35 ವರ್ಷಗಳ ನಂತರ ಮಿತ್ರರ ಪುನರ್ಮಿಲನ: ನಿವೃತ್ತ ಶಿಕ್ಷಕರಿಗೆ ಗುರುವಂದನೆ

ದೊಡ್ಡಬಳ್ಳಾಪುರ: 35 ವರ್ಷಗಳ ನಂತರ ಒಂದುಗೂಡಿದ ಪ್ರೌಢಶಾಲೆಯ ಸ್ನೇಹಿತ/ ಸ್ನೇಹಿತೆಯರು ತಮಗೆ ವಿದ್ಯೆ ಕಲಿಸಿದ ಶಿಕ್ಷಕರಿಗೆ ಗುರುವಂದನೆ ಸಲ್ಲಿಸಿರುವ ಘಟನೆ ತಾಲೂಕಿನ ಆರೂಢಿಯಲ್ಲಿ ನಡೆದಿದೆ.

ತಾಲೂಕಿನ ಆರೂಢಿಯಲ್ಲಿರುವ ಅನುದಾನಿತ ಪ್ರೌಢ ಶಾಲೆಯ 1986-1987 ಸಾಲಿನಲ್ಲಿ ಸುಮಾರು 90ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದು, ಆ ವೇಳೆ 10ಮಂದಿ ಶಿಕ್ಷಕರು ಈ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಟ್ಟಿದ್ದರು. ಆ ಸಂದರ್ಭದಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು ಇಂದು ಪೊಲೀಸ್ ಇಲಾಖೆ, ಇಂಜಿನಿಯರ್ ಇಲಾಖೆ, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಾಗಿ, ರಾಜಕೀಯ ಕ್ಷೇತ್ರ, ರೈತ ಮುಖಂಡರಾಗಿ, ಉದ್ಯಮಿಗಳು, ಹಿರಿಯ ಪುರೋಹಿತರಾಗಿ, ಪ್ರಾಂಶುಪಾಲರಾಗಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ.

ಈ ಸ್ನೇಹಿತರ ಕೂಟ ಕೆಲ ತಿಂಗಳ ಹಿಂದೆ ನಡೆದ ಸ್ನೇಹಿತರ ದಿನದಂದು 35 ವರ್ಷಗಳ ನಂತರ ಭೇಟಿಯಾಗಿ ತಮಗೆ ವಿದ್ಯೆಕಲಿಸಿದ ಗುರುಗಳಿಗೆ ಸನ್ಮಾನಿಸಲು ತೀರ್ಮಾನಿಸಿದರು.

ಈ ನಿರ್ಣಯದಂತೆ ಸುಮಾರು 35 ವರ್ಷಗಳ ನಂತರ ಭಾನುವಾರ ಶಾಲೆಯ ಆವರಣದಲ್ಲಿ ಮರಳಿ ಸೇರಿದ್ದು, ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯಶಿಕ್ಷರಾದ ವಿ.ಎಸ್.ಶಿವಪ್ರಕಾಶ್, ನಿವೃತ್ತ ಶಿಕ್ಷಕರಾದ ಆರ್.ರಾಮಚಂದ್ರಯ್ಯ, ಎ.ಬೈರಪ್ಪರೆಡ್ಡಿ, ಡಿ.ವಿ.ಶಿವರುದ್ರಯ್ಯ, ಕೆ.ಹನುಮಯ್ಯ, ಹೆಚ್.ನಾಗೇಂದ್ರ, ಎಸ್.ಎಲ್.ವೆಂಕಟರಾಜ್, ಹೆಚ್.ನರಸೀಯಪ್ಪ, ಹೆಚ್.ವಿ.ವೆಂಕಟೇಶ್, ಸುಬ್ಬಣ್ಣ, ಕೆಂಪಯ್ಯ, ಡಿ.ಎನ್.ನರಸಿಂಹಮೂರ್ತಿ, ಪುಟ್ಟರುದ್ರಯ್ಯ, ಸಿಬ್ಬಂದಿಗಳಾದ ಚಿಕ್ಕಣ್ಣ, ಮರಿಯಪ್ಪ, ತಿಮ್ಮಣ್ಣ, ಭ್ರಮರಾಂಭಿಕೆ ಸೇರಿದಂತೆ ದಿ.ಹೆಚ್.ಶಿವಕುಮಾರ್ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಈ ಸಾಲಿನ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಶಿಕ್ಷಕ ಸುದರ್ಶನ್ ಬಾಬು ವಹಿಸಿದ್ದರು.ಕಾರ್ಯಕ್ರಮದಲ್ಲಿ ಇತರೇ ಸಾಲಿನ ಹಲವು ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮದ ಮೆರಗು ಹೆಚ್ಚಿಸಿದರು.

ಹಲವು ವರ್ಷಗಳ ನಂತರ ಹಳೆಯ ವಿದ್ಯಾರ್ಥಿಗಳು ಸಮ್ಮಿಲನಗೊಂಡು ನಿವೃತ್ತರಾಗಿದ್ದ ಶಿಕ್ಷಕರು, ಸಿಬ್ಬಂದಿಗಳನ್ನು ಶಾಲೆಗೆ ಕರೆಸಿದಕ್ಕೆ ಶಿಕ್ಷಕರು ಹರ್ಷ ವ್ಯಕ್ತಪಡಿಸಿದರು..

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111004"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!