ಮಹಾನ್ ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳು ಸರ್ವ ಕಾಲಕ್ಕೂ ಪ್ರಸ್ತುತ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಮಹಾನ್ ಮಹರ್ಷಿ ವಾಲ್ಮೀಕಿ ವಿರಚಿತ ರಾಮಾಯಣ ಅತ್ಯಂತ ಶ್ರೇಷ್ಠ ಮಹಾಕಾವ್ಯವಾಗಿದ್ದು, ಮನುಷ್ಯ  ಭೂಮಿ  ಮೇಲೆ  ಇರುವವರೆಗೂ, ಇಂದು ಮತ್ತು ಭವಿಷ್ಯದಲ್ಲಿ ಹೀಗೇ ಎಲ್ಲಾ ಕಾಲಕ್ಕೂ ಈ ಕಾವ್ಯವು ಪ್ರಸ್ತುತವಾಗಿರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಅವರು ಬುಧವಾರ ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ  ಪಂಗಡಗಳ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಯಾವುದೇ ವ್ಯಕ್ತಿ   ಜ್ಞಾನಾರ್ಜನೆ ಮೂಲಕ ಉನ್ನತ ಸಾಧನೆ ಮಾಡಲು ರಾಮಾಯಣ ಕಾವ್ಯ ಪ್ರೇರಣೆಯಾಗಿದೆ. ಪರಿಶಿಷ್ಟ ಪಂಗಡದ ಜನರು ಗುರಿ ಮತ್ತು ಪರಿಶ್ರಮದಿಂದ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ  ಮುಂದೆ ಬರಬೇಕು. ಈ ಸಮುದಾಯದ ಜನರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಭಿವೃದ್ಧಿಯಾಗಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವತ್ತ ಗಂಭೀರ ಚಿಂತನೆ ನಡೆಸಬೇಕು ಎಂದರು.

ರಾಮಾಯಣ ಮಹಾಕಾವ್ಯದಲ್ಲಿ ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಹಲವು ಮೌಲ್ಯಾದರ್ಶಗಳಿದ್ದು, ಪ್ರತಿಯೊಬ್ಬರೂ ಶ್ರೀ ರಾಮಾಯಣ ಮಹಾಕಾವ್ಯವನ್ನು ಆಳವಾಗಿ ಅಧ್ಯಯನ ಮಾಡಿ  ವಾಲ್ಮೀಕಿಯವರ ಆದರ್ಶ ಚಿಂತನೆಗಳನ್ನು ಅನುಸರಿಸುವ ಅಗತ್ಯವಿದೆ, ಸ್ವಾಮಿನಿಷ್ಠೆ, ಸೋದರ ನಿಷ್ಠೆ, ಪತಿನಿಷ್ಠೆ, ಪತ್ನಿನಿಷ್ಠೆ, ಪಿತೃ ವಾಕ್ಯ ಪರಿಪಾಲನೆ  ಸೇರಿದಂತೆ ಹಲವು ರೀತಿಯ ನಿಷ್ಠೆಗಳು ಈ ಕಾವ್ಯದಲ್ಲಿ  ಕಾಣ ಸಿಗುತ್ತವೆ. ಎಂದು ತಿಳಿಸಿದರು.

ಯೋಜನೆಗಳ ಅರಿವಿರಲಿ: ಬಲಹೀನ ತಳ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವಾರು ಯೋಜನೆಗಳನ್ನುರೂಪಿಸಿವೆ. ಬಲಹೀನ ತಳ ಸಮುದಾಯಗಳ ಯುವಕರು ಸ್ವಂತ ಉದ್ಯಮಗಳನ್ನು ಆರಂಭಿಸಿ ಆರ್ಥಿಕವಾಗಿ ಸದೃಢರಾಗಬೇಕೆಂಬ ಉದ್ದೇಶಕ್ಕಾಗಿ 10 ಲಕ್ಷದಿಂದ    1 ಕೋಟಿವರೆಗೆ  ಸಾಲ ನೀಡುವ *ಸ್ಟಾಂಡ್ ಅಪ್ ಇಂಡಿಯಾ* ಎಂಬ ಯೋಜನೆಯನ್ನ    ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಇದಕ್ಕಾಗಿ 27 ಸಾವಿರ ಕೋಟಿಗಳನ್ನ  ಕೇಂದ್ರ ಸರ್ಕಾರ ಮೀಸಲಿಟ್ಟಿದೆ.ಇಂತಹ ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಅರಿತು ಸದ್ಬಳಕೆ ಮಾಡಿಕೊಂಡು ಪ್ರಗತಿ ಹೋಂದಬೇಕು ಎಂದು ಯುವಕರಿಗೆ  ಸಚಿವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ವಾಲ್ಮೀಕಿ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಚಿಕ್ಕಬಳ್ಳಾಪುರ ನಗರದ ಹೃದಯ ಭಾಗದಲ್ಲಿ 30 ಗುಂಟೆ ಜಮೀನು ಮಂಜೂರಾತಿಯ ಆದೇಶ ಪತ್ರವನ್ನು ಸಂಬಂಧಪಟ್ಟ  ಇಲಾಖೆಗೆ ಹಸ್ತಾಂತರಿಸಿದರು. ಈ ಆದೇಶ  ಪತ್ರವನ್ನು   ಸಕಾಲದಲ್ಲಿ  ಸಿದ್ದಪಡಿಸಿ ಜಯಂತಿಯಂದು  ನೀಡಲು ಸ್ಪಂದಿಸಿದ್ದಕ್ಕೆ ಜಿಲ್ಲಾಧಿಕಾರಿಗಳನ್ನು ಈ ವೇಳೆ ಅಭಿನಂದಿಸಿದರು.  ಎಸ್.ಎಸ್. ಎಲ್.ಸಿ, ಪಿಯುಸಿ ಮತ್ತು ಪದವಿ, ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪರಿಶಿಷ್ಟ ಪಂಗಡ ಸಮುದಾಯದಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಮಹರ್ಶಿ ವಾಲ್ಮೀಕಿ  ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ಗಳನ್ನುವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅರ್. ಲತಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಸಿಇಒ ಪಿ.ಶಿವಶಂಕರ್, ನಗರಸಭೆ ಅಧ್ಯಕ್ಷ ಅನಂದ್ ರೆಡ್ಡಿ ಬಾಬು,ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಶ್ವತಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಧರ್ , ಚಿಕ್ಕಬಳ್ಳಾಪುರ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಾದ ಕೆ.ವಿ.ಗವಿರಾಯಪ್ಪ, ಖಜಾಂಚಿ ಕೆ.ಎನ್.ಆವಲಕೊಂಡರಾಯಪ್ಪ, ಸಂಘಟನಾ ಕಾರ್ಯದರ್ಶಿ ಮುನಿವೆಂಟಕಸ್ವಾಮಿ, ಸದಸ್ಯರಾದ ನರಸಿಂಹರಾಜು, ಸಮುದಾಯದ ಮುಖಂಡರಾದ ಶಿವಕುಮಾರ್ ,ಶ್ರೀನಿವಾಸ್, ಕೆ.ಟಿ.ನಾರಾಯಣಸ್ವಾಮಿ, ಪಿ.ಮುನಿರಾಜು (ಜಿ.ಪಂ.ಮಾಜಿ ಸದಸ್ಯರು), ಮುನಿಕೃಷ್ಣ (ಮಾಜಿ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರು), ಚಿಕ್ಕಬಳ್ಳಾಪುರ ತಾಲ್ಲೂಕು ವಾಲ್ಮೀಕಿ ಸಂಘದ ಅಧ್ಯಕ್ಷರಾದ ಮೂರ್ತಿ.ಜಿ, ಉಪಾಧ್ಯಕ್ಷರಾದ ನಾರಾಯಣಸ್ವಾಮಿ, ವಾಲ್ಮೀಕಿ ನಾಯಕ ಸಂಘದ ವಿವಿಧ  ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು/ಸಿಬ್ಬಂದಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ. ಕುಮಾರಸ್ವಾಮಿ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ.

ಇಲ್ಲಿನ ವೈಜಾಗ್ ಸ್ಟೀಲ್ (ರಾಷ್ಟ್ರೀಯ ಇಸ್ಪಾತ್ ನಿಗಮ ಲಿಮಿಟೆಡ್ - RINL) ಕಾರ್ಖಾನೆಯ ಪುನಶ್ಚೇತನಕ್ಕೆ ₹11,400 ಕೋಟಿ ಬೃಹತ್ ಮೊತ್ತದ ವಿಶೇಷ ಪ್ಯಾಕೇಜ್ ನೀಡಿದ ನಂತರ ಮತ್ತೊಮ್ಮೆ ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರದ ಉಕ್ಕು

[ccc_my_favorite_select_button post_id="120408"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!