ಸೇವಾಸಿಂಧು ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಿರಿ: ನ್ಯಾ.ಭೈರಪ್ಪ ಶಿವಲಿಂಗ ನಾಯಿಕ

ಚಿಕ್ಕಬಳ್ಳಾಪುರ: ಅಸಂಘಟಿತ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಆ ಸೌಲಭ್ಯಗಳನ್ನು ಸೇವಾಸಿಂಧು ತಂತ್ರಾಂಶದಲ್ಲಿ ನೊಂದಣಿ ಮಾಡಿಸಿಕೋಳ್ಳುವ ಮೂಲಕ  ಕಾರ್ಮಿಕರು  ಸದ್ವಿನಿಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಭೈರಪ್ಪ ಶಿವಲಿಂಗ ನಾಯಿಕ ಅವರು ಮನವಿ ಮಾಡಿದರು.

ಅವರು ಶುಕ್ರವಾರ ಜಿಲ್ಲಾ ನ್ಯಾಯಾಲಯದಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ  ಹಮ್ಮಿಕೊಂಡಿದ್ದ  ಅಸಂಘಟಿತ ವಲಯದ ಕಾರ್ಮಿಕರ ಹಕ್ಕುಗಳ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.

ಇ-ಶ್ರಮ್ ಯೋಜನೆ ಅಡಿಯಲ್ಲಿ ನೊಂದಣಿ ಮಾಡಿಸಿಕೊಂಡರೆ 1 ವರ್ಷಕ್ಕೆ ಪಿ.ಎಂ.ಎಸ್,ಬಿ.ವೈ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.  ಕೆಲಸದ ಸಂದರ್ಭದಲ್ಲಿ ಕಾರ್ಮಿಕರ ಆಕಸ್ಮಿಕ ಸಾವು ಸಂಭವಿಸಿದಾಗ 2 ಲಕ್ಷ ಹಣವನ್ನು ನೀಡಲಾಗುತ್ತದೆ,ಅಂಗವೈಕಲ್ಯಕ್ಕೆ 1 ಲಕ್ಷ ಹಣವನ್ನು ನೀಡಲಾಗುತ್ತದೆ ಎಂದರು.

ನೊಂದಣಿ ಹೇಗೆ: ಜಿಲ್ಲೆಯಾದ್ಯಂತ 170  ಸಾಮಾನ್ಯ ಸೇವಾ ಕೇಂದ್ರಗಳಿವೆ.16 ರಿಂದ 59 ವರ್ಷದೊಳಗಿನ ವಯೋಮಾನದವರು   ಆಧಾರ್  ಕಾರ್ಡ್ ,ಸಕ್ರಿಯ ಬ್ಯಾಂಕ್ ಖಾತೆ ಪಾಸ್ ಬುಕ್ ಮತ್ತು ಸಕ್ರಿಯ ದೂರವಾಣಿ ಸಂಖ್ಯೆಯೊಂದಿಗೆ  ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಉಚಿತವಾಗಿ   ನೋಂದಣಿ ಮಾಡಿಸಿಕೊಳ್ಳಬಹುದು.ಅಥವಾ ಕಾರ್ಮಿಕರೇ ನೇರವಾಗಿ  ಸೇವಾಸಿಂಧು ತಂತ್ರಾಂಶದ ಮೂಲಕ  ನೊಂದಣಿ ಮಾಡಿಕೊಳ್ಳಬಹುದು ಇಲ್ಲವೇ ಜಿಲ್ಲಾ, ತಾಲ್ಲೂಕು ಮಟ್ಟದ ಕಾರ್ಮಿಕ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದು ನೊಂದಣಿ ಮಾಡಿಕೊಳ್ಳಬಹುದು ಎಂದರು.  

ಅನುಕೂಲಗಳೇನು: ಅಸಂಘಟಿತ ಕಾರ್ಮಿಕರು ನೊಂದಣಿಯಾಗಿದ್ದರೆ ಸರ್ಕಾರದ ಎಲ್ಲಾ  ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು dbt ಮುಖಾಂತರ  ಪಡೆಯಬಹುದು ಹಾಗೂ ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸದೆ ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನ ಪಡೆಯಬಹುದು . ಉಚಿತ ಆರೋಗ್ಯ ಸೇವೆ,ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣಕಾಸಿನ ನೆರವು, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಾಲ ಸೌಲಭ್ಯ, ವಿವಾಹ  ಸಹಾಯ ಧನ, ಪಿಂಚಣಿ  ಸೌಲಭ್ಯಗಳನ್ನು  ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯಾದರ್ಶಿಯಾದ ಲಕ್ಷ್ಮೀಕಾಂತ್ ಜೆ.ಮಿಸ್ಕಿನ್  ಅವರು ಮಾತನಾಡಿ,ಅಸಂಘಟಿತ ಕಾರ್ಮಿಕರ ಕಲ್ಯಾಣ ದೃಷ್ಟಿಯಿಂದ ಅಸಂಘಟಿತ ಕೆಲಸಗಾರರ ಸಾಮಾಜಿಕ ಭದ್ರತಾ ಅಧಿನಿಯಮ  ಜಾರಿಗೆ ಬಂದಿದೆ. ಕಾನೂನು ಜಾರಿಯಾದರೂ ಅಸಂಘಟಿತ ಕಾರ್ಮಿಕರಿಗೆ ಕಾನೂನಿನ ಅರಿವಿನ ಕೊರತೆಯಿಂದ ಬಹಳಷ್ಟು ಅಸಂಘಟಿತ ಕಾರ್ಮಿಕರು ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ, ಕರೊನಾ ಸಂದರ್ಭದಲ್ಲಿ ಎಲ್ಲಾ ಕೆಲಸ ಕಾರ್ಯಗಳು ಸ್ತಬ್ದವಾಗಿದ್ದವು. ಇದರಿಂದ ಜೀವನ ನಡೆಸುವುದು ತುಂಬಾ ಕಷ್ಟವಾಯಿತು ಅದರಲ್ಲೂ ಅಸಂಘಟಿತ ಕಾರ್ಮಿಕರು ಸ್ಥಿತಿ  ದುಸ್ತರವಾಗಿತ್ತು  . ಕೋವಿಡ್ ನಿಂದ  ಹೆಚ್ಚಿಗೆ ತೊಂದರೆಗೆ ಒಳಗಾದವರು ಅಸಂಘಟಿತ ವಲಯದ ಕಾರ್ಮಿಕರೇ ಆಗಿದ್ದಾರೆ. ಕನಿಷ್ಠ ಮಟ್ಟದ ಜೀವನ ಸಾಗಿಸಲು ಕಾರ್ಮಿಕರು ಕಠಿಣ ಶ್ರಮವಹಿಸಿ ದುಡಿಯುತ್ತಾರೆ. ಅಂತಹವರಿಗಾಗಿ ಸರ್ಕಾರ ವಿಶೇಷ ಕಲ್ಯಾಣ  ಕಾರ್ಯಕ್ರಮಗಳನ್ನು  ಜಾರಿಗೆ ತಂದಿದೆ. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ಸಿಗುವಂತಾಗಬೇಕು ಎಂದರು.

ಸೇವಾಸಿಂಧು ತಂತ್ರಾಂಶದಲ್ಲಿ  ಕಾರ್ಮಿಕರು  ನೊಂದಣಿಯಾಗಿದ್ದರೆ ಸರ್ಕಾರದ ಎಲ್ಲಾ  ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು dbt ಮುಖಾಂತರ  ಪಡೆಯಬಹುದು. ಸೌಲಭ್ಯ ಪಡೆಯಲು ಬೇರೆ ಯಾರನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ನೇರವಾಗಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದು ತಲುಪುತ್ತದೆ ಎಂದರು. ಈ ವೇಳೆ ನೋಂದಣಿಯಾಗಿರುವ ಅಸಂಘಟಿತ ಕಾರ್ಮಿಕರಿಗೆ ನೋಂದಣಿ ಪತ್ರ,ಸ್ಮಾರ್ಟ್ ಕಾರ್ಡನ್ನು ,ಕೋವಿಡ್  ಸುರಕ್ಷತಾ ಕಿಟ್ ಗಳನ್ನು  ನ್ಯಾಯಾಧೀಶರು ವಿತರಿಸಿದರು.

ಕಾರ್ಮಿಕ ನೀರೀಕ್ಷಕರಾದ ಮಂಜುಳ ಅವರು ಮಾತನಾಡಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಕಲ್ಯಾಣ ಭದ್ರತಾ ಮಂಡಳಿಯಿಂದ ಅಸಂಘಟಿತ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ಒದಗಿಸಿ ಕೊಡಲಾಗುತ್ತಿದೆ. ಸಂಘಟಿತ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರಿಗೆ ESI, PF ಸೌಲಭ್ಯವಿರುತ್ತದೆ. ಅಸಂಘಟಿತ ಕಾರ್ಮಿಕರು ಇದರಿಂದ ವಂಚಿತರಾಗುತ್ತಾರೆ.ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡೇಟಾಬೇಸ್ ನಲ್ಲಿ ನೊಂದಣಿ ಆದರೆ, ರಾಜ್ಯ  ಮತ್ತು ಕೇಂದ್ರ ಸರ್ಕಾರದ ಯಾವುದೇ  ಪರಿಹಾರ ಕುರಿತು ಆದೇಶವಾದರೆ ಆ ಯೋಜನೆಗಳ ಸೌಲಭ್ಯವನ್ನು ಸಹ ಕಾರ್ಮಿಕರು ನೇರವಾಗಿ ಪಡೆಯಬಹುದು ಎಂದರು. 

ಕಾರ್ಯಕ್ರಮದಲ್ಲಿ, ವಕೀಲರಾದ ಎಸ್ ಸುದರ್ಶನ್ ಮತ್ತು ಕೆ.ಸಿ ಪ್ರಕಾಶ್ ಅಸಂಘಟಿತ ಕಾರ್ಮಿಕರ ಹಕ್ಕುಗಳ ಬಗ್ಗೆ ತಿಳಿಸಿಕೊಟ್ಟರು. ಅಸಂಘಟಿತ ಕಾರ್ಮಿಕರು ಹಾಗೂ ಅಧಿಕಾರಿಗಳು/ಸಿಬ್ಬಂದಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಜೆಡಿಎಸ್ ಜೊತೆ ಮೈತ್ರಿಯಿಂದ ಬಿಜೆಪಿಗೆ ಅನುಕೂಲ.. ಆದ್ರೆ ಅಪ್ಪಾ-ಮಗ ದೂರ ಮಾಡುತ್ತಿದ್ದಾರೆ; ಯತ್ನಾಳ್

ಜೆಡಿಎಸ್ ಜೊತೆ ಮೈತ್ರಿಯಿಂದ ಬಿಜೆಪಿಗೆ ಅನುಕೂಲ.. ಆದ್ರೆ ಅಪ್ಪಾ-ಮಗ ದೂರ ಮಾಡುತ್ತಿದ್ದಾರೆ; ಯತ್ನಾಳ್

ನಿನ್ನೆ ಪೂಜ್ಯ ತಂದೆ ಹೇಳಿದ್ದಾನೆ ಅಲ್ವಾ, ನಮ್ಮ (BJP) ಸ್ವಂತ ಬಲದ ಮೇಲೆ ಸರ್ಕಾರ ಬರುತ್ತೆ ಅಂತ. ಅಂದರೇನು ಜೆಡಿಎಸ್ನ ಬಿಜೆಪಿಯಿಂದ ಅಪ್ಪಾ- ಮಗ (ಯಡಿಯೂರಪ್ಪ, ವಿಜಯೇಂದ್ರ) ದೂರ ಮಾಡ್ತಾ ಇದ್ದಾರೆ; ಶಾಸಕ ಬಸನಗೌಡ

[ccc_my_favorite_select_button post_id="119659"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!