ಚಿನ್ನ, ಬೆಳ್ಳಿ, ದುಡ್ಡು, ತಿನ್ನಲಿಕ್ಕಾಗಲ್ಲ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ರೈತರು ಬೆಳೆದ ಅನ್ನವನ್ನಲ್ಲದೇ ಚಿನ್ನ, ಬೆಳ್ಳಿ, ದುಡ್ಡನ್ನು ತಿನ್ನಲು ಸಾಧ್ಯವಿಲ್ಲ ಅಂತಹ ರೈತರಿಗೆ ಅತ್ಯಾಧುನಿಕ ಕೃಷಿ ಪದ್ದತಿಯ ತಾಂತ್ರಿಕ ವಿಧಾನಗಳನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯಮಗ್ನರಾಗಬೇಕೆಂದು ಜಿಲ್ಲಾಧಿಕಾರಿ ಆರ್.ಲತಾ ಜಿ.ಕೆ.ವಿ.ಕೆ ಮತ್ತು ಕೃಷಿ ವಿಶ್ವವಿದ್ಯಾಲಯ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. 

ಅವರು ಶುಕ್ರವಾರ ಕೃಷಿ ವಿಶ್ವವಿದ್ಯಾಲಯ, ಕೃಷಿ ಮಹಾವಿದ್ಯಾಲಯ, ಜಿ.ಕೆ.ವಿ.ಕೆ, ಜುವಾರಿ ಆಗ್ರೋ ಕೆಮಿಕಲ್ಸ್ ಲಿಮಿಟೆಡ್ ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ನಡೆದ ಕೃಷಿ ವಸ್ತುಪ್ರದರ್ಶನ-2021-22ರ ಪ್ರಯುಕ್ತ ಕೃಷಿ ಪರ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರೈತರು ಬೆಳೆ ಬೆಳೆದರಷ್ಟೇ ನಾವೆಲ್ಲ ಬದುಕಲು ಸಾಧ್ಯ. ಚಿನ್ನ, ಬೆಳ್ಳಿ, ಹಣವನ್ನು ತಿಂದು ಬದುಕಲು ಸಾಧ್ಯವಿಲ್ಲ. ರೈತರು ಈ ದೇಶದ ಬೆನ್ನೆಲುಬು. ಕೊರೋನಾ ಸಂದರ್ಭದಲ್ಲಿ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಆದರೆ ರೈತ ಮಾತ್ರ ತನ್ನ ಕೃಷಿಯನ್ನು ಮುಂದುವರೆಸಿ ಎಲ್ಲರ ಹಸಿವನ್ನು ನೀಗಿಸಿದ್ದಾನೆ. ರೈತರು ತುಂಬಾ ಶ್ರಮ ಜೀವಿಗಳು. ಕಷ್ಟದ ಸಮಯದಲ್ಲೂ ಎಲ್ಲರ ಕೈ ಹಿಡಿದಿದ್ದಾರೆ    ರೈತರಿಲ್ಲದ ಯಾವುದೇ ಜಿಲ್ಲೆ, ರಾಜ್ಯ, ದೇಶ ಅಥವಾ ಸಮಾಜವನ್ನು ಊಹಿಸಿಕೊಳ್ಳಲು ಸಹ ಸಾಧ್ಯವಿಲ್ಲ. ಎಂದರು. 

ಜಿ.ಕೆ.ವಿ.ಕೆ ಮತ್ತು ಕೃಷಿ ವಿಶ್ವವಿದ್ಯಾಲಯ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಕಳೆದ 90 ದಿನಗಳ ಹಿಂದೆ ಮರಳುಕುಂಟೆ ಗ್ರಾಮಕ್ಕೆ ಬಂದು ತಾವು ಪಠ್ಯದಲ್ಲಿ ಓದಿದ ವಿಷಯವನ್ನು ಅಳವಡಿಸಿಕೊಂಡು ಇಲ್ಲಿನ ರೈತರೊಂದಿಗೆ ಬೆರೆತು ಅವರ ಜಮೀನಿನಲ್ಲಿಯೇ ಹಲವಾರು ಬೆಳೆಗಳನ್ನು ಯಶಸ್ವಿಯಾಗಿ ಬೆಳೆದು  ತೋರಿಸಿದ್ದೀರಿ, ಆ ಎಲ್ಲಾ ಬೆಳೆಗಳನ್ನು ಸೇರಿಸಿ ಕೃಷಿ ವಸ್ತು ಪ್ರದರ್ಶನವನ್ನು ಏರ್ಪಡಿಸಿದ್ದೀರಿ. ಇದು ರೈತರಿಗೆ ಬಹಳಷ್ಟು ಸಹಕಾರಿಯಾಗಿದೆ. ಇಂತಹ ತಾಂತ್ರಿಕ ಕೃಷಿ ಪದ್ಧತಿಗಳನ್ನು ರೈತರು ಅಳವಡಿಸಿಕೊಂಡು ಹೆಚ್ಚಿನ ಬೆಳೆ ಬೆಳೆಯುವ ಮೂಲಕ ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳುವಂತೆ ಹಾಗೂ ಇತ್ತೀಚೆಗೆ ಬಿದ್ದ ವರ್ಷಧಾರೆಯಿಂದಾಗಿ ಜಿಲ್ಲೆಯ ಬಹುತೇಕ ಎಲ್ಲಾ ಕೆರೆಗಳು ಭರ್ತಿಯಾಗಿರುವುದು ಸಂತೋಷದ ವಿಷಯ. ಇಂತಹ ಪೂರಕ ವಾತಾವರಣವನ್ನು ಸದ್ಬಳಕೆ ಮಾಡಿಕೊಂಡು ಇನ್ನಷ್ಟು ಅಭಿವೃದ್ಧಿಯಾಗಬೇಕುಂದು ರೈತರಲ್ಲಿ ಮನವಿ ಮಾಡಿದರು.

ಕೃಷಿಯಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ಕೃಷಿ ವೈದ್ಯರಿದ್ದಂತೆ, ಯಾವ ಯಾವ ಸಂದರ್ಭದಲ್ಲಿ ಯಾವ ಯಾವ ಬೆಳೆಗಳ್ನು ಬೆಳೆಯಬೇಕು. ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆಯಬೇಕು. ಅತಿ ಹೆಚ್ಚಿನ ಬೆಳೆ ಬೆಳೆದಾಗ ಯಾವ ರೀತಿ ದಾಸ್ತಾನು ಮಾಡಬೇಕು ಹಾಗೂ ಪರ್ಯಾಯ ಮಾರ್ಗಗಳನ್ನು ಬಳಸಿಕೊಂಡು ಆದಾಯವನ್ನು ಯಾವ ರೀತಿ ದ್ವಿಗುಣ ಮಾಡಿಕೊಳ್ಳಬೇಕು ಎಂಬ ಬಗ್ಗೆ ರೈತರಿಗೆ ತಿಳಿಸಿಕೊಡಬೇಕು. ಅತ್ಯಾಧುನಿಕ ಕೃಷಿ ಪದ್ಧತಿಯ ತಾಂತ್ರಿಕ ವಿಧಾನಗಳನ್ನು ಅಳವಡಿಕೊಂಡು ಸರಿಯಾದ ವ್ಯಸಾಯ ಕ್ರಮವನ್ನು ಅನುಸರಿಸುವ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವುದರಲ್ಲಿ ನಿಜವಾದ ಸಾರ್ಥಕತೆ ಇದೆ. ಅಂತಹ ಸಾರ್ಥಕತೆಯ ಬದುಕು ನಮ್ಮದಾಗಲಿ ಎಂದು ವಿದ್ಯಾರ್ಥಿಗಳಿಗೆ ಆಶಯಗಳನ್ನು ತಿಳಿಸಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಪಿ.ಶಿವಶಂಕರ್ ಅವರು ಮಾತನಾಡಿ,ಕೃಷಿ ಪದವಿ ವಿದ್ಯಾರ್ಥಿಗಳು ರೈತರೊಂದಿಗೆ ಬೆರೆತು ಕೃಷಿ ಪದ್ಧತಿಯ ತಾಂತ್ರಿಕ ವಿಧಾನಗಳನ್ನು ರೈತರಿಗೆ ತಿಳಿಸಿಕೊಟ್ಟ ರೀತಿಯಲ್ಲಿಯೇ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ರೂಪಿಸುವುದು ಒಳಿತು. ಜಿಲ್ಲೆಯ ರೈತರು ಕೃಷಿಯಲ್ಲಿ ಅತ್ಯಾಧುನಿಕ ವಿಧಾನಗಳನ್ನು ಅಳವಡಿಕೊಂಡಿದ್ದಾರೆ. ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು 90 ದಿನಗಳ ಕಾಲಾವಧಿಯಲ್ಲಿ ಕೃಷಿ ಚಟುವಟಿಕೆಯನ್ನು ಕೈಗೊಂಡು ಕೃಷಿ ಕ್ಷೇತ್ರದಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಪೂರ್ವಭಾವಿಯಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಮಣ್ಣಿನ ಪರೀಕ್ಷೆ, ಮಣ್ಣಿನ ಗುಣಧರ್ಮ, ಬೇಸಾಯ ಮಾಡುವ ಬೆಳೆಗೆ ನೀರಿನ ಪೋಷಕಾಂಶಗಳ ಅವಶ್ಯಕತೆ, ಕಳೆಗಳ ನಾಶ ನಿರ್ವಹಣೆಯ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ನೆರವಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆಯ ಸಹ ವಿಸ್ತರಣಾ ನಿರ್ದೇಶಕರಾದ ಡಾ.ಕೆ.ನಾರಾಯಣಗೌಡ, ಎಂ.ಎಸ್.ಐ.ಎಲ್ ನಿರ್ದೇಶಕರಾದ ಶ್ರೀಧರ್, ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ರಾಮಾಂಜಿನಪ್ಪ, ಕೃಷಿ ಇಲಾಖೆಯ ಉಪನಿರ್ದೇಶಕರಾದ ಚಂದ್ರಕುಮಾರ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಪಿ.ನಾಗೇಶ್, ತಾ.ಪಂ.ಅಧ್ಯಕ್ಷರು ಬಿ.ಎಂ.ರಾಮಸ್ವಾಮಿ, ಎಪಿಎಂಸಿ ಅಧ್ಯಕ್ಷರಾದ ನಾರಾಯಣಸ್ವಾಮಿ, ಎಪಿಎಂಸಿ ಉಪಾಧ್ಯಕ್ಷರಾದ ಜಿ.ಬಿ.ನಾರಾಯಣಸ್ವಾಮಿ, ತಾ.ಪಂ.ಮಾಜಿ ಅಧ್ಯಕ್ಷರಾದ ಪಿ.ಮೋಹನ್, ಎ.ಪಿ.ಎಂ.ಸಿ ಮಾರುಕಟ್ಟೆಯ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಕೃಷಿ ತಜ್ಞರು, ಮರಳುಕುಂಟೆ ಗ್ರಾ.ಪಂ.ಅಧ್ಯಕ್ಷರು, ಸದಸ್ಯರು, ಗ್ರಾಮದ ಜನಪ್ರತಿನಿಧಿಗಳು, ರೈತ ಮುಖಂಡರು, ಶಾಲಾ ಶಿಕ್ಷಕರು/ಸಿಬ್ಬಂದಿ, ಜಿ.ಕೆ.ವಿ.ಕೆ ಮತ್ತು ಕೃಷಿ ವಿಶ್ವವಿದ್ಯಾಲಯ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!