ಸೇವಾಸಿಂಧು ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಿರಿ: ನ್ಯಾ.ಭೈರಪ್ಪ ಶಿವಲಿಂಗ ನಾಯಿಕ

ಚಿಕ್ಕಬಳ್ಳಾಪುರ: ಅಸಂಘಟಿತ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಆ ಸೌಲಭ್ಯಗಳನ್ನು ಸೇವಾಸಿಂಧು ತಂತ್ರಾಂಶದಲ್ಲಿ ನೊಂದಣಿ ಮಾಡಿಸಿಕೋಳ್ಳುವ ಮೂಲಕ  ಕಾರ್ಮಿಕರು  ಸದ್ವಿನಿಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಭೈರಪ್ಪ ಶಿವಲಿಂಗ ನಾಯಿಕ ಅವರು ಮನವಿ ಮಾಡಿದರು.

ಅವರು ಶುಕ್ರವಾರ ಜಿಲ್ಲಾ ನ್ಯಾಯಾಲಯದಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ  ಹಮ್ಮಿಕೊಂಡಿದ್ದ  ಅಸಂಘಟಿತ ವಲಯದ ಕಾರ್ಮಿಕರ ಹಕ್ಕುಗಳ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.

ಇ-ಶ್ರಮ್ ಯೋಜನೆ ಅಡಿಯಲ್ಲಿ ನೊಂದಣಿ ಮಾಡಿಸಿಕೊಂಡರೆ 1 ವರ್ಷಕ್ಕೆ ಪಿ.ಎಂ.ಎಸ್,ಬಿ.ವೈ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.  ಕೆಲಸದ ಸಂದರ್ಭದಲ್ಲಿ ಕಾರ್ಮಿಕರ ಆಕಸ್ಮಿಕ ಸಾವು ಸಂಭವಿಸಿದಾಗ 2 ಲಕ್ಷ ಹಣವನ್ನು ನೀಡಲಾಗುತ್ತದೆ,ಅಂಗವೈಕಲ್ಯಕ್ಕೆ 1 ಲಕ್ಷ ಹಣವನ್ನು ನೀಡಲಾಗುತ್ತದೆ ಎಂದರು.

ನೊಂದಣಿ ಹೇಗೆ: ಜಿಲ್ಲೆಯಾದ್ಯಂತ 170  ಸಾಮಾನ್ಯ ಸೇವಾ ಕೇಂದ್ರಗಳಿವೆ.16 ರಿಂದ 59 ವರ್ಷದೊಳಗಿನ ವಯೋಮಾನದವರು   ಆಧಾರ್  ಕಾರ್ಡ್ ,ಸಕ್ರಿಯ ಬ್ಯಾಂಕ್ ಖಾತೆ ಪಾಸ್ ಬುಕ್ ಮತ್ತು ಸಕ್ರಿಯ ದೂರವಾಣಿ ಸಂಖ್ಯೆಯೊಂದಿಗೆ  ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಉಚಿತವಾಗಿ   ನೋಂದಣಿ ಮಾಡಿಸಿಕೊಳ್ಳಬಹುದು.ಅಥವಾ ಕಾರ್ಮಿಕರೇ ನೇರವಾಗಿ  ಸೇವಾಸಿಂಧು ತಂತ್ರಾಂಶದ ಮೂಲಕ  ನೊಂದಣಿ ಮಾಡಿಕೊಳ್ಳಬಹುದು ಇಲ್ಲವೇ ಜಿಲ್ಲಾ, ತಾಲ್ಲೂಕು ಮಟ್ಟದ ಕಾರ್ಮಿಕ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದು ನೊಂದಣಿ ಮಾಡಿಕೊಳ್ಳಬಹುದು ಎಂದರು.  

ಅನುಕೂಲಗಳೇನು: ಅಸಂಘಟಿತ ಕಾರ್ಮಿಕರು ನೊಂದಣಿಯಾಗಿದ್ದರೆ ಸರ್ಕಾರದ ಎಲ್ಲಾ  ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು dbt ಮುಖಾಂತರ  ಪಡೆಯಬಹುದು ಹಾಗೂ ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸದೆ ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನ ಪಡೆಯಬಹುದು . ಉಚಿತ ಆರೋಗ್ಯ ಸೇವೆ,ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣಕಾಸಿನ ನೆರವು, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಾಲ ಸೌಲಭ್ಯ, ವಿವಾಹ  ಸಹಾಯ ಧನ, ಪಿಂಚಣಿ  ಸೌಲಭ್ಯಗಳನ್ನು  ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯಾದರ್ಶಿಯಾದ ಲಕ್ಷ್ಮೀಕಾಂತ್ ಜೆ.ಮಿಸ್ಕಿನ್  ಅವರು ಮಾತನಾಡಿ,ಅಸಂಘಟಿತ ಕಾರ್ಮಿಕರ ಕಲ್ಯಾಣ ದೃಷ್ಟಿಯಿಂದ ಅಸಂಘಟಿತ ಕೆಲಸಗಾರರ ಸಾಮಾಜಿಕ ಭದ್ರತಾ ಅಧಿನಿಯಮ  ಜಾರಿಗೆ ಬಂದಿದೆ. ಕಾನೂನು ಜಾರಿಯಾದರೂ ಅಸಂಘಟಿತ ಕಾರ್ಮಿಕರಿಗೆ ಕಾನೂನಿನ ಅರಿವಿನ ಕೊರತೆಯಿಂದ ಬಹಳಷ್ಟು ಅಸಂಘಟಿತ ಕಾರ್ಮಿಕರು ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ, ಕರೊನಾ ಸಂದರ್ಭದಲ್ಲಿ ಎಲ್ಲಾ ಕೆಲಸ ಕಾರ್ಯಗಳು ಸ್ತಬ್ದವಾಗಿದ್ದವು. ಇದರಿಂದ ಜೀವನ ನಡೆಸುವುದು ತುಂಬಾ ಕಷ್ಟವಾಯಿತು ಅದರಲ್ಲೂ ಅಸಂಘಟಿತ ಕಾರ್ಮಿಕರು ಸ್ಥಿತಿ  ದುಸ್ತರವಾಗಿತ್ತು  . ಕೋವಿಡ್ ನಿಂದ  ಹೆಚ್ಚಿಗೆ ತೊಂದರೆಗೆ ಒಳಗಾದವರು ಅಸಂಘಟಿತ ವಲಯದ ಕಾರ್ಮಿಕರೇ ಆಗಿದ್ದಾರೆ. ಕನಿಷ್ಠ ಮಟ್ಟದ ಜೀವನ ಸಾಗಿಸಲು ಕಾರ್ಮಿಕರು ಕಠಿಣ ಶ್ರಮವಹಿಸಿ ದುಡಿಯುತ್ತಾರೆ. ಅಂತಹವರಿಗಾಗಿ ಸರ್ಕಾರ ವಿಶೇಷ ಕಲ್ಯಾಣ  ಕಾರ್ಯಕ್ರಮಗಳನ್ನು  ಜಾರಿಗೆ ತಂದಿದೆ. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ಸಿಗುವಂತಾಗಬೇಕು ಎಂದರು.

ಸೇವಾಸಿಂಧು ತಂತ್ರಾಂಶದಲ್ಲಿ  ಕಾರ್ಮಿಕರು  ನೊಂದಣಿಯಾಗಿದ್ದರೆ ಸರ್ಕಾರದ ಎಲ್ಲಾ  ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು dbt ಮುಖಾಂತರ  ಪಡೆಯಬಹುದು. ಸೌಲಭ್ಯ ಪಡೆಯಲು ಬೇರೆ ಯಾರನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ನೇರವಾಗಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದು ತಲುಪುತ್ತದೆ ಎಂದರು. ಈ ವೇಳೆ ನೋಂದಣಿಯಾಗಿರುವ ಅಸಂಘಟಿತ ಕಾರ್ಮಿಕರಿಗೆ ನೋಂದಣಿ ಪತ್ರ,ಸ್ಮಾರ್ಟ್ ಕಾರ್ಡನ್ನು ,ಕೋವಿಡ್  ಸುರಕ್ಷತಾ ಕಿಟ್ ಗಳನ್ನು  ನ್ಯಾಯಾಧೀಶರು ವಿತರಿಸಿದರು.

ಕಾರ್ಮಿಕ ನೀರೀಕ್ಷಕರಾದ ಮಂಜುಳ ಅವರು ಮಾತನಾಡಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಕಲ್ಯಾಣ ಭದ್ರತಾ ಮಂಡಳಿಯಿಂದ ಅಸಂಘಟಿತ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ಒದಗಿಸಿ ಕೊಡಲಾಗುತ್ತಿದೆ. ಸಂಘಟಿತ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರಿಗೆ ESI, PF ಸೌಲಭ್ಯವಿರುತ್ತದೆ. ಅಸಂಘಟಿತ ಕಾರ್ಮಿಕರು ಇದರಿಂದ ವಂಚಿತರಾಗುತ್ತಾರೆ.ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡೇಟಾಬೇಸ್ ನಲ್ಲಿ ನೊಂದಣಿ ಆದರೆ, ರಾಜ್ಯ  ಮತ್ತು ಕೇಂದ್ರ ಸರ್ಕಾರದ ಯಾವುದೇ  ಪರಿಹಾರ ಕುರಿತು ಆದೇಶವಾದರೆ ಆ ಯೋಜನೆಗಳ ಸೌಲಭ್ಯವನ್ನು ಸಹ ಕಾರ್ಮಿಕರು ನೇರವಾಗಿ ಪಡೆಯಬಹುದು ಎಂದರು. 

ಕಾರ್ಯಕ್ರಮದಲ್ಲಿ, ವಕೀಲರಾದ ಎಸ್ ಸುದರ್ಶನ್ ಮತ್ತು ಕೆ.ಸಿ ಪ್ರಕಾಶ್ ಅಸಂಘಟಿತ ಕಾರ್ಮಿಕರ ಹಕ್ಕುಗಳ ಬಗ್ಗೆ ತಿಳಿಸಿಕೊಟ್ಟರು. ಅಸಂಘಟಿತ ಕಾರ್ಮಿಕರು ಹಾಗೂ ಅಧಿಕಾರಿಗಳು/ಸಿಬ್ಬಂದಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]