ಸೇವಾಸಿಂಧು ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಿರಿ: ನ್ಯಾ.ಭೈರಪ್ಪ ಶಿವಲಿಂಗ ನಾಯಿಕ

ಚಿಕ್ಕಬಳ್ಳಾಪುರ: ಅಸಂಘಟಿತ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಆ ಸೌಲಭ್ಯಗಳನ್ನು ಸೇವಾಸಿಂಧು ತಂತ್ರಾಂಶದಲ್ಲಿ ನೊಂದಣಿ ಮಾಡಿಸಿಕೋಳ್ಳುವ ಮೂಲಕ  ಕಾರ್ಮಿಕರು  ಸದ್ವಿನಿಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಭೈರಪ್ಪ ಶಿವಲಿಂಗ ನಾಯಿಕ ಅವರು ಮನವಿ ಮಾಡಿದರು.

ಅವರು ಶುಕ್ರವಾರ ಜಿಲ್ಲಾ ನ್ಯಾಯಾಲಯದಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ  ಹಮ್ಮಿಕೊಂಡಿದ್ದ  ಅಸಂಘಟಿತ ವಲಯದ ಕಾರ್ಮಿಕರ ಹಕ್ಕುಗಳ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.

ಇ-ಶ್ರಮ್ ಯೋಜನೆ ಅಡಿಯಲ್ಲಿ ನೊಂದಣಿ ಮಾಡಿಸಿಕೊಂಡರೆ 1 ವರ್ಷಕ್ಕೆ ಪಿ.ಎಂ.ಎಸ್,ಬಿ.ವೈ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.  ಕೆಲಸದ ಸಂದರ್ಭದಲ್ಲಿ ಕಾರ್ಮಿಕರ ಆಕಸ್ಮಿಕ ಸಾವು ಸಂಭವಿಸಿದಾಗ 2 ಲಕ್ಷ ಹಣವನ್ನು ನೀಡಲಾಗುತ್ತದೆ,ಅಂಗವೈಕಲ್ಯಕ್ಕೆ 1 ಲಕ್ಷ ಹಣವನ್ನು ನೀಡಲಾಗುತ್ತದೆ ಎಂದರು.

ನೊಂದಣಿ ಹೇಗೆ: ಜಿಲ್ಲೆಯಾದ್ಯಂತ 170  ಸಾಮಾನ್ಯ ಸೇವಾ ಕೇಂದ್ರಗಳಿವೆ.16 ರಿಂದ 59 ವರ್ಷದೊಳಗಿನ ವಯೋಮಾನದವರು   ಆಧಾರ್  ಕಾರ್ಡ್ ,ಸಕ್ರಿಯ ಬ್ಯಾಂಕ್ ಖಾತೆ ಪಾಸ್ ಬುಕ್ ಮತ್ತು ಸಕ್ರಿಯ ದೂರವಾಣಿ ಸಂಖ್ಯೆಯೊಂದಿಗೆ  ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಉಚಿತವಾಗಿ   ನೋಂದಣಿ ಮಾಡಿಸಿಕೊಳ್ಳಬಹುದು.ಅಥವಾ ಕಾರ್ಮಿಕರೇ ನೇರವಾಗಿ  ಸೇವಾಸಿಂಧು ತಂತ್ರಾಂಶದ ಮೂಲಕ  ನೊಂದಣಿ ಮಾಡಿಕೊಳ್ಳಬಹುದು ಇಲ್ಲವೇ ಜಿಲ್ಲಾ, ತಾಲ್ಲೂಕು ಮಟ್ಟದ ಕಾರ್ಮಿಕ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದು ನೊಂದಣಿ ಮಾಡಿಕೊಳ್ಳಬಹುದು ಎಂದರು.  

ಅನುಕೂಲಗಳೇನು: ಅಸಂಘಟಿತ ಕಾರ್ಮಿಕರು ನೊಂದಣಿಯಾಗಿದ್ದರೆ ಸರ್ಕಾರದ ಎಲ್ಲಾ  ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು dbt ಮುಖಾಂತರ  ಪಡೆಯಬಹುದು ಹಾಗೂ ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸದೆ ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನ ಪಡೆಯಬಹುದು . ಉಚಿತ ಆರೋಗ್ಯ ಸೇವೆ,ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣಕಾಸಿನ ನೆರವು, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಾಲ ಸೌಲಭ್ಯ, ವಿವಾಹ  ಸಹಾಯ ಧನ, ಪಿಂಚಣಿ  ಸೌಲಭ್ಯಗಳನ್ನು  ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯಾದರ್ಶಿಯಾದ ಲಕ್ಷ್ಮೀಕಾಂತ್ ಜೆ.ಮಿಸ್ಕಿನ್  ಅವರು ಮಾತನಾಡಿ,ಅಸಂಘಟಿತ ಕಾರ್ಮಿಕರ ಕಲ್ಯಾಣ ದೃಷ್ಟಿಯಿಂದ ಅಸಂಘಟಿತ ಕೆಲಸಗಾರರ ಸಾಮಾಜಿಕ ಭದ್ರತಾ ಅಧಿನಿಯಮ  ಜಾರಿಗೆ ಬಂದಿದೆ. ಕಾನೂನು ಜಾರಿಯಾದರೂ ಅಸಂಘಟಿತ ಕಾರ್ಮಿಕರಿಗೆ ಕಾನೂನಿನ ಅರಿವಿನ ಕೊರತೆಯಿಂದ ಬಹಳಷ್ಟು ಅಸಂಘಟಿತ ಕಾರ್ಮಿಕರು ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ, ಕರೊನಾ ಸಂದರ್ಭದಲ್ಲಿ ಎಲ್ಲಾ ಕೆಲಸ ಕಾರ್ಯಗಳು ಸ್ತಬ್ದವಾಗಿದ್ದವು. ಇದರಿಂದ ಜೀವನ ನಡೆಸುವುದು ತುಂಬಾ ಕಷ್ಟವಾಯಿತು ಅದರಲ್ಲೂ ಅಸಂಘಟಿತ ಕಾರ್ಮಿಕರು ಸ್ಥಿತಿ  ದುಸ್ತರವಾಗಿತ್ತು  . ಕೋವಿಡ್ ನಿಂದ  ಹೆಚ್ಚಿಗೆ ತೊಂದರೆಗೆ ಒಳಗಾದವರು ಅಸಂಘಟಿತ ವಲಯದ ಕಾರ್ಮಿಕರೇ ಆಗಿದ್ದಾರೆ. ಕನಿಷ್ಠ ಮಟ್ಟದ ಜೀವನ ಸಾಗಿಸಲು ಕಾರ್ಮಿಕರು ಕಠಿಣ ಶ್ರಮವಹಿಸಿ ದುಡಿಯುತ್ತಾರೆ. ಅಂತಹವರಿಗಾಗಿ ಸರ್ಕಾರ ವಿಶೇಷ ಕಲ್ಯಾಣ  ಕಾರ್ಯಕ್ರಮಗಳನ್ನು  ಜಾರಿಗೆ ತಂದಿದೆ. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ಸಿಗುವಂತಾಗಬೇಕು ಎಂದರು.

ಸೇವಾಸಿಂಧು ತಂತ್ರಾಂಶದಲ್ಲಿ  ಕಾರ್ಮಿಕರು  ನೊಂದಣಿಯಾಗಿದ್ದರೆ ಸರ್ಕಾರದ ಎಲ್ಲಾ  ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು dbt ಮುಖಾಂತರ  ಪಡೆಯಬಹುದು. ಸೌಲಭ್ಯ ಪಡೆಯಲು ಬೇರೆ ಯಾರನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ನೇರವಾಗಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದು ತಲುಪುತ್ತದೆ ಎಂದರು. ಈ ವೇಳೆ ನೋಂದಣಿಯಾಗಿರುವ ಅಸಂಘಟಿತ ಕಾರ್ಮಿಕರಿಗೆ ನೋಂದಣಿ ಪತ್ರ,ಸ್ಮಾರ್ಟ್ ಕಾರ್ಡನ್ನು ,ಕೋವಿಡ್  ಸುರಕ್ಷತಾ ಕಿಟ್ ಗಳನ್ನು  ನ್ಯಾಯಾಧೀಶರು ವಿತರಿಸಿದರು.

ಕಾರ್ಮಿಕ ನೀರೀಕ್ಷಕರಾದ ಮಂಜುಳ ಅವರು ಮಾತನಾಡಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಕಲ್ಯಾಣ ಭದ್ರತಾ ಮಂಡಳಿಯಿಂದ ಅಸಂಘಟಿತ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ಒದಗಿಸಿ ಕೊಡಲಾಗುತ್ತಿದೆ. ಸಂಘಟಿತ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರಿಗೆ ESI, PF ಸೌಲಭ್ಯವಿರುತ್ತದೆ. ಅಸಂಘಟಿತ ಕಾರ್ಮಿಕರು ಇದರಿಂದ ವಂಚಿತರಾಗುತ್ತಾರೆ.ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡೇಟಾಬೇಸ್ ನಲ್ಲಿ ನೊಂದಣಿ ಆದರೆ, ರಾಜ್ಯ  ಮತ್ತು ಕೇಂದ್ರ ಸರ್ಕಾರದ ಯಾವುದೇ  ಪರಿಹಾರ ಕುರಿತು ಆದೇಶವಾದರೆ ಆ ಯೋಜನೆಗಳ ಸೌಲಭ್ಯವನ್ನು ಸಹ ಕಾರ್ಮಿಕರು ನೇರವಾಗಿ ಪಡೆಯಬಹುದು ಎಂದರು. 

ಕಾರ್ಯಕ್ರಮದಲ್ಲಿ, ವಕೀಲರಾದ ಎಸ್ ಸುದರ್ಶನ್ ಮತ್ತು ಕೆ.ಸಿ ಪ್ರಕಾಶ್ ಅಸಂಘಟಿತ ಕಾರ್ಮಿಕರ ಹಕ್ಕುಗಳ ಬಗ್ಗೆ ತಿಳಿಸಿಕೊಟ್ಟರು. ಅಸಂಘಟಿತ ಕಾರ್ಮಿಕರು ಹಾಗೂ ಅಧಿಕಾರಿಗಳು/ಸಿಬ್ಬಂದಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!