ಶೂನ್ಯ ಕಸ ಉತ್ಪಾದನೆ ಕಡೆಗೆ ಹೆಜ್ಜೆ ಹಾಕೋಣ: ಅನಿಲ್ ಕುಮಾರ್

ಬೆಂ.ಗ್ರಾ.ಜಿಲ್ಲೆ: ಹೆಚ್ಚುತ್ತಿರುವ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡಿರುವ ಹಲವಾರು ಪರಿಣಾಮಕಾರಿ ಕ್ರಮಗಳನ್ನು ಸಾರ್ವಜನಿಕರು ಪಾಲಿಸುವ ಮೂಲಕ ಶೂನ್ಯ ಕಸ ಉತ್ಪಾದನೆ ಕಡೆಗೆ ಹೆಜ್ಜೆ ಹಾಕೋಣ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿಗಳಾದ ಅನಿಲ್ ಕುಮಾರ್ ಅವರು ತಿಳಿಸಿದರು.

ಸ್ವಚ್ಛ ಭಾರತ ಕಾರ್ಯಕ್ರಮದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಜೂಮ್ ಆ್ಯಪ್ ಮೂಲಕ ಆಯೋಜಿಸಲಾಗಿದ್ದ “ಸಿಂಗಲ್ ಯುಸ್ ಪ್ಲಾಸ್ಟಿಕ್” ವೆಬಿನಾರ್ ಕಾರ್ಯಕ್ರಮದಲ್ಲಿ ಅವರು ಜಾಗೃತಿ ನುಡಿಗಳನ್ನಾಡಿದರು.

ಕೋವಿಡ್ ಸೋಂಕು ಆವರಿಸಿದ ಸಂದರ್ಭದಲ್ಲಿ ಆಹಾರ ಪದಾರ್ಥಗಳ ಪ್ಯಾಂಕಿಂಗ್ ನಿಂದ ಪ್ಲಾಸ್ಟಿಕ್ ಬಳಕೆಯು ಹೆಚ್ಚಾಗಿದ್ದು, ಒಂದು ಬಾರಿ ಬಳಸಿ ಬೀಸಾಡುವ ಪ್ಲಾಸ್ಟಿಕ್ ಉತ್ಪನ್ನಗಳಾದ ನೀರಿನ ಬಾಟಲ್, ಸ್ಪೂನ್, ತಂಪು ಪಾನೀಯದ ಬಾಟಲ್, ಔಷಧೀಯ ಬಾಟಲ್, ರ್ಯಾಪರ್, ಪ್ಲಾಸ್ಟಿಕ್ ವೈಪ್ಸ್, ಪ್ಲಾಸ್ಟಿಕ್ ಕೈ ಚೀಲಗಳ ಬಳಕೆಯಿಂದ ಪರಿಸರ ಮಾಲಿನ್ಯವಾಗುತ್ತಿರುವುದರಿಂದ ಇದನ್ನು ನಿಯಂತ್ರಿಸುವ ಉದ್ದೇಶ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹೊಂದಿದೆ ಎಂದು ತಿಳಿಸಿದರು.

2019ರ ಅಂದಾಜಿನಂತೆ ಪ್ರತಿನಿತ್ಯ 29,400 ಟನ್ ಆಸುಪಾಸು ಪ್ಲಾಸ್ಟಿಕ್ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಕೆರೆ, ಕುಂಟೆ, ಕಾಲುವೆಗಳು, ನದಿ, ಸಮುದ್ರಗಳಿಗೆ ಪ್ಲಾಸ್ಟಿಕ್ ಸೇರಿ ಜೀವರಾಶಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದರಲ್ಲದೆ, ಭೂಮಿಯ ಫಲವತ್ತತೆ ಹದಗೆಡುತ್ತಿದೆ ಹಾಗೂ ಅಂತರ್ಜಲ ಮರುಪೂರಣವಾಗದಿರುವ ಸಾಧ್ಯತೆಗಳಿವೆ ಎಂದು ತಿಳಿಸಿದರು.

ಪ್ಲಾಸ್ಟಿಕ್ ಅನ್ನು ಸುಟ್ಟಾಗ ಅಪಾಯಕಾರಿ ಅನಿಲಗಳು ಹೊರಸೂಸುವುದರಿಂದ ರಾಸುಗಳ ಮೇಲೆ ಪರಿಣಾಮ ಬೀರುವುದರ ಜೊತೆಗೆ ಮನುಷ್ಯರು ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇರುವುದರಿಂದ ಈ ಕುರಿತು ಸ್ಥಳೀಯ ಹಂತದಲ್ಲಿ ಗ್ರಾಮ ಪಂಚಾಯಿತಿ, ಮುನ್ಸಿಪಾಲಿಟಿ ಅವರು ಘನತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದು ಹೇಳಿದರು.

ಪ್ಲಾಸ್ಟಿಕ್ ಮರು ಬಳಕೆ ಘಟಕಗಳನ್ನು ನಿರ್ಮಿಸಲಾಗಿದ್ದು, ಪ್ಲಾಸ್ಟಿಕ್ ಕೈಚೀಲ, ಕವರ್ ಗಳು 50 ಮೈಕ್ರಾನ್ ಗಿಂತ ಹೆಚ್ಚಿರುವ ಇರುವ ಪ್ಲಾಸ್ಟಿಕ್ ಬ್ಯಾಗ್ ಅನ್ನು ಬಳಕೆ ಮಾಡಲು ಅನುಮತಿ ಇರುವುದರಿಂದ, ಇಂತಹ ಪ್ಲಾಸ್ಟಿಕ್ ಅನ್ನು ಸಂಗ್ರಹಿಸಿ ಮರು ಬಳಕೆ ಮಾಡಲು ಹಾಗೂ ಪರಿಶೀಲಿಸಲು ಮಾಲಿನ್ಯ ನಿಯಂತ್ರಣ ಮಂಡಳಿಯು ಒತ್ತು ನೀಡಿದೆ ಎಂದು ತಿಳಿಸಿದರು.

ಪ್ಲಾಸ್ಟಿಕ್ ಉತ್ಪತ್ತಿ ಆಗುವ ಹಂತದಲ್ಲಿಯೇ ಬೇರ್ಪಡಿಸಿ, ಮರು ಬಳಕೆ ಮಾಡಲು ಘಟಕಗಳಿಗೆ ನೀಡಬೇಕು ಎಂದರಲ್ಲದೆ, ಮರುಬಳಕೆಗೆ ಯೋಗ್ಯವಲ್ಲದ ಪ್ಲಾಸ್ಟಿಕ್ ಅನ್ನು ರಸ್ತೆ ಕಾಮಗಾರಿ ಹಾಗೂ ಕೆಲವೊಮ್ಮೆ ಸಿಮೆಂಟ್ ಉದ್ದಿಮೆಗೆ ಬಳಕೆ ಮಾಡಲಾಗುತ್ತದೆ ಎಂದರು.

ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಹಾಗೂ ಆಹಾರ ಪದಾರ್ಥಗಳ ಪ್ಯಾಕಿಂಗ್ ನಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ತಗ್ಗಿಸಿ, ನೈಸರ್ಗಿಕ ಹಾಗೂ ಪರಿಸರ ಸ್ನೇಹಿ ಕೈಚೀಲಗಳ ಬಳಕೆಯನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರ ಪ್ಲಾಸ್ಟಿಕ್ ಬಳಕೆ ತಡೆಗೆ ಈಗಾಗಲೇ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯ ಸರ್ಕಾರವು 2016 ರಲ್ಲಿ ಹೊರಡಿಸಿದ ಆದೇಶದನ್ವಯ, ಕ್ಯಾರಿ ಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಬಾವುಟ, ಥರ್ಮಕೋಲ್ ಗಳ ಬಳಕೆಯನ್ನು ನಿಲ್ಲಿಸಲಾಗಿದ್ದು, ಗ್ರಾಮ ಪಂಚಾಯಿತಿಗಳು, ಮುನ್ಸಿಪಾಲಿಟಿ ವತಿಯಿಂದ  ಸ್ಥಳೀಯ ಮಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ಕುರಿತು ಜಾಗೃತಿ ಮೂಡಿಸುವುದು ಅಗತ್ಯ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು

[ccc_my_favorite_select_button post_id="118571"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಜಗಳ ಮಾಡುತ್ತಿದ್ದ ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ ಮಗಳು ಮೃತಪಟ್ಟಿರುವ ದಾರುಣ ಘಟನೆ (Suicide) ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="118543"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!