ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ಥಳನಾಮಗಳು ಪುಸ್ತಕ ಬಿಡುಗಡೆ: ಸ್ಥಳ ನಾಮಗಳ ಇತಿಹಾಸದ ದಾಖಲೆ ಶ್ಲಾಘನೀಯವೆಂದ ಕೆಎಎಸ್ ಅಧಿಕಾರಿ ಡಾ.ನೆಲ್ಲುಕುಂಟೆ ವೆಂಕಟೇಶಯ್ಯ

ದೊಡ್ಡಬಳ್ಳಾಪುರ: ವಸಾಹತುಶಾಹಿ ಆಡಳಿತ ನಮ್ಮೊಳಗೆ ಬಳೆಸಿದ ಕೀಳರಿಮೆಯಿಂದಾಗಿ ನಮ್ಮಲ್ಲಿನ ಇತಿಹಾಸವನ್ನೇ ಮರೆತಿದ್ದೇವೆ. ನಮ್ಮ ಸುತ್ತಲಿನ ಪರಿಯದ ಸ್ಥಳದ ಬಗ್ಗೆ ಸದಾ ನಮಗೆ ತಾತ್ಸಾರ.ಹೀಗಾಗಿಯೇ ನಿಖರವಾದ ಇತಿಹಾಸ ತಿಳಿಯುವುದು ಕಷ್ಟವಾಗುತ್ತಿದೆ ಎಂದು ಕೆಎಎಸ್ ಅಧಿಕಾರಿ ಡಾ.ನೆಲ್ಲುಕುಂಟೆ ವೆಂಕಟೇಶಯ್ಯ ಹೇಳಿದರು.

ಅವರು ನಗರದ ಕನ್ನಡ ಜಾಗೃತ ಭವನದಲ್ಲಿ ಬುಧವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ಥಳನಾಮಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಇತಿಹಾಸದ ಪ್ರತಿ ಹೆಜ್ಜೆಯಲ್ಲೂ ರಾಜಕೀಯ ಇದ್ದೇ ಇರುತ್ತದೆ. ಇಂದು ಹಲವಾರು ದೇಶಗಳು ತಮ್ಮ ಹಿಂದಿನ ಸಂಸ್ಕೃತಿಯನ್ನು ಮತ್ತೆ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಚರಿತ್ರೆಯನ್ನು ದಾಖಲಿಸುವಾಗ ವಿಮಾರ್ಶಾತ್ಮಕ ಇಲ್ಲದೇ ಇದ್ದರೆ ರಕ್ತಪಾತಗಳಿಗೆ ಕಾರಣವಾಗಲಿದೆ. ಭಾರತದ ಸಂಸ್ಕೃತಿ ಕೃಷಿ ಮತ್ತು ಪಶುಪಾಲನೆಯನ್ನು ಆವಲಂಭಿಸಿಕೊಂಡೇ ರೂಪಿತವಾಗಿದೆ. ವಾಣಿಜ್ಯ ಮಾರ್ಗಗಗಳು ಇತಿಹಾಸ ನಿರ್ಮಾಣದಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತ ಬಂದಿವೆ. ಇದೇ ಮಾರ್ಗಗಳು ಹಲವಾರು ಧಾರ್ಮಿಕ ಪಂಥಗಳು ಬೆಳೆಯಲು ಸಹ ಕಾರಣವಾಗಿವೆ ಎಂದರು. 

ಆಧುನಿಕ ಬದುಕಿನ ವೇಗದಲ್ಲಿ ಜನ ಮಾನಸದಲ್ಲಿ ಇರುವ ನಮ್ಮೂರಿನ ಹೆಸರಿನ (ಸ್ಥಳ ನಾಮಗಳ) ಇತಿಹಾಸವನ್ನೇ ಮರೆಯುತ್ತಿದ್ದೇವೆ. ಇಂತಹ ಸಂದೀಗ್ದ ಪರಿಸ್ಥಿತಿಯಲ್ಲಿ ಸ್ಥಳ ನಾಮಗಳ ಇತಿಹಾಸದ ದಾಖಲೆ ಶ್ಲಾಘನೀಯವಾಗಿದೆ.ಆದರೆ ಸ್ಥಳ ನಾಮಗಳ ದಾಖಲೆಯ ಸಂದರ್ಭದಲ್ಲಿ ಹೇಳಿಕೆಯಾಗಿ ಬರೆಯದೆ ಹಲವಾರು ಆಯಾಮಗಳ ರೂಪದಲ್ಲಿ ಪರಿಶೀಲನೆ ಅಗತ್ಯವಿದೆ ಎಂದರು. 

ಪುಸ್ತಕ ಬಿಡುಗಡೆ ಮಾಡಿದ ಬೆಂಗಳೂರು ವಿಶ್ವ ವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕಿ ಡಾ.ಎಂ.ಜಮುನಾ ಮಾತನಾಡಿ, ಇತಿಹಾಸ ಪುಸ್ತಕ ಬರೆಯುವಲ್ಲಿ ಕ್ಷೇತ್ರಾಧ್ಯಯನವೇ ಪ್ರಮುಖವಾಗಿದೆ. ಪ್ರತಿ ಗ್ರಾಮಗಳ ಹೆಸರಿಗೂ ಒಂದೊಂದು ಇತಿಹಾದ ಹಿನ್ನೆಲೆ ಇರಲಿದೆ. ಆದರೆ ಬ್ರಿಟಿಷರ ಆಡಳಿತ ಪ್ರಾರಂಭವಾದ ನಂತರ ಅವರು ತಮ್ಮ ವ್ಯಾಪಾರದ ದೃಷ್ಠಿಯಿಂದ ಅನುಕೂಲಕ್ಕೆ ತಕ್ಕಂತೆ ಸ್ಥಳ ನಾಮಗಳನ್ನು ಸೂಚಿಸುತ್ತ ಈ ಹಿಂದಿನ ಹೆಸರುಗಳನ್ನು ಅಳಿಸುತ್ತ ಹೋದರು. 

ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ಥಳನಾಮಗಳು ಪುಸ್ತಕದಲ್ಲಿನ ಮಾಹಿತಿಗಳು ಸತ್ಯಕ್ಕೆ ಹತ್ತಿರವಾಗಿದೆ. ಆದರೆ ಸ್ಥಳ ನಾಮಗಳ ಇತಿಹಾಸನವನ್ನು ಇದೇ ಅಂತಿಮ ಎಂದು ಹಳುವುದು ಕಷ್ಟವಾಗಲಿದೆ. ಅದು ಒಬ್ಬೊಬ್ಬರ ದೃಷ್ಠಿಕೋನ, ಅಧ್ಯಯನದ ವಿಧಾನದ ಮೇಲೂ ಅವಲಂಭಿಸಿರುತ್ತದೆ ಎಂದರು.  

ಚಿಂತಕ ಯೋಗೇಶ್ವರ ಮಾಸ್ಟರ್ ಮಾತನಾಡಿ, ಇತಿಹಾಸ, ಸಮಾಜ ವಿಜ್ಞಾನ ಸೇರಿದಂತೆ ಎಲ್ಲಾ ರೀತಿಯ ಅಧ್ಯಯನಗಳು ಸಹ ಜನ ಸಾಮಾನ್ಯರಿಗೆ ತಲುಪಿಸುವ ಕೆಲಸವಾಗಬೇಕು. ಅದು ವಿಶ್ವ ವಿದ್ಯಾಲಯಗಳಲ್ಲಿನ ಭೌದಿಕ ವಲಯಕ್ಕೆ ಮಾತ್ರ ಸೀಮಿತವಾಗಬಾರದು. ವಿಜ್ಞಾನದ ಅಧ್ಯಯನಗಳು ಹೇಗೆ ಜನಸಾಮಾನ್ಯರಿಗೆ ತಲುಪುವ ಅಮೂಲಕ ಅವರು ಬಳಕೆಗೆ ಬರುತ್ತವೋ ಅದೇ ಮಾದರಿಯಲ್ಲಿ ಇತರೆ ಸಾಮಾಜ ವಿಜ್ಞಾನಗಳ ಸಂಶೋಧನೆ, ಅಧ್ಯಯನದ ಫಲಿತಾಂಶಗಳು ಜನ ಸಾಮಾನ್ಯರ ಬದುಕಿಗೆ ಬಳಕೆಗೆ ಬರುವಂತಾಗಬೇಕು. ನಾವು ವೈಜ್ಞಾನಿಕತೆಯಲ್ಲಿ ಮುಂದುವರೆದಿದ್ದೇವೆ. ಆದರೆ ವೈಚಾರಿಕತೆಯಲ್ಲಿ ಹಿಂದುಳಿದ್ದೇವೆ. ಸ್ಥಳ ನಾಮಗಳ ಕುರಿತು ಬರೆಯುವಾಗ ಜನಪದರಲ್ಲಿನ ಕತೆಗಳಲ್ಲಿರುವ ಸಂಗತಿಗಳನ್ನು ವಿಶ್ಲೇಷಣೆಗೆ ಒಳಪಡಿಸಿಕೊಳ್ಳಬೇಕು. ನಾವು ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಬದುಕುತ್ತಿರುವುದರಿಂದ ಬಾಳುವವರ ಆದ್ಯತೆಗೆ ಪ್ರಾಮುಖ್ಯತೆ ನೀಡಬೇಕಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಸ್ಥಳನಾಮಗಳು ಪುಸ್ತಕದ ಲೇಖಕ ಡಾ.ಎಸ್.ವೆಂಕಟೇಶ್ ಮಾತನಾಡಿ, ನಾನು ಬರೆದಿರುವುದೇ ಅಂತಿಮವಲ್ಲ. ನನ್ನ ಗ್ರಹಿಕೆಗೆ ಬಂದಿರುವ ಸಂಗತಿಗಳನ್ನು ಅಧ್ಯಯನದ ಮೂಲಕ ಓದುಗರ ಮುಂದಿಡಲಾಗಿದೆ ಅಷ್ಟೇ ಎಂದರು.

ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ಶಾಸನತಜ್ಞ ಡಾ. ಎಚ್.ಎಸ್.ಗೋಪಾಲರಾವ್ ವಹಿಸಿದ್ದರು. ಸಮಾರಂಭದಲ್ಲಿ ಚಿತ್ರ ಸಾಹಿತಿ ಜಗನ್ನಾಥ್ ಪ್ರಕಾಶ್, ಶಾಸನ ತಜ್ಞ ನರಸಿಂಹಮೂರ್ತಿ ಇದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!