ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ದೀಪಾವಳಿ ನಂತರ ಅಂದರೆ ನ. 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ, ಉತ್ಸವಾದಿ ಸೇವೆಗಳು ನಡೆಯುವ ಕಾರಣ ದೇವರ ದರ್ಶನಕ್ಕೆ ಸಮಯಾವಕಾಶ ಹೊಂದಿಸಲಾಗಿದೆ.
ದರ್ಶನ ಸಮಯ: ಬೆಳಗ್ಗೆ 6ರಿಂದ ಅಪರಾಹ್ನ 2.30, ಸಂಜೆ 5ರಿಂದ ರಾತ್ರಿ 8.30ರ ವರೆಗೆ (ವಿಶೇಷ ದಿನಗಳಲ್ಲಿ ಸಮಯ ವ್ಯತ್ಯಾಸವಾಗುವ ಸಾಧ್ಯತೆಯಿದೆ). ಅನ್ನಪೂರ್ಣ ಛತ್ರದಲ್ಲಿ ಬೆಳಗ್ಗೆ 10.30ರಿಂದ 3 ಹಾಗೂ ರಾತ್ರಿ 7ರಿಂದ 9ರ ವರೆಗೆ ಭಕ್ತರಿಗೆ ಊಟದ ವ್ಯವಸ್ಥೆ ಇರಲಿದೆ.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೆಳಗ್ಗೆ 9 ರಿಂದ 12, ಸಂಜೆ 4ರಿಂದ 5 ಹಾಗೂ ರಾತ್ರಿ 7ರಿಂದ 9ರ ವರೆಗೆ ಭೇಟಿ ಮಾಡಬಹುದಾಗಿದೆ.
ಮಂಜೂಷಾ ವಸ್ತು ಸಂಗ್ರಹಾಲಯವು ಬೆಳಗ್ಗೆ 9ರಿಂದ ಸಂಜೆ 5.30ರ ವರೆಗೆ ವೀಕ್ಷಣೆಗೆ ತೆರೆದಿರಲಿದ್ದು, ಕಾರು ಮ್ಯೂಸಿಯಂ ಬೆಳಗ್ಗೆ 8.30ರಿಂದ ಅಪರಾಹ್ನ 1 ಹಾಗೂ 2ರಿಂದ 7ರ ವರೆಗೆ ತೆರೆ ದಿರುತ್ತದೆ. ಹರಕೆ ಮಂಡೆ (ಮುಡಿ ತೆಗೆಯಲು) ಬೆಳಗ್ಗೆ 6ರಿಂದ ಅಪರಾಹ್ನ 2 ಮತ್ತು ಸಂಜೆ 5ರಿಂದ 7ರ ವರೆಗೆ ತೆರೆದಿರಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……