ಶೂನ್ಯ ಕಸ ಉತ್ಪಾದನೆ ಕಡೆಗೆ ಹೆಜ್ಜೆ ಹಾಕೋಣ: ಅನಿಲ್ ಕುಮಾರ್

ಬೆಂ.ಗ್ರಾ.ಜಿಲ್ಲೆ: ಹೆಚ್ಚುತ್ತಿರುವ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಹಲವಾರು ಪರಿಣಾಮಕಾರಿ ಕ್ರಮಗಳನ್ನು ಸಾರ್ವಜನಿಕರು ಪಾಲಿಸುವ ಮೂಲಕ ಶೂನ್ಯ ಕಸ ಉತ್ಪಾದನೆ ಕಡೆಗೆ ಹೆಜ್ಜೆ ಹಾಕೋಣ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿಗಳಾದ ಅನಿಲ್ ಕುಮಾರ್ ಅವರು ತಿಳಿಸಿದರು.

ಸ್ವಚ್ಛ ಭಾರತ ಕಾರ್ಯಕ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಜೂಮ್ ಆ್ಯಪ್ ಮೂಲಕ ಆಯೋಜಿಸಲಾಗಿದ್ದ “ಸಿಂಗಲ್ ಯುಸ್ ಪ್ಲಾಸ್ಟಿಕ್” ವೆಬಿನಾರ್ ಕಾರ್ಯಕ್ರಮದಲ್ಲಿ ಅವರು ಜಾಗೃತಿ ನುಡಿಗಳನ್ನಾಡಿದರು.

ಕೋವಿಡ್ ಸೋಂಕು ಆವರಿಸಿದ ಸಂದರ್ಭದಲ್ಲಿ ಆಹಾರ ಪದಾರ್ಥಗಳ ಪ್ಯಾಂಕಿಂಗ್ ನಿಂದ ಪ್ಲಾಸ್ಟಿಕ್ ಬಳಕೆಯು ಹೆಚ್ಚಾಗಿದ್ದು, ಒಂದು ಬಾರಿ ಬಳಸಿ ಬೀಸಾಡುವ ಪ್ಲಾಸ್ಟಿಕ್ ಉತ್ಪನ್ನಗಳಾದ ನೀರಿನ ಬಾಟಲ್, ಸ್ಪೂನ್, ತಂಪು ಪಾನೀಯದ ಬಾಟಲ್, ಔಷಧೀಯ ಬಾಟಲ್, ರ್ಯಾಪರ್, ಪ್ಲಾಸ್ಟಿಕ್ ವೈಪ್ಸ್, ಪ್ಲಾಸ್ಟಿಕ್ ಕೈ ಚೀಲಗಳ ಬಳಕೆಯಿಂದ ಪರಿಸರ ಮಾಲಿನ್ಯವಾಗುತ್ತಿರುವುದರಿಂದ ಇದನ್ನು ನಿಯಂತ್ರಿಸುವ ಉದ್ದೇಶ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹೊಂದಿದೆ ಎಂದು ತಿಳಿಸಿದರು.

2019ರ ಅಂದಾಜಿನಂತೆ ಪ್ರತಿನಿತ್ಯ 29,400 ಟನ್ ಆಸುಪಾಸು ಪ್ಲಾಸ್ಟಿಕ್ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಕೆರೆ, ಕುಂಟೆ, ಕಾಲುವೆಗಳು, ನದಿ, ಸಮುದ್ರಗಳಿಗೆ ಪ್ಲಾಸ್ಟಿಕ್ ಸೇರಿ ಜೀವರಾಶಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದರಲ್ಲದೆ, ಭೂಮಿಯ ಫಲವತ್ತತೆ ಹದಗೆಡುತ್ತಿದೆ ಹಾಗೂ ಅಂತರ್ಜಲ ಮರುಪೂರಣವಾಗದಿರುವ ಸಾಧ್ಯತೆಗಳಿವೆ ಎಂದು ತಿಳಿಸಿದರು.

ಪ್ಲಾಸ್ಟಿಕ್ ಅನ್ನು ಸುಟ್ಟಾಗ ಅಪಾಯಕಾರಿ ಅನಿಲಗಳು ಹೊರಸೂಸುವುದರಿಂದ ರಾಸುಗಳ ಮೇಲೆ ಪರಿಣಾಮ ಬೀರುವುದರ ಜೊತೆಗೆ ಮನುಷ್ಯರು ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇರುವುದರಿಂದ ಈ ಕುರಿತು ಸ್ಥಳೀಯ ಹಂತದಲ್ಲಿ ಗ್ರಾಮ ಪಂಚಾಯಿತಿ, ಮುನ್ಸಿಪಾಲಿಟಿ ಅವರು ಘನತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದು ಹೇಳಿದರು.

ಪ್ಲಾಸ್ಟಿಕ್ ಮರು ಬಳಕೆ ಘಟಕಗಳನ್ನು ನಿರ್ಮಿಸಲಾಗಿದ್ದು, ಪ್ಲಾಸ್ಟಿಕ್ ಕೈಚೀಲ, ಕವರ್ ಗಳು 50 ಮೈಕ್ರಾನ್ ಗಿಂತ ಹೆಚ್ಚಿರುವ ಇರುವ ಪ್ಲಾಸ್ಟಿಕ್ ಬ್ಯಾಗ್ ಅನ್ನು ಬಳಕೆ ಮಾಡಲು ಅನುಮತಿ ಇರುವುದರಿಂದ, ಇಂತಹ ಪ್ಲಾಸ್ಟಿಕ್ ಅನ್ನು ಸಂಗ್ರಹಿಸಿ ಮರು ಬಳಕೆ ಮಾಡಲು ಹಾಗೂ ಪರಿಶೀಲಿಸಲು ಮಾಲಿನ್ಯ ನಿಯಂತ್ರಣ ಮಂಡಳಿಯು ಒತ್ತು ನೀಡಿದೆ ಎಂದು ತಿಳಿಸಿದರು.

ಪ್ಲಾಸ್ಟಿಕ್ ಉತ್ಪತ್ತಿ ಆಗುವ ಹಂತದಲ್ಲಿಯೇ ಬೇರ್ಪಡಿಸಿ, ಮರು ಬಳಕೆ ಮಾಡಲು ಘಟಕಗಳಿಗೆ ನೀಡಬೇಕು ಎಂದರಲ್ಲದೆ, ಮರುಬಳಕೆಗೆ ಯೋಗ್ಯವಲ್ಲದ ಪ್ಲಾಸ್ಟಿಕ್ ಅನ್ನು ರಸ್ತೆ ಕಾಮಗಾರಿ ಹಾಗೂ ಕೆಲವೊಮ್ಮೆ ಸಿಮೆಂಟ್ ಉದ್ದಿಮೆಗೆ ಬಳಕೆ ಮಾಡಲಾಗುತ್ತದೆ ಎಂದರು.

ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಹಾಗೂ ಆಹಾರ ಪದಾರ್ಥಗಳ ಪ್ಯಾಕಿಂಗ್ ನಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ತಗ್ಗಿಸಿ, ನೈಸರ್ಗಿಕ ಹಾಗೂ ಪರಿಸರ ಸ್ನೇಹಿ ಕೈಚೀಲಗಳ ಬಳಕೆಯನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರ ಪ್ಲಾಸ್ಟಿಕ್ ಬಳಕೆ ತಡೆಗೆ ಈಗಾಗಲೇ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯ ಸರ್ಕಾರವು 2016 ರಲ್ಲಿ ಹೊರಡಿಸಿದ ಆದೇಶದನ್ವಯ, ಕ್ಯಾರಿ ಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಬಾವುಟ, ಥರ್ಮಕೋಲ್ ಗಳ ಬಳಕೆಯನ್ನು ನಿಲ್ಲಿಸಲಾಗಿದ್ದು, ಗ್ರಾಮ ಪಂಚಾಯಿತಿಗಳು, ಮುನ್ಸಿಪಾಲಿಟಿ ವತಿಯಿಂದ  ಸ್ಥಳೀಯ ಮಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ಕುರಿತು ಜಾಗೃತಿ ಮೂಡಿಸುವುದು ಅಗತ್ಯ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!