ನಟ ಪುನೀತ್ ರಾಜ್‍ಕುಮಾರ್ ಅಗಲಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಬೇಕಾದ್ದು ನೋವಿನ ಸಂಗತಿ: ಜೆ.ರಾಜೇಂದ್ರ

ದೊಡ್ಡಬಳ್ಳಾಪುರ: ಸಾಮಾಜಿಕ ಕಳಿಕಳಿಯುಳ್ಳ ಖ್ಯಾತ ಯುವ ನಟ ಪುನೀತ್ ರಾಜ್‍ಕುಮಾರ್ ಅವರ ಅಗಲಿಕೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಆಚರಿಸಬೇಕಾದ ಸನ್ನಿವೇಶ ಎದುರಾಗಿರುವುದು ನೋವಿನ ಸಂಗತಿ ಎಂದು ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ನಿರ್ದೇಶಕ ಜೆ.ರಾಜೇಂದ್ರ ಹೇಳಿದರು.

ಶ್ರೀ ದೇವರಾಜ ಅರಸ್ ಅ‌ಂತಾರಾಷ್ಟ್ರೀಯ ವಸತಿ ಶಾಲೆಯಲ್ಲಿ ಆಯೋಜಿಸಿದ್ದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯದಲ್ಲಿ ಅವರು ಮಾತನಾಡಿದರು.

66ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಸಿಬೇಕಿತ್ತು, ಆದರೆ ನಟ ಪುನೀತ್ ರಾಜ್‍ಕುಮಾರ್ ಅವರ ಅಕಾಲಿಕ ಸಾವಿನಿಂದ ಸರಳವಾಗಿ ಆಚರಿಸಬೇಕಿದೆ. ಸಾಮಾಜಿಕ ಕಳಕಳಿ ಹೊಂದಿದ್ದ ಪುನೀತ್ ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದರು.

ಆರ್.ಎಲ್.ಜಾಲಪ್ಪ ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಜೆ.ನಾಗೇಂದ್ರ ಸ್ವಾಮಿ ಮಾತನಾಡಿ, ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನ. ಇಂದಿನ ಕರ್ನಾಟಕ ಮೊದಲಿಗೆ ಮೈಸೂರು ಹೆಸರಿನಿಂದ ಗುರುತಿಸಿಕೊಂಡಿತ್ತು ಎಂದು ಏಕೀಕರಣದ ಕುರಿತು ವಿವರಿಸಿದರು.

ಶಾಲೆಯ ಉಪಪ್ರಾಂಶುಪಾಲರಾದ ಧನಂಜಯ ಮಕ್ಕಳ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯ ಕುರಿತು ಕಾನೂನು ಅರಿವು ಕುರಿತು ಮಾತನಾಡಿ, ಮಕ್ಕಳ ಹಕ್ಕುಗಳಿಗೆ ದಕ್ಕೆ ಉಂಟಾದರೆ ಅವರು ಉಚಿತ ಹೆಲ್ಪ್ಲೈನ್ ನಂಬರ್ 1098 ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. 6 ರಿಂದ 14 ವರ್ಷದ ಪ್ರತಿಯೊಬ್ಬ ಮಗುವು ಕಡ್ಡಾಯವಾಗಿ ಶಿಕ್ಷಣವನ್ನು ಪಡೆಯಬೇಕು. 14 ವರ್ಷದ ಒಳಗಿನ ಯಾವುದೇ ಬಾಲಕ ಅಥವಾ ಬಾಲಕಿಯನ್ನು ಕೆಲಸಕ್ಕೆ ನೇಮಿಸುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಒಂದು ವೇಳೆ ಮಕ್ಕಳನ್ನು ಕಾರ್ಮಿಕರನ್ನಾಗಿ ಮಾಡಿಕೊಂಡರೆ ಅವರ ತಂದೆ-ತಾಯಿ ಮತ್ತು ಕಂಪನಿಯ ಮಾಲಿಕ ಶಿಕ್ಷೆಗೆ ಗುರಿಯಾಗುತ್ತಾರೆ.

18 ವರ್ಷದ ಒಳಗಿನ ಹೆಣ್ಣುಮಕ್ಕಳಿಗೆ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಯಾವುದೇ ಮಹಿಳೆ ಮತ್ತು ಹೆಣ್ಣು ಮಗು ಯಾರಿಂದಲೂ ಸಹ ದೌರ್ಜನ್ಯಕ್ಕೆ ಒಳಗಾಗಬಾರದು. ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಥವಾ ಹೆಣ್ಣು ಮಗು ತಾಲೂಕಿನ ಕಾನೂನು ಸೇವಾ ಸಮಿತಿಯ ಸಲಹೆ ಪಡೆದು ಕಾನೂನು ಕ್ರಮವನ್ನು ದೌರ್ಜನ್ಯ ಮಾಡಿದ ವ್ಯಕ್ತಿಯ ಮೇಲೆ ಕೈಗೊಳ್ಳಬಹುದು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನ ಮತ್ತು ದೈಹಿಕ ನ್ಯೂನತೆಯುಳ್ಳ ಅಥವಾ ಗುಂಪು ದಾಳಿ ಘರ್ಷಣೆ ಪ್ರಕೃತಿ ವಿಕೋಪ ಪ್ರವಾಹ ಭೂಕಂಪ ತುತ್ತ ದಂತಹ ವ್ಯಕ್ತಿಗಳು ಮತ್ತು ಮತೀಯ ಗಲಭೆಗೆ ಗುರಿಯಾದ ಅಂತಹ ವ್ಯಕ್ತಿಗಳು ಉಚಿತವಾಗಿ ತಾಲೂಕಿನ ಕಾನೂನು ಸೇವಾ ಸಮಿತಿ ಅಥವಾ ಜಿಲ್ಲಾ ಕಾನೂನು ಸೇವಾ ಸಮಿತಿ ಸಹಾಯ ಪಡೆಯಬಹುದು. ವಾರ್ಷಿಕ ಆದಾಯ ಮೂರು ಲಕ್ಷದ ಒಳಗಿನ ಕುಟುಂಬದ ಯಾವುದೇ ವ್ಯಕ್ತಿಯು ದೌರ್ಜನ್ಯಕ್ಕೆ ಒಳಗಾದ ಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಅಥವಾ ಜಿಲ್ಲಾ ಕಾನೂನು ಸೇವಾ ಸಮಿತಿಯ ಸಹಾಯವನ್ನು ಉಚಿತವಾಗಿ ಪಡೆಯಬಹುದು.

ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯು ತಕ್ಷಣದ ಸಹಾಯಕ್ಕಾಗಿ ಉಚಿತ ಹೆಲ್ಪ್ಲೈನ್ ನಂಬರ್ 1800 425 90 900 ಗೆ ಕರೆ ಮಾಡಬಹುದು. ಮೊಬೈಲ್ ಬಳಸುವಂತಹ ವ್ಯಕ್ತಿಗಳು NALSA Mobile app ಉಚಿತ ಕಾನೂನು ನೆರವನ್ನು ಪಡೆಯಬಹುದು ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ, ಭೋಧಕೇತರ ಸಿಬ್ಬಂದಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಟೀಕಿಸಿದರು.

[ccc_my_favorite_select_button post_id="111978"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ ಪತ್ತೆ..!

ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ

ಧರ್ಮಸ್ಥಳ (Dharmasthala): ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ.31 ರಂದು 6ನೇ ಗುರುತಿನ ಎಸ್‌ಐಟಿ (SIT) ನಡೆಸಿದ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿ ವಿಜ್ಞಾನ ಅಧಿಕಾರಿಗಳು ಅದನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಧರ್ಮಸ್ಥಳ ಗ್ರಾಮ

[ccc_my_favorite_select_button post_id="111942"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!