ಶಾಸಕ ಟಿ‌.ವೆಂಕಟರಮಣಯ್ಯ ಮನವಿ: ಸರ್ಕಾರಿ ಶಾಲೆಗೆ 4 ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ ಎಜಾಕ್ಸ್ ಕಂಪನಿ / ಸಾಸಲು ಹೋಬಳಿಯಲ್ಲಿ ಕಾಲೇಜ್ ಇಲ್ಲದೆ ಹೆಣ್ಣು ಮಕ್ಕಳ ಶಿಕ್ಷಣ ಮೊಟಕು: ಗ್ರಾಪಂ ಅಧ್ಯಕ್ಷೆ ಆತಂಕ

ದೊಡ್ಡಬಳ್ಳಾಪುರ: ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್ಆರ್ ಅನುದಾನವನ್ನು ಬಳಸಬೇಕೆಂಬ ಶಾಸಕ ಟಿ.ವೆಂಕಟರಮಣಯ್ಯ ಅವರ ಮನವಿ ಅನ್ವಯ ಸುಮಾರು 55 ಲಕ್ಷ ಅನುದಾನದಲ್ಲಿ, ಆರೂಢಿ ಗ್ರಾಮದ ಸರ್ಕಾರಿ ಶಾಲೆಗೆ 4 ಸುಸಜ್ಜಿತವಾದ ಕಟ್ಟಡ ಹಾಗೂ ಒಂದು ಶೌಚಾಲಯ ನಿರ್ಮಿಸಲಾಗುತ್ತಿದೆ ಎಂದು ಎಜಾಕ್ಸ್ ಕಂಪನಿಯ ಎಚ್.ಆರ್.ಮುಖ್ಯಸ್ಥ ಗಣಪತಿ ತಿಳಿಸಿದರು.

ತಾಲೂಕಿನ ಆರೂಢಿ ಗ್ರಾಮದ ಸರ್ಕಾರಿ ಮಾದರಿ ಪಾಠ ಶಾಲೆ ಆವರಣದಲ್ಲಿ ಎಜಾಕ್ಸ್ ಇಂಜನಿಯರಿಂಗ್ ಪ್ರೈ.ಲಿ ಸಂಸ್ಥೆಯ ಸಿಎಸ್ ಆರ್ ಕಾರ್ಯಕ್ರಮದಡಿಯಲ್ಲಿ ಎಜಾಕ್ಸ್ ಇಂಜನಿಯರಿಂಗ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನೂತನ ನಾಲ್ಕು ಶಾಲಾ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಕಂಪನಿ ಉತ್ಪಾದನೆಗೆ ನೀಡುವ ಮಹತ್ವವನ್ನು ಸಿಎಸ್ ಆರ್ ಅನುದಾನವನ್ನು ಜನಪರ ಕಾರ್ಯಕ್ಕೆ ಬಳಸಲು ಸಹ ಅಷ್ಟೇ ಒತ್ತು ನೀಡಲಾಗುತ್ತಿದೆ, ಇದಕ್ಕೆ ಮುಖ್ಯ ಕಾರಣ ಶಾಸಕ ಟಿ.ವೆಂಕಟರಮಣಯ್ಯ. ಅವರು ಪ್ರತಿ ಕಾರ್ಯಕ್ರಮದಲ್ಲಿ ಸಾಸಲು ಹೋಬಳಿಗೆ ಹೆಚ್ಚಿನ ನೆರವು ನೀಡುವಂತೆ ಮಾಡುತ್ತಿದ್ದ ಮನವಿಯನ್ವಯ ಆರೂಢಿಯಲ್ಲಿ ನಾಲ್ಕು ಕಟ್ಟಡ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಮಾಜಿ ಸಚಿವ ವೀರಪ್ಪಮೊಯ್ಲಿಯವರ ದೂರ ದೃಷ್ಟಿಯಿಂದ ಕೈಗಾರಿಕಾ ಕಂಪನಿಗಳು ಸಿಎಸ್ಆರ್ ಅನುದಾನ ಮೀಸಲಿಟ್ಟು ಸ್ಥಳೀಯ ಪ್ರದೇಶಗಳನ್ನು ಅಭಿವೃದ್ಧಿ ಮಾಡುತ್ತಿವೆ.

ಈ ಮುಂಚೆ ಕೈಗಾರಿಕಾ ಪ್ರದೇಶಕ್ಕೆ ಮೀಸಲಾಗಿದ್ದ ಕಾರ್ಯಕ್ರಮಗಳು, ಇತರೆ ಪ್ರದೇಶಗಳಿಗೂ ವಿಸ್ತರಿಸುವಂತೆ ಪದೇ ಪದೇ ಮಾಡಲಾದ ಮನವಿಗೆ ಸ್ಪಂದಿಸಿ ಇಂಡೋ ಮಿಮ್, ಎಜಾಕ್ಸ್, ಟಫೆ, ಎಲ್ ಅಂಡ್ ಟಿ  ಕಂಪನಿಗಳು ತಾಲೂಕಿನ ಹಲವು ಗ್ರಾಮಗಳಲ್ಲಿ ಶಾಲಾ ಕಟ್ಟಡ, ಕುಡಿಯುವ ನೀರಿನ ಟ್ಯಾಂಕ್,  ಕರೊನಾ ಸಂದರ್ಭದಲ್ಲಿ ಆಕ್ಸಿಜನ್ ಕಾನ್ಸ್ಟ್ರೇಟರ್ ಸೇರಿದಂತೆ ಹಲವು ನೆರವು ನೀಡುವ ಮೂಲಕ ಮನವಿಗೆ ಸ್ಪಂದಿಸಿ ಜನಪರ ಕಾಳಜಿ ತೋರಿವೆ‌ ಎಂದರು.

ಗ್ರಾಪಂ ಅಧ್ಯಕ್ಷೆ ಜಯಮ್ಮಪ್ರಭು ಮಾತನಾಡಿ, ಸಾಸಲು ಹೋಬಳಿ ವ್ಯಾಪ್ತಿಯಲ್ಲಿ ಪದವಿ ಪೂರ್ವ ಕಾಲೇಜು ಇಲ್ಲದೆ ಹೆಣ್ಣುಮಕ್ಕಳು ವಿದ್ಯಾಭ್ಯಾಸ ಮೊಟಕುಗೊಳಿಸುತ್ತಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಇಂದು ಶಾಸಕರಾದಿಯಾಗಿ, ತಹಶಿಲ್ದಾರ್, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿದ್ದು ಇಲ್ಲಿನ ಮಕ್ಕಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಾಸಲು ಹೋಬಳಿಗೆ ತ್ವರಿತವಾಗಿ ಕಾಲೇಜು ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಶಾಸಕ ಟಿ.ವೆಂಕಟರಮಣಯ್ಯ ಸಾಸಲು ಹೋಬಳಿಗೆ ಕಾಲೇಜ್ ಬೇಕೆಂಬ ಮನವಿ ಬಹು ವರ್ಷಗಳ ಬೇಡಿಕೆಯಾಗಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು ಕಡೆಗಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಟಿ.ಎಸ್.ಶಿವರಾಜ್, ಎಪಿಎಂಸಿ ಅಧ್ಯಕ್ಷ ವಿಶ್ವನಾಥರೆಡ್ಡಿ, ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಮಾರೇಗೌಡ, ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ, ಗ್ರಾಮಪಂಚಾಯಿತಿ ಪಿಡಿಒ ಸೌಭಾಗ್ಯಮ್ಮ, ಎಜಾಕ್ಸ್ ಕಂಪನಿಯ ಸಿಎಸ್ ಆರ್ ಅಧಿಕಾರಿ ಮಂಜುನಾಥ್, ರಿಯಾಝ್, ಮುರುಗನ್, ಮೋಹನ್, ಗೋವಿಂದ ರಾಜ್ ಭಟ್ ಸೇರಿದಂತೆ ಗ್ರಾಪಂ ಸದಸ್ಯರು, ಸ್ಥಳೀಯ ಮುಖಂಡರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!