಿ ಮತ್ತು ಕೆ.ಸಿ.ವ್ಯಾಲಿ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2ನೇ ಹಂತದ ಕೆ.ಸಿ.ವ್ಯಾಲಿ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಿ ಜಿಲ್ಲೆಯ ಇತರೆ ಕೆರೆಗಳನ್ನು ತುಂಬಿಸಲಾಗುವುದು. ರೈತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಶಕ್ತಿ ಇಲ್ಲದವರಿಗೆ ಶಕ್ತಿ ತುಂಬಬೇಕಾದರೆ ಉಳಿದ ಕೆರೆಗಳಿಗೆ ನೀರು ತುಂಬಿಸಬೇಕು. ಕೆ.ಸಿ.ವ್ಯಾಲಿ ನೀರಿಂದ ಯಾವುದೇ ರೀತಿಯ ತೊಂದರೆಯಿಲ್ಲ. ಎಲ್ಲಾ ವಿಧದ ಪರೀಕ್ಷೆಗಳನ್ನು ನಡೆಸಿ ಸಂಸ್ಕರಿಸಿ  ನೀರನ್ನು ಕೆರೆಗಳಿಗೆ ತುಂಬಿಸಲಾಗುತ್ತಿದೆ. ಈ ನೀರನ್ನು ಕುಡಿಯಬಾರದು. ನೀರನ್ನು ಭೂಮಿಯಲ್ಲಿ ಹಿಂಗಿಸಿ ನಂತರ ಬೋರ್ ವೆಲ್ ಮೂಲಕ ಹೊರತೆಗೆದು ಬಳಸಬೇಕು. ಕೆರೆಗಳಿಗೆ ಚರಂಡಿ ನೀರನ್ನು ಹರಿಸದೆ ಇಂಗುಗುಂಡಿಗಳ ಮೂಲಕ ಇಂಗಿಸಬೇಕು ಎಂದು ಅವರು ತಿಳಿಸಿದರು. 

ಜಿಲ್ಲೆಯ ರೈತರು ಹೆಚ್ಚು ಶ್ರಮಜೀವಿಗಳು. ಹಾಲು, ತರಕಾರಿ ಹಾಗೂ ಹಣ್ಣುಗಳನ್ನು ಬೆಳೆಯುತ್ತಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸ ಸರ್ಕಾರ ಮಾಡಿದರೆ ದೇಶದಲ್ಲಿ ಮೊದಲನೇ ಸ್ಥಾನಕ್ಕೆ ಬರುತ್ತಾರೆ. ಜಿಲ್ಲೆಯಲ್ಲಿ ಹೆಚ್ಚು ಎಫ್.ಇ.ಒ ಗಳು ಮತ್ತು ಕೋಲ್ಡ್‌ ಸ್ಟೋರೇಜ್ಗಳನ್ನು ಸ್ಥಾಪಿಸಿದರೆ ರೈತರು ಬೆಳೆದ ತರಕಾರಿ ಹಣ್ಣುಗಳನ್ನು ದಾಸ್ತಾನು ಮಾಡಿ ರಫ್ತು ಮಾಡಬಹುದು. ಇದರಿಂದ ರೈತರ ಆದಾಯ ದ್ವಿಗುಣವಾಗಿ ಅವರ ಜೀವನ ಅಭಿವೃದ್ಧಿ ಹೊಂದುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳ ಪ್ರಯೋಜನೆಗಳನ್ನು ರೈತರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. 

ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಹೆಚ್.ನಾಗೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯ ಪ್ರತಿಯೊಂದು ಕೆರೆಯು ವರ್ಷದ 360 ದಿನಗಳು ತುಂಬಿರಬೇಕು. ಅಂತರ್ಜಲ ವೃದ್ಧಿಸಿ ಜಿಲ್ಲೆಯು ಸದಾ ಹಸಿರುಮಯವಾಗಿರಬೇಕು. ಜಿಲ್ಲೆಯಲ್ಲಿ ಕೆ.ಸಿ.ವ್ಯಾಲಿ ನೀರಿನಿಂದ 121 ಕೆರೆಗಳು ಹಾಗೂ 100 ಚೆಕ್ ಡ್ಯಾಮ್‍ಗಳು ತುಂಬಿದೆ. ಮಳೆಯು ಚೆನ್ನಾಗಿ ಆಗುತ್ತಿರುವುದರಿಂದ ಮತ್ತು ಕೆಸಿ ವ್ಯಾಲಿ ನೀರಿನಿಂದ ಜಿಲ್ಲೆಯ ರೈತರಿಗೆ ತುಂಬಾ ಅನುಕೂಲವಾಗಿದೆ ಎರಡನೇ ಹಂತದಲ್ಲಿ 277 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ ಎಂದು ತಿಳಿಸಿದರು.

ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ಮಾತನಾಡಿ. ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ  ಕೆ.ಸಿ.ವ್ಯಾಲಿ ಮತ್ತು ಮಳೆಯಿಂದ ಸುಮಾರು ಕೆರೆಗಳು ತುಂಬಿವೆ. ಜಿಲ್ಲೆಯಲ್ಲಿ 2,500 ಕೆರೆಗಳಿವೆ ಕೆ.ಸಿ.ವ್ಯಾಲಿ ಯೋಜನೆಯ 2ನೇ ಹಂತದಲ್ಲಿ ಜಿಲ್ಲೆಯ 277 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಇಡೀ ಏಷ್ಯಾದಲ್ಲಿ ದೊಡ್ಡದಾದ ಟೊಮ್ಯಾಟೋ ಮತ್ತು ಮಾವಿನ ಹಣ್ಣಿನ ಮಾರುಕಟ್ಟೆಗಳು ಜಿಲ್ಲೆಯಲ್ಲಿವೆ. ಕೆ.ಸಿ.ವ್ಯಾಲಿ ನೀರನ್ನು 400ಎಂ.ಎಲ್.ಡಿ ಗಿಂತ ಹೆಚ್ಚಾಗಿ ಜಿಲ್ಲೆಯ ಕೆರೆಗಳಿಗೆ ಹರಿಸಿ ಹಾಗೂ ಮೇಕೆ ದಾಟು ಯೋಜನೆಯನ್ನು ಪ್ರಾಂಭಿಸಿದರೆ ಬಂಗಾರಪೇಟೆ ಮತ್ತು ಮಾಲೂರು ಜನರಿಗೆ ಕುಡಿಯುವ ನೀರಿಗೆ ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು. 

ವಿಧಾನ ಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಅವರು ಮಾತನಾಡಿ, ಜಿಲ್ಲೆಯಲ್ಲಿ ರೈತರು ಸುಮಾರು ಸಾವಿರ ಅಡಿಗಳಿಂದ ನೀರು ತಂದು ತರಕಾರಿ, ಹಣ್ಣುಗಳನ್ನು ಬೆಳೆದು ವಿವಿಧ ಜಿಲ್ಲೆಗಳಿಗೆ ರಫ್ತು ಮಾಡುತ್ತಿದ್ದಾರೆ. ಜಿಲ್ಲೆಯ ಜನತೆಗೆ ಅನುಕೂಲವಾಗುವಂತೆ ಯರಗೊಳ್ ಡ್ಯಾಮ್, 2ನೇ ಹಂತದ ಕೆ.ಸಿ.ವ್ಯಾಲಿ ಯೋಜನೆ ಮತ್ತು ಎತ್ತಿನಹೊಳೆ ಯೋಜನೆಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ ಎಂದು ಸಚಿವರಲ್ಲಿ ಮನವಿ ಮಾಡಿದರು.

ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಶ್ರೀನಿವಾಸಗೌಡ ಅವರು ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 21 ವರ್ಷಗಳಿಂದ ಕೆರೆಗಳು ತುಂಬಿರಲಿಲ್ಲ ಆದರೆ ಈಗ ಕೆ.ಸಿ ವ್ಯಾಲಿ ನೀರಿನಿಂದ ಎಲ್ಲಾ ಕೆರೆಗಳು ತುಂಬುತ್ತಿವೆ. ಕೆರೆಗಳು ತುಂಬಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತಿದ್ದು ರೈತರಿಗೆ ವ್ಯವಸಾಯ ಮಾಡಲು ತುಂಬಾ ಅನುಕೂಲವಾಗಿದೆ ಎಂದು ತಿಳಿಸಿದರು.

ಸಚಿವರು ಮುಳಬಾಗಿಲು ತಾಲ್ಲೂಕಿನ, ಹೊಳಲಿ ಕೆರೆ ಪಂಪ್‍ಹೌಸ್‍ನಿಂದ ನೀರನ್ನು ಎತ್ತುವಳಿ ಮಾಡಿ 32 ಕೆರೆಗಳನ್ನು ತುಂಬಿಸುವ ಕಾಮಗಾರಿಗೆ ಚಾಲನೆ ಮತ್ತು ಜಮ್ಮನಹಳ್ಳಿ ಕೆರೆಗೆ ಬಾಗಿನ ಅರ್ಪಿಸಿದರು.

ಈ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮೃತ್ಯುಂಜಯಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ಅಪರ ಜಿಲ್ಲಾಧಿಕಾರಿ ಡಾ.ಸ್ನೇಹಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಓಂಶಕ್ತಿ ಚಲಪತಿ ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……..

ರಾಜಕೀಯ

ಬಿಜೆಪಿಯವರ ಮಾತು ನಂಬಿ ಉದ್ಯೋಗಾಂಕ್ಷಿಗಳು FIR ಹಾಕಿಸಿಕೊಳ್ಳಬೇಡಿ: ಶಾಸಕ ಪ್ರದೀಪ್ ಈಶ್ವರ್

ಬಿಜೆಪಿಯವರ ಮಾತು ನಂಬಿ ಉದ್ಯೋಗಾಂಕ್ಷಿಗಳು FIR ಹಾಕಿಸಿಕೊಳ್ಳಬೇಡಿ: ಶಾಸಕ ಪ್ರದೀಪ್ ಈಶ್ವರ್

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಉದ್ಯೋಗ ನೇಮಕಾತಿ ಮಾಡಬೇಕೆಂಬುದು ನೆನಪಿಗೆ ಬರಲಿಲ್ಲ. ಅಶೋಕಣ್ಣ, ಬೆಲ್ಲದ್ ಅವರು ಪ್ರತಿಭಟನೆಗೆ ಹೋಗುತ್ತಾರೆ. ನಿಮ್ಮ ಸರಕಾರ ಇದ್ದಾಗ ಯಾಕೆ ನೇಮಕಾತಿ ಮಾಡಿಕೊಂಡಿಲ್ಲ? ಯಡಿಯೂರಪ್ಪ, ಬೊಮ್ಮಾಯಿ ಇದ್ದಾಗ ಯಾಕೆ ನೇಮಕಾತಿ ಮಾಡಿಲ್ಲ:

[ccc_my_favorite_select_button post_id="119762"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!