ಶಾಸಕ ಟಿ‌.ವೆಂಕಟರಮಣಯ್ಯ ಮನವಿ: ಸರ್ಕಾರಿ ಶಾಲೆಗೆ 4 ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ ಎಜಾಕ್ಸ್ ಕಂಪನಿ / ಸಾಸಲು ಹೋಬಳಿಯಲ್ಲಿ ಕಾಲೇಜ್ ಇಲ್ಲದೆ ಹೆಣ್ಣು ಮಕ್ಕಳ ಶಿಕ್ಷಣ ಮೊಟಕು: ಗ್ರಾಪಂ ಅಧ್ಯಕ್ಷೆ ಆತಂಕ

ದೊಡ್ಡಬಳ್ಳಾಪುರ: ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್ಆರ್ ಅನುದಾನವನ್ನು ಬಳಸಬೇಕೆಂಬ ಶಾಸಕ ಟಿ.ವೆಂಕಟರಮಣಯ್ಯ ಅವರ ಮನವಿ ಅನ್ವಯ ಸುಮಾರು 55 ಲಕ್ಷ ಅನುದಾನದಲ್ಲಿ, ಆರೂಢಿ ಗ್ರಾಮದ ಸರ್ಕಾರಿ ಶಾಲೆಗೆ 4 ಸುಸಜ್ಜಿತವಾದ ಕಟ್ಟಡ ಹಾಗೂ ಒಂದು ಶೌಚಾಲಯ ನಿರ್ಮಿಸಲಾಗುತ್ತಿದೆ ಎಂದು ಎಜಾಕ್ಸ್ ಕಂಪನಿಯ ಎಚ್.ಆರ್.ಮುಖ್ಯಸ್ಥ ಗಣಪತಿ ತಿಳಿಸಿದರು.

ತಾಲೂಕಿನ ಆರೂಢಿ ಗ್ರಾಮದ ಸರ್ಕಾರಿ ಮಾದರಿ ಪಾಠ ಶಾಲೆ ಆವರಣದಲ್ಲಿ ಎಜಾಕ್ಸ್ ಇಂಜನಿಯರಿಂಗ್ ಪ್ರೈ.ಲಿ ಸಂಸ್ಥೆಯ ಸಿಎಸ್ ಆರ್ ಕಾರ್ಯಕ್ರಮದಡಿಯಲ್ಲಿ ಎಜಾಕ್ಸ್ ಇಂಜನಿಯರಿಂಗ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನೂತನ ನಾಲ್ಕು ಶಾಲಾ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಕಂಪನಿ ಉತ್ಪಾದನೆಗೆ ನೀಡುವ ಮಹತ್ವವನ್ನು ಸಿಎಸ್ ಆರ್ ಅನುದಾನವನ್ನು ಜನಪರ ಕಾರ್ಯಕ್ಕೆ ಬಳಸಲು ಸಹ ಅಷ್ಟೇ ಒತ್ತು ನೀಡಲಾಗುತ್ತಿದೆ, ಇದಕ್ಕೆ ಮುಖ್ಯ ಕಾರಣ ಶಾಸಕ ಟಿ.ವೆಂಕಟರಮಣಯ್ಯ. ಅವರು ಪ್ರತಿ ಕಾರ್ಯಕ್ರಮದಲ್ಲಿ ಸಾಸಲು ಹೋಬಳಿಗೆ ಹೆಚ್ಚಿನ ನೆರವು ನೀಡುವಂತೆ ಮಾಡುತ್ತಿದ್ದ ಮನವಿಯನ್ವಯ ಆರೂಢಿಯಲ್ಲಿ ನಾಲ್ಕು ಕಟ್ಟಡ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಮಾಜಿ ಸಚಿವ ವೀರಪ್ಪಮೊಯ್ಲಿಯವರ ದೂರ ದೃಷ್ಟಿಯಿಂದ ಕೈಗಾರಿಕಾ ಕಂಪನಿಗಳು ಸಿಎಸ್ಆರ್ ಅನುದಾನ ಮೀಸಲಿಟ್ಟು ಸ್ಥಳೀಯ ಪ್ರದೇಶಗಳನ್ನು ಅಭಿವೃದ್ಧಿ ಮಾಡುತ್ತಿವೆ.

ಈ ಮುಂಚೆ ಕೈಗಾರಿಕಾ ಪ್ರದೇಶಕ್ಕೆ ಮೀಸಲಾಗಿದ್ದ ಕಾರ್ಯಕ್ರಮಗಳು, ಇತರೆ ಪ್ರದೇಶಗಳಿಗೂ ವಿಸ್ತರಿಸುವಂತೆ ಪದೇ ಪದೇ ಮಾಡಲಾದ ಮನವಿಗೆ ಸ್ಪಂದಿಸಿ ಇಂಡೋ ಮಿಮ್, ಎಜಾಕ್ಸ್, ಟಫೆ, ಎಲ್ ಅಂಡ್ ಟಿ  ಕಂಪನಿಗಳು ತಾಲೂಕಿನ ಹಲವು ಗ್ರಾಮಗಳಲ್ಲಿ ಶಾಲಾ ಕಟ್ಟಡ, ಕುಡಿಯುವ ನೀರಿನ ಟ್ಯಾಂಕ್,  ಕರೊನಾ ಸಂದರ್ಭದಲ್ಲಿ ಆಕ್ಸಿಜನ್ ಕಾನ್ಸ್ಟ್ರೇಟರ್ ಸೇರಿದಂತೆ ಹಲವು ನೆರವು ನೀಡುವ ಮೂಲಕ ಮನವಿಗೆ ಸ್ಪಂದಿಸಿ ಜನಪರ ಕಾಳಜಿ ತೋರಿವೆ‌ ಎಂದರು.

ಗ್ರಾಪಂ ಅಧ್ಯಕ್ಷೆ ಜಯಮ್ಮಪ್ರಭು ಮಾತನಾಡಿ, ಸಾಸಲು ಹೋಬಳಿ ವ್ಯಾಪ್ತಿಯಲ್ಲಿ ಪದವಿ ಪೂರ್ವ ಕಾಲೇಜು ಇಲ್ಲದೆ ಹೆಣ್ಣುಮಕ್ಕಳು ವಿದ್ಯಾಭ್ಯಾಸ ಮೊಟಕುಗೊಳಿಸುತ್ತಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಇಂದು ಶಾಸಕರಾದಿಯಾಗಿ, ತಹಶಿಲ್ದಾರ್, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿದ್ದು ಇಲ್ಲಿನ ಮಕ್ಕಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಾಸಲು ಹೋಬಳಿಗೆ ತ್ವರಿತವಾಗಿ ಕಾಲೇಜು ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಶಾಸಕ ಟಿ.ವೆಂಕಟರಮಣಯ್ಯ ಸಾಸಲು ಹೋಬಳಿಗೆ ಕಾಲೇಜ್ ಬೇಕೆಂಬ ಮನವಿ ಬಹು ವರ್ಷಗಳ ಬೇಡಿಕೆಯಾಗಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು ಕಡೆಗಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಟಿ.ಎಸ್.ಶಿವರಾಜ್, ಎಪಿಎಂಸಿ ಅಧ್ಯಕ್ಷ ವಿಶ್ವನಾಥರೆಡ್ಡಿ, ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಮಾರೇಗೌಡ, ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ, ಗ್ರಾಮಪಂಚಾಯಿತಿ ಪಿಡಿಒ ಸೌಭಾಗ್ಯಮ್ಮ, ಎಜಾಕ್ಸ್ ಕಂಪನಿಯ ಸಿಎಸ್ ಆರ್ ಅಧಿಕಾರಿ ಮಂಜುನಾಥ್, ರಿಯಾಝ್, ಮುರುಗನ್, ಮೋಹನ್, ಗೋವಿಂದ ರಾಜ್ ಭಟ್ ಸೇರಿದಂತೆ ಗ್ರಾಪಂ ಸದಸ್ಯರು, ಸ್ಥಳೀಯ ಮುಖಂಡರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!