ಧಾರ್ಮಿಕ ಪೂಜಾ ವಿಧಿ-ವಿಧಾನಗಳಿಂದ ಹಾಸನಾಂಬ ದೇವಿಯ ದರ್ಶನ ಪ್ರಾರಂಭ

ಹಾಸನ: ನಗರದ ಅಧಿದೇವತೆ ಹಾಸನಾಂಬ ದೇವಾಲಯದ ಬಾಗಿಲು ಇಂದಿನಿಂದ ತೆರೆಯಲಾಗಿದೆ. ಧಾರ್ಮಿಕ ಪೂಜಾ ವಿಧಿ-ವಿಧಾನಗಳಿಂದ ಇಂದು ಮದ್ಯಾಹ್ನ 12.15ಕ್ಕೆ ದೇವಿಯ ದರ್ಶನ ಪ್ರಾರಂಭವಾಯಿತು. 

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಶಾಖಾ ಮಠದ ಶಂಭುನಾಥ ಸ್ವಾಮೀಜಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಣ್ಣ ನೀರಾವರಿ ಇಲಾಖೆ ಸಚಿವ ಮಾಧುಸ್ವಮಿ, ಜಿಲ್ಲಾ ಸತ್ರ ನ್ಯಾಯಾದೀಶರಾದ ನ್ಯಾಯಾದೀಶರಾದ ನಾ.ಶಿವಣ್ಣ, ಜಿಲ್ಲಾಧಿಕಾರಿ ಆರ್ ಗಿರೀಶ್ಹಾಸನಾಂಬ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್ ಮತ್ತಿತರರು ಸರ್ವರಿಗೂ ದೇವಾಲಯದ ಬಾಗಿಲು ತೆರೆಯುವ ಮೂಲಕ ಸಾರ್ವಜನಿಕ ದರ್ಶನಕ್ಕೆ ಚಾಲನೆ ನೀಡಿದರು. 

ಸಂಪ್ರಾದಯವಾಗಿ ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬ ದೇವರ ದರ್ಶನಕ್ಕೆ  ರಾಜ ವಂಶಸ್ಥ ನಂಜರಾಜ ಅರಸ್ ಬಾಳೆಕಂದು ಕಡಿಯುವ  ವಿಧಿವಿಧಾನ ನೆರವೇರಿಸಿದರು. ದೇವಿ ದರ್ಶನದ ನಂತರ ಸಿದ್ದೇಶ್ವರ ಸ್ವಾಮಿಗೆ ಸ್ವಾಮಿಗಳು ಹಾಗೂ ಸಚಿವರು ಅಧಿಕಾರಿಗಳು ಪೂಜೆ ಸಲ್ಲಿಸಿದರು.

ಅಬಕಾರಿ ಇಲಾಖೆ ಸಚಿವ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಇಂದು ಶುಭ ಮುಹೂರ್ತದಲ್ಲಿ ಹಾಸನಾಂಬ ಜಾತ್ರೆಗೆ ಚಾಲನೆ ನೀಡಲಾಗಿದೆ, ವರ್ಷಕೊಮ್ಮೆ ಬಾಗಿಲು ತೆಗೆಯುವುದು ಈ ದೇವಸ್ಥಾನದ ವಿಶೇಷ,  ವರ್ಷದವರೆಗೂ ಉರಿಯುವ ಜ್ಯೋತಿ ದೇವಿಯ ಪವಾಡ ಈ ಬಾರಿಯ ದೇವಸ್ಥಾನದ ಬಾಗಿಲು ತೆರೆದಾಗ ದೀಪ ಉರಿಯುತ್ತಿತ್ತು ಇದನ್ನು ಕಣ್ತುಂಬಿಕೊಳ್ಳುವುದೇ ಒಂದು ಸಂತೋಷದ ವಿಚಾರ ಎಂದರು.

ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿದೆ, ದರ್ಶನಕ್ಕಾಗಿ ಕಾದು ನಿಲ್ಲುವ ಭಕ್ತಾದಿಗಳಿಗೆ ಟಾರ್ಪಲ್ ಕಮಾನುಗಳನ್ನು ನಿರ್ಮಿಸಿ ನೆರಳಿನ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದರು. ಕರೋನಾ ಹಿನ್ನೆಲೆಯಲ್ಲಿ ಕಳೆದ ಬಾರಿ ದೇವಿಯ ಸಾರ್ವಜನಿಕ ದರ್ಶನಕ್ಕೆ ನಿಷೇದ ಹೇರಲಾಗಿತ್ತು, ಆದರೆ ಈ ಬಾರಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ ಭಕ್ತಾದಿಗಳು  ಜಿಲ್ಲಾಡಳಿತದೊಂದಿಗೆ ಸಹಕರಿಸಿ ದರ್ಶನ ಪಡೆಯುವಂತೆ ತಿಳಿಸಿದರು.

ಕಳೆದ ವರ್ಷ ಕರೋನಾದಿಂದಾಗಿ ಸಾರ್ವಜನಿಕರಿಗೆ ದರ್ಶನ ಭಾಗ್ಯ ಲಭಿಸಿರಲಿಲ್ಲ. ಈ ಬಾರಿ ಹಾಸನಾಂಬೆ ತಾಯಿಯ ಆಶೀರ್ವಾದದಿಂದ ಸಾರ್ವಜನಿಕರಿಗೆ  ದರ್ಶನ ಭಾಗ್ಯ ಸಿಕ್ಕಿದೆ. ಅಲ್ಲದೆ ಕೊರೋನಾವೂ  ಕೂಡ ಕಡಿಮೆಯಾಗುತ್ತಿದೆ ಎಂದು ಹೇಳಿದರು. ರಾತ್ರಿ 12 ಗಂಟೆಯಿಂದ ಬೆಳಗ್ಗೆ  6 ಗಂಟೆವರೆಗೂ ಪೂಜಾ ಕೈಂಕರ್ಯಗಳು ನೆರವೇರಲಿವೆ. ನಂತರ ಸಾರ್ವಜನಿಕರಿಗೆ  ದರ್ಶನಕ್ಕ ಅವಕಾಶ ಕಲ್ಪಿಸಲಾಗಿದ್ದು,  ಮಧ್ಯಾಹ್ನ1 ರಿಂದ 2 ಗಂಟೆವರೆಗೂ ಪೂಜೆಗಳು ನಡೆಯುವುದರಿಂದ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದರು.

ತಾಯಿಯ ದರ್ಶನ ಪಡೆಯಲು ಲಕ್ಷಾಂತರ ಮಂದಿ ಆಗಮಿಸುತ್ತಿದ್ದು, ಇಡೀ ನಾಡಿನ ಜನರಿಗೆ ಆರೋಗ್ಯ, ಆಯಸ್ಸನ್ನು  ದೇವಿ ಕರುಣಿಸಲಿ, ದೇವಿಯ ಎಲ್ಲರಿಗೂ ಒಳಿತು ಮಾಡಲಿ  ಎಂದು ಸಚಿವರು ತಿಳಿಸಿದರು. ರಣಘಟ್ಟ ಏತ ನೀರಾವರಿ ಯೋಜನೆಗೆ ಹಲವು ವರ್ಷಗಳ ಬೇಡಿಕೆ ಇತ್ತು. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ 125  ಕೋಟಿ ರೂ. ಹಣ ಮಂಜೂರು ಮಾಡಿದ್ದರು. ಅದರ ಉದ್ಘಾಟನೆ ಕಾರ್ಯಕ್ರಮವು ಅ.30 ರಂದು  ನಡೆಯುವ ನಿರೀಕ್ಷೆ ಇದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ ಎಂದರು. 

ಇದೇ ವೇಳೆ ಮಾತನಾಡಿದ ಕಾನೂನು ಸಂದೀಯ ಮತ್ತು ಸಣ್ಣ ನೀರಾವರಿ ಇಲಾಖೆ ಸಚಿವ ಮಾಧುಸ್ವಮಿ ಅವರು ಹಾಸನಾಂಬೆಯ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ಕಳೆದ ವರ್ಷ ಕೊರೋನಾ ಹೆಚ್ಚಿರುವುದರಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ  ನೀಡಿರಲಿಲ್ಲ ಈ ಬಾರಿಯ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದರು. ತಾಯಿಯ ಆಶೀರ್ವಾದಿಂದ ನಾಡಿನ ಒಳಿತಾಗಲಿ ಹಾಸನಾಂಬೆ ತಾಯಿಯ ಆಶೀರ್ವಾದದಿಂದ   ಕೊರೋನಾ ಮೂರನೇ ಅಲೆ ರಾಜ್ಯದಲ್ಲಿ ಪರಿಣಾಮಕಾರಿಯಾಗಲಿಲ್ಲ  ಎಂದರು. ಆದ್ದರಿಂದ ಈ ಬಾರಿ ದರ್ಶನಕ್ಕೆ ಎಲ್ಲರಿಗೂ ಅವಕಾಶ ಮಾಡಿಕೊಟ್ಟಿದ್ದು,  ಮಳೆ, ಬೆಳೆ,  ಉತ್ತಮವಾಗಿದ್ದು, ತಾಯಿಯ ಆಶೀರ್ವಾದಿಂದ ನಾಡು ಸುಭೀಕ್ಷವಾಗಿರಲಿ ಎಂದು ಕಾನೂನು ಸಂದೀಯ ಮತ್ತು ಸಣ್ಣ ನೀರಾವರಿ ಸಚಿವ  ಜೆ.ಸಿ.ಮಾಧುಸ್ವಾಮಿ  ಹೇಳಿದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಮಾತನಾಡಿ  ಪ್ರತಿ ವರ್ಷದಂತೆ ಈ ಬಾರಿಯೂ ಶುಭ ಮುಹೂರ್ತದಲ್ಲಿ ಹಾಸನಾಂಬೆಯ ದರ್ಶನಕ್ಕಾಗಿ ಮಹಾದ್ವಾರವನ್ನು ತೆರೆಯಲಾಗಿದೆ ಎಂದರು. ಪುರುಷನ ಪ್ರತಿಬಿಂಬವಾಗಿರುವಂತಹ ಶಕ್ತಿಮಾತೆ ಹಾಸನದ ದೇವಸ್ಥಾನದಲ್ಲಿ ಮೂರು ರೀತಿ ನೆಲೆಗೊಂಡಿದ್ದಾಳೆ. ಗರ್ಭಗುಡಿಯಲ್ಲಿ ನೆಲೆಸಿರುವ ದೇವಿಗೆ ಮೂರು ರೂಪ ಇದೆ. ಲಕ್ಷ್ಮಿಯಾಗಿ, ಕಾಳಿಯಾಗಿ, ಸರಸ್ವತಿಯಾಗಿ ನೆಲೆಸಿದ್ದಾಳೆ. ಈ ಪವಿತ್ರ ಸ್ಥಳಕ್ಕೆ ಬರುವವರಿಗೆ ಮೂರೂ ದೇವಿಯರ ದರ್ಶನ ಆಗಲಿದೆ ಎಂದು ತಿಳಿಸಿದರು.

ಜ್ಞಾನಶಕ್ತಿ, ಪರಾಶಕ್ತಿ, ಇಚ್ಛಾಶಕ್ತಿ, ಸಂಕಷ್ಟ ಪರಿಹರಿಸುವ ಕೆಲಸ ತಾಯಿ ಮಾಡಲಿ. ಕೊರೊನಾ 2 ವರ್ಷದಿಂದ ಕಾಡಿದೆ. ತಾಯಿ ಕೃಪೆಯಿಂದ ಪೂರ್ಣಪ್ರಮಾಣದಲ್ಲಿ ಈ ರೋಗ ನಾಡಿನಿಂದ ಹೋಗಲಿ, ಜನರ ಬಾಳು ಸಂತೋಷವಾಗಿರಲಿ. ಆಧ್ಯಾತ್ಮಿಕದ ಜೊತೆ ವಿಜ್ಞಾನವನ್ನೂ ಮೈಗೂಡಿಸಿಕೊಂಡಿದ್ದೇ ಆದರೆ ಬದುಕು ಸುಂದರವಾಗಿರಲಿದೆ. ಶಾಂತಿ, ಸದ್ಭಕ್ತಿಯಿಂದ ದೇವಿಯ ದರ್ಶನ ಮಾಡಿ, ದೇವಿ ಕೃಪೆಗೆ ಪಾತ್ರರಾಗಿ ಎಂದರು.

ಈ ವೇಳೆಯಲ್ಲಿ ಶಾಸಕರಾದ  ಪ್ರೀತಂ ಜೆ. ಗೌಡ ,ಜಿಲ್ಲಾಧಿಕಾರಿ ಆರ್ ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ , ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ. ಎನ್ ನಂದಿನಿ, ಹಾಸನಾಂಬ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ  ಉಪವಿಭಾಗದಿಕಾರಿ ಬಿ.ಎ ಜಗದೀಶ್, ಸಕಲೇಶಪುರ ಉಪವಿಭಾಗಾಧಿಕಾರಿ ಪ್ರತೀಕ್ ಬಾಯಾಲ್ ಹಾಗೂ ಮತ್ತಿತರರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!