ಭೂಕಂಪನ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ: ಮನೆ ಮುಂದೆ ಶೆಡ್ ನಿರ್ಮಾಣ ಕುರಿತಂತೆ ಸಿ.ಎಂ.ಅವರೊಂದಿಗೆ ಚರ್ಚಿಸಿ ಕ್ರಮ

ಕಲಬುರಗಿ: ಭೂಕಂಪನ ಪೀಡಿತ ಗ್ರಾಮಗಳಲ್ಲಿ ಮನೆ ಮುಂದೆ ಶೆಡ್ ನಿರ್ಮಾಣ ಮಾಡಬೇಕು ಎಂಬ ಗ್ರಾಮಸ್ಥರ ಬೇಡಿಕೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಆರ್.ಅಶೋಕ್ ಹೇಳಿದರು.

ಮಂಗಳವಾರ ಚಿಂಚೋಳಿ ತಾಲೂಕಿನ ಭೂಕಂಪನ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಭೇಟಿ ನೀಡಿದ ಅವರು ಶಾಲಾ ಆವರಣದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಗಡಿಕೇಶ್ವರ ಮತ್ತು ಸುತ್ತಮುತ್ತ ಹಳ್ಳಿಗಳಲ್ಲಿ ಭೂಮಿ ಕಂಪಿಸುತ್ತಿರುವ ಕಾರಣ ಗ್ರಾಮದಲ್ಲಿ ಭೂಕಂಪದ ತೀವ್ರತೆ ಅರಿಯಲು ಹೈದ್ರಬಾದಿನ ಎನ್.ಜಿ.ಆರ್.ಐ. ವಿಜ್ಞಾನಿಗಳ ತಂಡ ಸಿಸ್ಮೋಮೀಟರ್ ಯಂತ್ರ ಅಳವಡಿಸಿದ್ದಾರೆ. ಮುಂದಿನ 1 ತಿಂಗಳ ಕಾಲ ವಿಜ್ಞಾನಿಗಳು ಈ ಯಂತ್ರದ ಮೂಲಕ ದಾಖಲಾಗುವ ಪ್ರತಿಯೊಂದು ಮಾಹಿತಿಯನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವೈಜ್ಞಾನಿಕವಾಗಿ ವರದಿ ಸಲ್ಲಿಸಲಿದ್ದು, ತದನಂತರ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು.

ಹೈದ್ರಾಬಾದಿನ ಭೂ ವಿಜ್ಞಾನಿಗಳ ತಂಡದ ಪ್ರಾಥಮಿಕ ವರದಿ ಪ್ರಕಾರ ಇದು ಸಣ್ಣ ಪ್ರಮಾಣದ ಭೂಕಂಪವಾಗಿದ್ದು, ಹೆದರುವ ಅವಶ್ಯಕತೆವಿಲ್ಲ. ಕಳೆದ 2-3 ವರ್ಷದಿಂದ ಹೆಚ್ಚಿನ ಮಳೆಯಾಗಿದೆ. ಜೊತೆಗೆ ಸುಣ್ಣದ ಕಲ್ಲಿನಿಂದ ಕೂಡಿರುವ ಪ್ರದೇಶ ಇದಾಗಿದ್ದರಿಂದ ಭೂಮಿಯೊಳಗೆ ರಸಾಯನಿಕ ಕ್ರಿಯೆಗಳ ಚಲನವಲನದಿಂದ ಶಬ್ದ ಇತ್ತೀಚೆಗೆ ಹೆಚ್ಚಾಗಿ ಕೇಳಿಬರುತ್ತಿದೆ ಎಂದಿದ್ದಾರೆ. ಹೀಗಾಗಿ ಸಾರ್ವಜನಿಕರು ಭಯಪಡುವ ಅವಶ್ಯಕತೆವಿಲ್ಲ. ಸರ್ಕಾರ ನಿಮ್ಮೊಂದಿಗಿದೆ ಧೈರ್ಯದಿಂದಿರಿ ಎಂದು ಗ್ರಾಮಸ್ಥರಿಗೆ ಅತ್ಮಸ್ಥೈರ್ಯ ತುಂಬಿದರು.

ಭೂಕಂಪನದಿಂದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಲ್ಲಿ 50 ಸಾವಿರ ರೂ. ಪರಿಹಾರ ನೀಡಲಾಗುವುದು. ಗ್ರಾಮದಲ್ಲಿ ಸರ್ವೆ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಯಾವುದಕ್ಕೂ ಗ್ರಾಮಸ್ಥರು ಎಚ್ಚರಿಕೆಯಿಂದಿರಬೇಕು. ಧೈರ್ಯ ಕಳೆದುಕೊಳ್ಳಬಾರದು. ಸರ್ಕಾರ ನಿಮಗಾಗಿ ಕಾಳಜಿ ಕೇಂದ್ರ ತೆರೆದಿದೆ. ಹಿಂದೆ ಗಂಜಿ ಕೇಂದ್ರ ಎಂದು ಕರೆಯಲಾಗುತ್ತಿತ್ತು. ನಮ್ಮ ಸರ್ಕಾರ ಗೌರವಯುತವಾಗಿ ಕಾಳಜಿ ಕೇಂದ್ರ ಎಂದು ಮರುನಾಮಕರಣಗೊಳಿಸಿ ಕಷ್ಟದ ಕಾಲದಲ್ಲಿ ನಿಮ್ಮ ಕಾಳಜಿ ವಹಿಸುತ್ತಿದ್ದೇವೆ. ಕಿವಿ ಮತ್ತು ಕಣ್ಣಿರುವ ಸರ್ಕಾರ ನಮ್ಮದಾಗಿದೆ ಎಂದರು.

ಕಾಳಜಿ ಕೇಂದಲ್ಲಿ ಗುಣಮಟ್ಟದ ಅಹಾರ ಪೂರೈಕೆಗೆ ಸೂಚಿಸಲಾಗಿದೆ. ಇದಕ್ಕೆಂದೆ ಮೆನು ಸಹ ನೀಡಲಾಗಿದೆ. ಅವಶ್ಯಬಿದ್ದರೆ ಇನ್ನಿತರ ಗ್ರಾಮದಲ್ಲಿಯೂ ಕಾಳಜಿ ಕೇಂದ್ರ ತೆರೆಯಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಹಣದ ಕೊರತೆಯಿಲ್ಲ. ವಿಪತ್ತು ನಿರ್ವಹಣಾ ಅನುದಾನದಡಿ ಎಲ್ಲವು ಭರಿಸಲಾಗುವುದು ಎಂದು ಸಚಿವ ಅರ್.ಅಶೋಕ ತಿಳಿಸಿದರು.

ಇದಕ್ಕೂ ಮುನ್ನ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ ಕಳೆದ 10 ವರ್ಷದಿಂದ ಗ್ರಾಮದಲ್ಲಿ ಭೂಕಂಪನದ ಸದ್ದು ಕೇಳಿಸುತ್ತಿದೆ. ಆದರೆ ಕಳೆದ 10-12 ದಿನದಿಂದ ಶಬ್ದದ ತೀವ್ರತೆ ಹೆಚ್ಚಾದ ಕಾರಣ ಜನ ಭಯಭೀತರಾಗಿದ್ದಾರೆ. 3 ದಿನದ ಹಿಂದೆಯೆ ತಾವು ಮತ್ತು ಸಂಸದ ಡಾ.ಉಮೇಶ ಜಾಧವ ಅವರು ಅಧಿಕಾರಿಗಳೊಂದಿಗೆ ರಾತ್ರಿ ವಾಸ್ತವ್ಯ ಮಾಡಿ ಜನರಲ್ಲಿ ಧೈರ್ಯ ತುಂಬಿದ್ದೇವೆ. ಆಡಳಿತ ಯಂತ್ರ 24 ಗಂಟೆ ಇಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಇಲ್ಲಿನ ಜನರ ಅಪೇಕ್ಷೆಯಂತೆ ಮನೆ ಮುಂದೆ ಶೆಡ್ ನಿರ್ಮಿಸಬೇಕು ಮತ್ತು ಕಚ್ಚಾ ಮನೆಗಳನ್ನು ಸರ್ಕಾರದಿಂದಲೆ ಪಕ್ಕಾ ಮನೆ ನಿರ್ಮಿಸಿಕೊಡಬೇಕು ಎಂದು ಸಚಿವರಲ್ಲಿ ಗ್ರಾಮಸ್ಥರ ಪರವಾಗಿ ರಾಜಕುಮಾರ ಪಾಟೀಲ ಬೇಡಿಕೆ ಇಟ್ಟರು.

ರಾಷ್ಟ್ರೀಯ ಭೂಭೌತ ವಿಜ್ಞಾನ ಸಂಶೋಧನಾ ಸಂಸ್ಥೆಯ ಭೂ ವಿಜ್ಞಾನಿ ಡಾ.ಶಶಿಧರ ಮಾತನಾಡಿ ರಾಜ್ಯ ಸರ್ಕಾರದ ಕೋರಿಕೆಯಂತೆ ಗ್ರಾಮಕ್ಕೆ ಭೇಟಿ ನೀಡಿ ಇಲ್ಲಿ ಭೂಕಂಪ ಅಳೆಯುವ ಮಾಪಕ ಯಂತ್ರ ಅಳವಡಿಸಿದೆ. ಇದು ಸುತ್ತಮುತ್ತಲಿನ 5 ರಿಂದ 10 ಕಿ.ಮಿ. ವ್ಯಾಪ್ತಿಯಲ್ಲಾಗುವ ಭೂಕಂಪನದ ಮಾಹಿತಿ ಹೈದ್ರಾಬಾದ್ ಎನ್.ಜಿ.ಆರ್.ವೈ ಸಂಸ್ಥೆಗೆ ರವಾನಿಸಲಿದೆ.

ಗಡಿಕೇಶ್ವರ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ಆಗುತ್ತಿರುವ ಭೂಕಂಪನಗಳು ತೀರಾ ಸಣ್ಣ ಪ್ರಮಾಣದಾಗಿದ್ದು, ಇದರಿಂದ ಯಾವುದೇ ಹಾನಿಯಾಗುವುದಿಲ್ಲ. ಇಂತಹ ಸಣ್ಣ ಪ್ರಮಾಣದ ಭೂಕಂಪಗಳು ವಿಶ್ವದಾದ್ಯಂತ ಪ್ರತಿನಿತ್ಯ ನಡೆಯುತ್ತವೆ. ಇದಕ್ಕೆ ಗ್ರಾಮಸ್ಥರು ಹೆದರುವ ಅವಶ್ಯತೆಯಿಲ್ಲ ಎಂದು ಅಭಯ ನೀಡಿದರು.

ಸುಣ್ಣದ ಕಲ್ಲಿನ ಪ್ರದೇಶ ಇದಾಗಿದ್ದು, ಇತ್ತೀಚೆಗೆ ಹೆಚ್ಚಿನ ಮಳೆಯೂ ಆಗಿರುವ ಕಾರಣ ಸುಣ್ಣದ ಕಲ್ಲು ಮತ್ತು ನೀರಿನ ಮಿಶ್ರಣದ ಫಲವಾಗಿ ಭೂಮಿಯೊಳಗಿನಿಂದ ಇಂತಹ ಶಬ್ದಗಳು ಬರುವುದು ಸಹಜ. ಇಲ್ಲಿ ಸ್ಥಾಪಿಸಿರುವ ಸಿಸ್ಮೋಮೀಟರ್‍ನಿಂದ ದಾಖಲಾಗುವ ಪ್ರತಿಯೊಂದು ಮಾಹಿತಿ ಕುರಿತು ಮುಂದಿನ 1 ತಿಂಗಳ ಕಾಲ ಅಧ್ಯಯನ ಮಾಡಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಡಾ.ಶಶಿಧರ ಅವರು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

50 ಸಾವಿರ ರೂ. ಪರಿಹಾರ ವಿತರಣೆ: ಗ್ರಾಮದಲ್ಲಿ ಭೂಕಂಪನದಿಂದ ಮನೆಯಲ್ಲಿ ಬಿರುಕು ಕಂಡ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ 4 ಜನ ಫಲಾನುಭವಿಗಳಿಗೆ ತಲಾ 50 ಸಾವಿರ ರೂ. ಪರಿಹಾರ ಚೆಕ್ ಸಚಿವ ಆರ್. ಅಶೋಕ ನೀಡಿದರು. 

ಸಂಸದ ಡಾ.ಉಮೇಶ ಜಾಧವ ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ ರಾಜನ್ ಅವರು ಸಹ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಂ.ಎಲ್.ಸಿ. ಬಿ.ಜಿ.ಪಾಟೀಲ, ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ,  ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಎನ್.ಜಿ.ಆರ್.ಐ. ಭೂ ವಿಜ್ಞಾನಿಗಳಾದ ಡಾ.ಸುರೇಶ, ಡಾ. ಕೃಷ್ಣಮೋಹನ, ಕಲಬುರಗಿ ಸಹಾಯಕ ಆಯುಕ್ತೆ ಮೋನಾ ರೂಟ್, ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಮಲ್ಲಿಕಾರ್ಜುನ ಜೇರಟಗಿ, ಕೃμÁ್ಣ ಅಗ್ನಿಹೋತ್ರಿ, ಚಿಂಚೋಳಿ ತಹಶೀಲ್ದಾರ ಅಂಜುಮ್ ತಬಸ್ಸುಮ್, ಕಾಳಗಿ ತಹಶೀಲ್ದಾರ ನಾಗನಾಥ ತರಗೆ, ತಾಲೂಕ ಪಂಚಾಯತ ಇ.ಓ ಅನೀಲ ರಾಠೋಡ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಸೇಡಂ ಸಹಾಯಕ ಆಯುಕ್ತೆ ಅಶ್ವಿಜಾ ಬಿ. ಸ್ವಾಗತಿಸಿದರು.

ಸಚಿವರಿಂದ ಗ್ರಾಮದಲ್ಲಿ ಸಂಚಾರ: ನಂತರ ಸಚಿವ  ಅರ್.ಅಶೋಕ ಅವರು ಗಡಿಕೇಶ್ವರ ಗ್ರಾಮದ ವಿವಿಧ ಓಣಿಗಳಿಗೆ ಭೇಟಿ ನೀಡಿ ಭೂಕಂಪನದಿಂದ ಬಿರುಕು ಕಂಡ ಮನೆಗಳನ್ನು ವೀಕ್ಷಿಸಿದಲ್ಲದೆ ಮನೆ ಮಾಲೀಕರು ಮತ್ತು ಗ್ರಾಮಸ್ಥರೊಂದಿಗೆ ಮಾತನಾಡಿ ಅವರ ಕುಂದುಕೊರತೆ ಆಲಿಸಿದರು. ಸ್ಥಳೀಯ ಗ್ರಾಮಸ್ಥರು ಕಾಳಜಿ ಕೇಂದ್ರದಲ್ಲಿ ನೀಡಲಾಗುತ್ತಿರುವ ಊಟದ ಬಗ್ಗೆ ತೃಪ್ತಿ ವ್ಯಕ್ತಪಡಿಸುತ್ತಾ ಮನೆ ಮುಂದೆ ಶೆಡ್ ನಿರ್ಮಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿಕೊಂಡರು. ಶೆಡ್ ನಿರ್ಮಿಸುವುದಾಗಿ ಭರವಸೆ ನೀಡಿದ ಸಚಿವರು ಈ ಕುರಿತಂತೆ ಸರ್ವೇ ಕಾರ್ಯ ಕೈಗೊಳ್ಳುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ನಂತರ ಸಚಿವರು ಭೂಕಂಪನ ಪೀಡಿತ ಕಾಳಗಿ ತಾಲೂಕಿನ ಹೊಸಳ್ಳಿ (ಹೆಚ್) ಮತ್ತು ಕೊರವಿ (ರಾಮನಗರ ತಾಂಡಾ)ಕ್ಕೂ ಭೇಟಿ ನೀಡಿ ಗ್ರಾಮಸ್ಥರ ಕುಂದುಕೊರತೆ ಆಲಿಸಿದರು. ಲೊಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾದ ತಾತ್ಕಾಲಿಕ ಶೆಡ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಸೃಷ್ಟಿ: ವಿಜಯೇಂದ್ರ ವಾಗ್ದಾಳಿ| BY Vijayendra

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು ಅರಾಜಕತೆ ಸೃಷ್ಟಿ: ವಿಜಯೇಂದ್ರ ವಾಗ್ದಾಳಿ| BY Vijayendra

ಅತ್ಯಾಚಾರ, ಗುಂಡಾಗಿರಿ, ಕೊಲೆ, ದರೋಡೆ ಮೊದಲಾದ ಚಟುವಟಿಕೆಗಳು ನಿರಂತರ ನಡೆಯುತ್ತಿದ್ದರೂ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ BY Vijayendra

[ccc_my_favorite_select_button post_id="101153"]
ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr K Sudhakar

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ Dr

ಸರ್ಕಾರಿ ಹಾಗೂ ಖಾಸಗಿ ವೈದ್ಯರು, ನರ್ಸ್ ಗಳಿಗೆ ಕಾರ್ಯಾಗಾರ ಏರ್ಪಡಿಸಿ ಗರ್ಭಿಣಿ, ಬಾಣಂತಿಯರ ಹಾಗೂ ಶಿಶುಗಳ ಲಾಲನೆ, ಪಾಲನೆ, ಚಿಕಿತ್ಸಾ ವಿಧಾನ ಬಗ್ಗೆ ತರಬೇತಿ ನೀಡಿ. Dr K Sudhakar

[ccc_my_favorite_select_button post_id="101146"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

ಚಾಲಕನೊಂದಿಗೆ ಓಂಶಕ್ತಿ ಮಾಲಾಧಾರಿ ಮಹಿಳೆಯಿದ್ದು, ಆಕೆಯನ್ನು ಆಲಹಳ್ಳಿ ಬಿಟ್ಟು ನಂತರ ಯಶೋಧಮ್ಮ ಅವರನ್ನು ಮನೆಗೆ ಬಿಡುವುದಾಗಿ ಚಾಲಕ ಕರೆದೊಯ್ದಿದ್ದಾನೆ. Doddaballapura

[ccc_my_favorite_select_button post_id="101115"]

ATM: ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾದ

[ccc_my_favorite_select_button post_id="101113"]

Crime news: 23 ಕೋಟಿ ರೂ. ಮೌಲ್ಯದ

[ccc_my_favorite_select_button post_id="101107"]

Doddaballapura ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ..!|

[ccc_my_favorite_select_button post_id="101094"]

News update: ಸೈಫ್ ಅಲಿ ಖಾನ್‌ಗೆ ಚಾಕು

[ccc_my_favorite_select_button post_id="101085"]
ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ ಸಮೇತ ಸೋದರ ಮಾವನ ದಾರುಣ ಸಾವು…!| Accident

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ

ಎರಡು ಬಸ್ ಗಳ ನಡುವೆ ಸಿಲುಕಿದ ಬೈಕ್ ಸವಾರ ಅಪಘಾತಕ್ಕೀಡಾಗಿ ತನ್ನ ತಂಗಿಯ ಮಗಳ ಜೊತೆಗೆ ತಾನು ದಾರುಣವಾಗಿ ಸಾವನ್ನಪ್ಪಿದ್ದಾನೆ. Accident

[ccc_my_favorite_select_button post_id="101076"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!