ನಾಳೆ ಉದ್ದೀಚಿಕ್ಕನಹಳ್ಳಿಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್ ಟಿ.ಎಸ್.ಶಿವರಾಜ್ ಗ್ರಾಮ ವಾಸ್ತವ್ಯ ಫಿಕ್ಸ್

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮ ಅಕ್ಟೋಬರ್ 16ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿಯ ಮರಳುಕುಂಟೆ ಗ್ರಾಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಅರ್ಹರಿಗೆ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ ಹಾಗೂ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್  ಅಕ್ಟೋಬರ್ 16 ರಂದು ಬೆಳಿಗ್ಗೆ 11.00 ಗಂಟೆಗೆ ಮರಳುಕುಂಟೆ ಗ್ರಾಮಕ್ಕೆ ಆಗಮಿಸಿ, ಮರಳುಕುಂಟೆ ಗ್ರಾಮದ ಗ್ರಾಮದೇವತೆ ಮಾರಮ್ಮ ದೇವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, 11.30  ಗಂಟೆಗೆ ಹರಿಜನ ಕಾಲೋನಿಗೆ ಭೇಟಿ ನೀಡಿ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಹಾಗೂ ಮಳೆಯಿಂದ ಬಿದ್ದ ಮನೆಯ ಮಾಲಿಕರಿಗೆ ಪರಿಹಾರ ವಿತರಣೆ ಮಾಡಲಿದ್ದಾರೆ.

ನಂತರ ಮಧ್ಯಾಹ್ನ 12.30 ಗಂಟೆಗೆ ಮರಳುಕುಂಟೆ ಗ್ರಾಮದ ವಿಶೇಷ ವಿಕಲಚೇತನರಿಗೆ ಆದೇಶದ ಪ್ರತಿ ವಿತರಣೆ, ಶ್ರವಣ ಸಾಧನ, ಊರುಗೋಲು ಹಾಗೂ ವಿವಿಧ ಸಲಕರಣೆಗಳನ್ನು ವಿತರಿಸಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ ಮರಳುಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಲಿದ್ದಾರೆ.

ತದನಂತರ ಮಧ್ಯಾಹ್ನ 3.00 ಗಂಟೆಗೆ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಮರಳುಕುಂಟೆ ಗ್ರಾಮದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ ಮಾಡುವ ಕಾರ್ಯಕ್ರಮ ನಡೆಯಲಿದೆ.

ಸಂಜೆ 5.00 ಗಂಟೆಗೆ ಗ್ರಾಮ ವೀಕ್ಷಣೆಗೆ ತೆರಳಲಿದ್ದು, ರಾತ್ರಿ 7.30 ಗಂಟೆಗೆ ಮರಳುಕುಂಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಹಾಗೂ ಅಕ್ಟೋಬರ್ 17ರ ಬೆಳಿಗ್ಗೆ 8.00 ಗಂಟೆಗೆ ಮರಳುಕುಂಟೆ ಗ್ರಾಮದ ಹರಿಜನ ಕಾಲೋನಿಗೆ ಭೇಟಿ ನೀಡಿ, ಉಪಹಾರ ಸೇವಿಸಿ, ನಂತರ ಕೇಂದ್ರಸ್ಥಾನಕ್ಕೆ ಪ್ರಯಾಣಿಸಲಿದ್ದಾರೆ.

ಅದರಂತೆಯೇ ಅಕ್ಟೋಬರ್ 16 ರಂದು ದೇವನಹಳ್ಳಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಅವರು ಕುಂದಾಣ ಹೋಬಳಿಯ ಜಾಲಿಗೆ ಗ್ರಾಮದಲ್ಲಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಮಧುರೆ ಹೋಬಳಿಯ ಉದ್ದೀಚಿಕ್ಕನಹಳ್ಳಿ ಗ್ರಾಮದಲ್ಲಿ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ತಹಶೀಲ್ದಾರ್ ಗೀತಾ ಅವರು ಸೂಲಿಬೆಲೆ ಹೋಬಳಿಯ ಅತ್ತಿಬೆಲೆ ಗ್ರಾಮದಲ್ಲಿ ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಸವಲತ್ತುಗಳನ್ನು ವಿತರಣೆ ಮಾಡಿ, ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ  ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ‌ ತಿಳಿಸಿದೆ.

ತಿಮ್ಮಸಂದ್ರ ಗ್ರಾಮವಾಸ್ತವ್ಯ ಮುಂದೂಡಿಕೆ: ದೊಡ್ಡಬಳ್ಳಾಪುರ ತಾಲೂಕಿನ ತಹಶೀಲ್ದಾರರ ಗ್ರಾಮವಾಸ್ತವ್ಯದ ಗೊಂದಲ ಬಗೆ ಹರಿದಿದ್ದು, ಅಂತಿಮವಾಗಿ ಉದ್ದೀಚಿಕ್ಕನಹಳ್ಳಿಯಲ್ಲಿ ಗ್ರಾಮವಾಸ್ತವ್ಯ ನಡೆಸಲು ತಾಲೂಕು ಆಡಳಿತ ತೀರ್ಮಾನಿಸಿದೆ.

ಉದ್ದೀಚಿಕ್ಕನಹಳ್ಳಿ ಬದಲಾಗಿ ತಿಮ್ಮಸಂದ್ರದಲ್ಲಿ ನಡೆಯಬೇಕಿದ್ದ ಗ್ರಾಮವಾಸ್ತವ್ಯ ಕೆಲ ಆಡಳಿತಾತ್ಮಕ ಅನುಮೋದನೆ ದೊರಕದ ಹಿನ್ನೆಲೆಯಲ್ಲಿ ಉದ್ದೀಚಿಕ್ಕನಹಳ್ಳಿಯಲ್ಲಿಯೆ ನಡೆಯಲಿದೆ. ಮುಂದಿನ ಹಂತಗಳಲ್ಲಿ ಗ್ರಾಮ ವಾಸ್ತವ್ಯವನ್ನು ತಿಮ್ಮಸಂದ್ರದಲ್ಲಿ ನಡೆಸಲಾಗುವುದು ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮರದಲ್ಲಿ ನೇತಾಡುತ್ತಿದ್ದ ಮಾನವ ಬುರುಡೆಯ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಮರದಲ್ಲಿ ನೇತಾಡುತ್ತಿದ್ದ ಮಾನವ ಬುರುಡೆಯ ಗುರುತು ಪತ್ತೆ..!

ಕಳೆದ 6 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವನ ಬುರುಡೆ ಮರದಲ್ಲಿ ನೇತಾಡುವ ಸ್ಥಿತಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ (Doddaballapura) ನಗರದ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಬೆಳಕಿಗೆ ಬಂದಿದೆ.

[ccc_my_favorite_select_button post_id="119580"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!