ಯುವ ನಟ ಪುನೀತ್​ ರಾಜ್​ ಕುಮಾರ್ ಅಕಾಲಿಕ ನಿಧನಕ್ಕೆ ಕಂಬನಿ ಮಿಡಿದ ದೊಡ್ಡಬಳ್ಳಾಪುರ ತಾಲೂಕು: ನಗರ, ಗ್ರಾಮಾಂತರ ಪ್ರದೇಶದ ಬಹುತೇಕ ಕಡೆಗಳಲ್ಲಿ ಶ್ರದ್ಧಾಂಜಲಿ

ದೊಡ್ಡಬಳ್ಳಾಪುರ: ಯುವ ನಟ ಪುನೀತ್​ ರಾಜ್​ ಕುಮಾರ್ ಅವರ ಅಕಾಲಿಕ ಮರಣಕ್ಕೆ ತಾಲೂಕಿನ ಜನತೆ ಕಂಬನಿ ಮಿಡಿದಿದ್ದಾರೆ.

ತಾಲೂಕಿನ ನಗರ ಗ್ರಾಮಾಂತರ ಸೇರಿದಂತೆ ಬಹುತೇಕ ಕಡೆಗಳಲ್ಲಿ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

ತಾಲೂಕು ಕಲಾವಿದರ ಸಂಘದ ವತಿಯಿಂದ ಶ್ರದ್ದಾಂಜಲಿ: ಶುಕ್ರವಾರ ನಿಧನರಾದ ಕನ್ನಡದ ಖ್ಯಾತ ನಟ ಪವರ್‌ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ವತಿಯಿಂದ ಶ್ರದ್ದಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮ ಕಲಾಭವನದಲ್ಲಿ ನಡೆಯಿತು.

ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜ್‍ಕುಮಾರ್ ಕೊಡುಗೆ ಅಪಾರವಾಗಿದೆ. ಚಿಕ್ಕ ವಯಸ್ಸಿನಲ್ಲಿಯೇ ಅಸಾಮಾನ್ಯ ಸಾಧನೆ ಮಾಡಿದ್ದ ಪುನೀತ್ ರಾಜ್‍ಕುಮಾರ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ಬರಸಿಡಿಲು ಬಡಿದಂತಾಗಿದೆ.  ಸಾಮಾಜಿಕ ಕಳಕಳಿ ಹಾಗೂ ಜೀವನ ಮೌಲ್ಯಗಳನ್ನು ಬಿಂಬಿಸುವ ಪುನೀತ್ ರಾಜ್‍ಕುಮಾರ್ ಅವರ ಚಿತ್ರಗಳು ಕುಟುಂಬ ಸಮೇತ ನೋಡುವಂತಹ ಚಿತ್ರಗಳಾಗಿವೆ. ಚಿತ್ರರಂಗದ ಹೊರತಾಗಿ ಸರಳ ಸಜ್ಜನಿಕೆಯ ಮಾನವೀಯ ವ್ಯಕ್ತಿಯಾಗಿದ್ದ ಪುನೀತ್ ರಾಜ್‍ಕುಮಾರ್ ಅವರು, ವೃದ್ದಾಶ್ರಮ, ಅನಾಥಾಶ್ರಮ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗಳು ಮೊದಲಾದ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ವಿವೇಕಾನಂದರಂತೆ ಚಿಕ್ಕ ವಯಸ್ಸಿನಲ್ಲಿಯೇ ಅದ್ವಿತೀಯ ಸಾಧನೆ ಮಾಡಿದವರಾಗಿದ್ದಾರೆ.

ಪುನೀತ್ ರಾಜ್‍ಕುಮಾರ್ ಕಲಾವಿದರಿಗೆ ಮಾದರಿಯಾಗಿ, ಕಲೆಯ ಹೊರತಾಗಿ ಮೇರು ವ್ಯಕ್ತಿತ್ವ ಹೊಂದಿದ್ದ ನಟ. ವರನಟ ರಾಜ್‍ಕುಮಾರ್ ಅವರ ನಂತರದ ಸ್ಥಾನವನ್ನು ತುಂಬಿದ್ದ ಪುನೀತ್ ರಾಜ್‍ಕುಮಾರ್ ಅವರು, ಇನ್ನೂ ಸಾಧನೆ ಮಾಡುವ ಅವಕಾಶವಿದ್ದು, ಈಗ ಬರದ ಲೋಕಕ್ಕೆ ಪಯಣಿಸಿರುವುದು ಚಿತ್ರರಸಿಕರಿಗೆ ಅಪಾರ ನೋವುಂಟಾಗಿದೆ ಎಂದು ನೆರೆದಿದ್ದ ಕಲಾವಿದರು ಕಂಬನಿ ಮಿಡಿದರು.

ಕಾರ್ಯಕ್ರಮದಲ್ಲಿ  ರಂಗ ಕಲಾವಿದರಾದ ಕೆ.ಪಿ.ಪ್ರಕಾಶ್, ಬಿ.ಜಿ.ಅಮರನಾಥ್, ತಾಲೂಕು ಕಲಾವಿದರ ಸಂಘದ ಅಧ್ಯಕ್ಷ  ಎನ್.ರಾಮಾಂಜಿನಪ್ಪ , ಉಪಾಧ್ಯಕ್ಷ ಹೆಚ್. ಪ್ರಕಾಶ್ ರಾವ್, ಪ್ರಧಾನ ಕಾರ್ಯದರ್ಶಿ ಬಿ.ಚಂದ್ರಶೇಖರ್, ಸಹ ಕಾರ್ಯದರ್ಶಿ ಎ. ಮಂಜುನಾಥ್, ಖಜಾಂಚಿ ಹೆಚ್ ಮುನಿಪಾಪಯ್ಯ, ನಿರ್ದೇಶಕರಾದ ವೆಂಕಟೇಶ್, ಶಿವಶಂಕರ್ ರೆಡ್ಡಿ, ರವಿಕುಮಾರ್ ಮತ್ತು ಸಲಹಾಸಮಿತಿ ಸದಸ್ಯರಾದ ವೆಂಕಟರಾಜು, ಜಿ ಮುನಿರಾಜು, ಅನಿಕೇತನ ಟ್ರಸ್ಟ್ ಕಾರ್ಯದರ್ಶಿ ಡಿ.ಶ್ರೀಕಾಂತ, ಮುಖಂಡರಾದ ನಾಗರಾಜ್ ಮತ್ತಿತರರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!