ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಿ: ವಿಜಯಾ.ಈ.ರವಿಕುಮಾರ್

ಬೆಂ.ಗ್ರಾ.ಜಿಲ್ಲೆ: ಕ್ರಿಯಾ ಯೋಜನೆಯಲ್ಲಿ ಇರುವಂತೆ ಇಲಾಖೆವಾರು ಯೋಜನೆಗಳ ಕುರಿತು ಮಾಹಿತಿ ಪಡೆದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಸೆಪ್ಟೆಂಬರ್-2021 ಮಾಹೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಯೋಜನೆಗಳ ಬಗ್ಗೆ  ಕಾರ್ಯಾಗಾರಗಳನ್ನು ನಡೆಸುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ರವಾನಿಸಿ, ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.ತೋಟಗಾರಿಕೆ ಇಲಾಖೆಯ ಬಿಲ್ ಬಾಕಿಯಿದ್ದು, ಅನುದಾನ ಬಿಡುಗಡೆ ಆದ ತಕ್ಷಣ ಕೆಲಸ ಪ್ರಾರಂಭಿಸಬೇಕು ಎಂದರಲ್ಲದೇ, ರೇಷ್ಮೆ ಹುಳು ಸಾಕಾಣಿಕಾ ಮನೆಗೆ ಸಹಾಯಧನ ನೀಡಬೇಕು ಹಾಗೂ ಪಶುಸಂಗೋಪನೆ ಇಲಾಖೆಯಿಂದ 15 ರಿಂದ 18 ಸಾವಿರ ಮೊತ್ತದ ಮಿಲ್ಕ್ ಮಿಷನ್ ನೀಡಲಾಗುತ್ತಿದ್ದು, ರಾಸುಗಳಿಗೆ ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ ಎರಡು ಕೌ ಮ್ಯಾಟ್ಸ್ (ರಬ್ಬರ್ ಮ್ಯಾಟ್ಸ್) ನೀಡಲು ಬಾಕಿ ಇರುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ತಿಳಿಸಿದರು. ಐದು ಎಕರೆ ಜಮೀನು ಹೊಂದಿರುವ ರೈತರಿಗೆ ಸಕಾಲ ಯೋಜನೆಯಡಿ ಶೇ. 90℅ ರಷ್ಟು ಸಹಾಯಧನ ನೀಡಲಾಗುತ್ತಿದ್ದು, ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಬಲೆ, ಹರಿಗೋಲಿನ ಕಿಟ್ ವಿತರಿಸಲಾಗುತ್ತಿದೆ ಎಂದು ಹೇಳಿದರು.

ಸರಳ ವಿವಾಹಕ್ಕೆ ಇತ್ತೀಚೆಗೆ ಜನರು ಆಸಕ್ತಿ ತೋರಿಸದಿರುವುದರಿಂದ, ಸರಳ ವಿವಾಹದ ಕುರಿತು ಪ್ರಚಾರ ನೀಡಬೇಕು ಹಾಗೂ ವಿಧವಾ ಪುನರ್ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ಇರುವ ಕಾರಣ ಸರ್ಕಾರದಿಂದ ಕಲಾ ತಂಡಗಳ ಮುಖಾಂತರ ಬೀದಿ ನಾಟಕಗಳನ್ನು ಮಾಡಿಸುವ ಮೂಲಕ ದೌರ್ಜನ್ಯ ತಡೆ ಕಾಯ್ದೆ,1990ರ ಆಕ್ಟ್ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.ಅಂತರ್ಜಾತಿ ವಿವಾಹ ಪ್ರೋತ್ಸಾಹಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿಯ ಯುವಕರನ್ನು ಮದುವೆಯಾದರೆ ರೂ.2‌.5 ಲಕ್ಷ ಹಾಗೂ ಪರಿಶಿಷ್ಟ ಜಾತಿಯ ಯುವತಿಯನ್ನು ಮದುವೆಯಾದರೆ ರೂ.3 ಲಕ್ಷ ಗಳ ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸಿದರು.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉದ್ಯಮಶೀಲತೆ ಯೋಜನೆಯಡಿ ಶೇ. 50 ರಷ್ಟು ಸಹಾಯಧನವಿದ್ದು, ಇನ್ನುಳಿದ ಶೇ‌. 50 ಅನ್ನು ಬ್ಯಾಂಕುಗಳು ನೀಡಲಿವೆ ಹಾಗೂ ಗಂಗಾ ಕಲ್ಯಾಣ ಯೋಜನೆಗೆ ರಾಜ್ಯ ಸರ್ಕಾರದಿಂದ ಟೆಂಡರ್ ಪ್ರಕ್ರಿಯೆ ಬಾಕಿ ಉಳಿದಿದೆ ಎಂದು ತಿಳಿಸಿದರು.

ಅಲೆಮಾರಿ/ಅರೆ ಅಲೆಮಾರಿಗಳು, ಸಫಾಯಿ ಕರ್ಮಚಾರಿಗಳು ಹಾಗೂ ಪೌರ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಶೀಘ್ರವಾಗಿ ತಲುಪಿಸುವ ಕೆಲಸವಾಗಬೇಕು ಎಂದರಲ್ಲದೇ ತ್ವರಿತವಾಗಿ ನಾಲ್ಕು ತಾಲ್ಲೂಕುಗಳಲ್ಲಿ ಪೌರಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಗಾರಗಳನ್ನು ನಡೆಸಬೇಕು ಎಂದು ಸೂಚಿಸಿದರು.

ಪರಿಶಿಷ್ಟ ಜಾತಿಯ ಅಂಗವಿಕರಿಗೆ ಆಧಾರ ಯೋಜನೆಯಡಿ ರೂ. 50,000 ಸಹಾಯಧನ ನಿಗದಿ ಪಡಿಸಿದ್ದು, ಸ್ವಯಂ ಉದ್ಯೋಗ ಕೈಗೊಳ್ಳುವ ವಿಕಲಚೇತನರಿಗೆ ರೂ. 50,000 ಸಹಾಯಧನ, 50,000 ಲೋನ್ ಹಾಗೂ ಅಂಗವಿಕಲರನ್ನು ವಿವಾಹವಾದವರಿಗೆ ರೂ.50,000 ಗಳ ಪ್ರೋತ್ಸಾಹಧನ ಇದರೊಂದಿಗೆ ಟಾಕಿಂಗ್ ಲ್ಯಾಪ್‌ಟಾಪ್ ಸಹ ನೀಡಲಾಗುತ್ತಿದೆ ಎಂದರು.

ಗ್ರಾಮೀಣ ಕುಶಲಕರ್ಮಿಗಳಿಗೆ ರೂ. 5,000 ಗಳ ಟೂಲ್ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದರಲ್ಲದೆ, ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳಲ್ಲಿನ ಶಾಲೆಗಳು, ಕಾಲೇಜುಗಳು, ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ಕುರಿತ ಜಾಗೃತಿ ಮೂಡಿಸಲು ಗೋಡೆ ಬರಹಗಳು, ಬೀದಿ ನಾಟಕಗಳು ಮಾಡಿಸಬೇಕು ಹಾಗೂ ಕೆಳ ಹಂತದಿಂದಲೇ ಸಮಸ್ಯೆಗಳ ಬಗ್ಗೆ ತಿಳಿದು ಪರಿಹಾರ ಸೂಚಿಸುವುದು ಅಧಿಕಾರಿಗಳ ಕರ್ತವ್ಯವಾಗಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಸ್. ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಭವ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್.ಎಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಪ್ಪೇಸ್ವಾಮಿ, ಅಂಗವಿಕಲರ ಕಲ್ಯಾಣಧಿಕಾರಿ ಜಗದೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ...

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]