ತನು-ಮನ ಸೆಳೆದ ವೈಭವಯುತ ಜಂಬೂಸವಾರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಕಾರ್ಯಕ್ರಮ ಶುಕ್ರವಾರ ಅರಮನೆ ಆವರಣದಲ್ಲಿ ಸಂಪ್ರದಾಯಕವಾಗಿ ಜರುಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಮನೆಯ ಬಲರಾಮ ದ್ವಾರದ ಬಳಿ ಸಂಜೆ 4.36 ರಿಂದ 4.46 ರೊಳಗೆ ಸಲ್ಲುವ ಮೀನ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆಸಲ್ಲಿಸಿದರು. ಬಳಿಕ ದಸರಾ ಮಹೋತ್ಸವದ ಕೇಂದ್ರಬಿಂದು ಜಂಬೂಸವಾರಿಯಲ್ಲಿ 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿ ಶ್ರೀ ಚಾಮುಂಡೇಶ್ವರಿಯ ವಿಗ್ರಹವನ್ನು ಎರಡನೇ ಬಾರಿಗೆ ಹೊತ್ತ ಅಭಿಮನ್ಯು, ತನ್ನ ಸಂಗಾತಿಗಳಾದ ಕಾವೇರಿ ಹಾಗೂ ಚೈತ್ರ ಜೊತೆಗೆ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತ ಸಂಜೆ 5.23ಕ್ಕೆ ವಿಶೇಷ ವೇದಿಕೆಗೆ ಬಂದಿತು.

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿನ್ನದ ಅಂಬಾರಿಯಲ್ಲಿ ಅಲಂಕೃತಗೊಂಡ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುತ್ತಿದ್ದಂತೆ ರಾಷ್ಟ್ರಗೀತೆ ಮೊಳಗಿತು. ಇದೇ ವೇಳೆಗೆ 52 ಸೆಕೆಂಡ್‌ಗಳಲ್ಲಿ 21 ಬಾರಿ ಕುಶಾಲತೋಪುಗಳನ್ನು ಅರಮನೆಯ ಹೊರಾವರಣದಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಸಿಡಿಸಿದರು.

ಬಳಿಕ ಅಂಬಾರಿ ಆನೆಯು ಪೊಲೀಸ್ ಅಶ್ವದಳ, ಕೆ‌ಎಸ್‌ಆರ್‌ಪಿ ಮೌಂಟೇನ್ ಕಂಪನಿ ಬೆಂಗಾವಲಿನಲ್ಲಿ ಸಾಗಿತು. ನೆರೆದಿದ್ದ ಜನರು ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಂಡು ಝೇಂಕಾರ ಘೋಷಗಳನ್ನು ಕೂಗಿದರು. 

ಮೆರವಣಿಗೆಯ ಆರಂಭದಲ್ಲಿ ನಿಶಾನೆ ಆನೆ ಧನಂಜಯ ಹಾಗೂ ಗೋಪಾಲಸ್ವಾಮಿ ನಡುವೆ ಅಶ್ವತ್ಥಾಮ ಆನೆಗಳು ಗಾಂಭೀರ್ಯದಿಂದ ಹೆಜ್ಜೆ ಹಾಕಿದವು. ಬಳಿಕ ನಾದಸ್ವರ ಮತ್ತು ಸ್ಯಾಕ್ಸೋಫೋನ್ ಕಲಾವಿದರು ಪ್ರದರ್ಶನ ನೀಡುತ್ತಾ ಸಾಗಿದರು. ನಾದಸ್ವರ, ವೀರಗಾಸೆ, ಚೆಂಡೆ ಮೇಳ, ಮರ ಗಾಲು ವೇಷ, ಚಿಲಿಪಿಲಿ ಗೊಂಬೆ ಕಲಾವಿದರು ಪ್ರದರ್ಶನ ನೀಡುತ್ತಾ ಎಲ್ಲರನ್ನು ರಂಜಿಸಿದರು.

ಗಮನಸೆಳೆದ ಕಲಾ ತಂಡಗಳು: ನಾದಸ್ವರ ವಿದ್ವಾನ್ ಆರ್. ನಾಗರಾಜ್ ಮತ್ತು ತಂಡ ಹಾಗೂ ಹಂಪಾಪುರ ಮಹದೇವ್ ತಂಡದಿಂದ ಸುಮಧುರವಾಗಿ ನಾದಸ್ವರ ನುಡಿಸುತ್ತಾ ಸಾಗಿದರು‌. ಮೈಸೂರಿನ ರತ್ನಮ್ಮ ತಂಡ, ಅಂಬಳೆ ಶಿವಣ್ಣ ತಂಡ, ನೀಲಕಂಠ ತಂಡ, ಆನಂದ್ ಕುಮಾರ್ ತಂಡ ಹೆಚ್.ಪಿ ರುದ್ರೇಶ್ ಹಾಗೂ ವೀರಭದ್ರೇಶ್ವರ ವೀರಗಾಸೆ ತಂಡದವರು ವೀರಗಾಸೆ ಕುಣಿತವಾಡುತ್ತ ಮುನ್ನೆಡೆದರು‌.

ಕೆಂಪಿಸಿದ್ದನಹುಂಡಿ ಮಹದೇವು, ಚಿಕ್ಕಮರಿಯಪ್ಪ,  ಕಂಸಾಳೆ ಸಿದ್ದರಾಮು ಹಾಗೂ ಕೃಷ್ಣ ಜನಮನ ಮತ್ತು ತಂಡದಿಂದ ಕಂಸಾಳೆ ಜಾನಪದ ನೃತ್ಯ ಮಾಡಿದರು. ರಮ್ಯ , ಕಿರಣ್, ಕುಮಾರ್, ಸ್ವಾಮಿನಾಯಕ ಮತ್ತು ತಂಡದವರು ಮಾಡಿದ ಡೊಳ್ಳುಕುಣಿತವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. 

ಅಮೃತ ಮತ್ತು ತಂಡ, ಪಲ್ಲವಿ ಮತ್ತು ತಂಡದಿಂದ ನಗಾರಿ, ಪಲ್ಲವಿ ಹಾಗೂ ವೈ.ಬಿ ಪ್ರಕಾಶ್ ಮತ್ತು ತಂಡದಿಂದ ಪೂಜಾಕುಣಿತ ಅದ್ಭುತವಾಗಿತ್ತು. ಅಶ್ವಾರೋಹಿ ಪಡೆಯ ಪ್ರಧಾನ ಕಮಾಂಡೆಂಟ್ ಕೆಎಆರ್‌ಪಿ ಮೌಂಟೆಂಡ್ ಕಂಪನಿ ತುಕಡಿಗಳು ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದವು.

ಚಿತ್ತಾಕರ್ಷಕ ಸ್ತಬ್ದಚಿತ್ರಗಳು: ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಒಟ್ಟು 6 ವರ್ಣರಂಜಿತ ಸ್ತಬ್ಧಚಿತ್ರಗಳು ಎಲ್ಲರನ್ನೂ ಆಕರ್ಷಿಸಿದವು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಸ್ತಬ್ದಚಿತ್ರವು ಮೊದಲಿಗೆ ಸಾಗುವ ಮೂಲಕ ಎಲ್ಲರ ಚಿತ್ತ ನೆಟ್ಟಿತು.

ಬಳಿಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ‘ಬಹುವಸತಿ ಸಂಕೀರ್ಣ’, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ‘ಕೊರೊನಾ ಮುಕ್ತ ಕರ್ನಾಟಕ’ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ‘ಸಮಗ್ರ ಕೃಷಿ’, ಮತ್ತು ದಸರಾ ಉಪಸಮಿತಿಯಿಂದ ‘ಪರಿಸರ ಸಂರಕ್ಷಣೆ’, ‘ಅರಮನೆ ಆನೆಬಂಡಿ’ ಸ್ತಬ್ಧ ಚಿತ್ರಗಳು ಸಾಗಿದವು. 

ಪುಷ್ಪಾರ್ಚನೆ ವೇಳೆ ರಾಜ್ಯ ಹೃಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಮೇಯರ್ ಸುನಂದ ಪಾಲನೇತ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೋಲಿಸ್ ಆಯುಕ್ತ ಡಾ.ಚಂದ್ರಗುಪ್ತ, ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!