ದಿನ ಭವಿಷ್ಯ: ಶನಿವಾರ , ನವೆಂಬರ್ 06, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯ ಮಹಿಳೆಯರಿಗೆ ಇಂದು ಅನಗತ್ಯವಾಗಿ ಅಪವಾದಗಳನ್ನು ಎದುರಿಸುವ ಸಂದರ್ಭ

ಮೇಷ: ಈ ರಾಶಿಯವರು ಎಷ್ಟೇ ಅಭಿವೃದ್ಧಿಯಾಗಬೇಕೆಂದು ಯೋಚಿಸಿದರೂ ಒಂದೊಂದೇ ಸಮಸ್ಯೆಗಳು ಹೈರಾಣಾಗಿಸಲಿದೆ. ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಆರೋಗ್ಯ ಸಂಬಂಧಿತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ವೃಷಭ: ಈ ರಾಶಿಯವರು ವಿಶೇಷ ವ್ಯಕ್ತಿಗಳನ್ನು ಭೇಟಿಯಾಗಬಹುದು. ಬಹುದಿನಗಳಿಂದ ಬಯಸಿದ್ದ ವಸ್ತು ನಿಮ್ಮ ಕೈ ಸೇರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ವ್ಯಾಪಾರಿಗಳು ವ್ಯವಹಾರದಲ್ಲಿ ಮುನ್ನಡೆ ಅನುಭವಿಸಲಿದ್ದಾರೆ.

ಮಿಥುನ: ಈ ರಾಶಿಯ ಮಹಿಳೆಯರಿಗೆ ಇಂದು ಅನಗತ್ಯವಾಗಿ ಅಪವಾದಗಳನ್ನು ಎದುರಿಸುವ ಸಂದರ್ಭಗಳು ಎದುರಾದೀತು. ತಾಳ್ಮೆ, ಸಂಯಮ ಅಗತ್ಯ. ಹಿಂದೆ ಹೂಡಿದ್ದ ಬಂಡವಾಳಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕಿರು ಸಂಚಾರ ಮಾಡುವ ಸಾಧ್ಯತೆ.

ಕಟಕ: ಈ ರಾಶಿಯ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ. ಕಾರ್ಯರಂಗದಲ್ಲಿ ಆಪ್ತರ ಸಹಾಯ ದೊರೆಯಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಈ ರಾಶಿಯವರು ವೃತ್ತಿ ಮಾತ್ಸರ್ಯದಿಂದ ಅಂದುಕೊಂಡ ಸ್ಥಾನ ಮಾನ ಸ್ವಲ್ಪದರಲ್ಲೇ ಕೈ ತಪ್ಪಿ ಹೋದೀತು. ಮನಸ್ಸಿನ ನೆಮ್ಮದಿಗಾಗಿ ದೇವಾಲಯ ಸಂದರ್ಶಿಸಲಿದ್ದೀರಿ. ಕೃಷಿಕರಿಗೆ ಕೈಗೆ ಬಂದ ಬೆಳೆಗೆ ತಕ್ಕ ಬೆಲೆ ಸಿಗಲಿದೆ.

ಕನ್ಯಾ: ಈ ರಾಶಿಯವರು ಅನಿರೀಕ್ಷಿತ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾದ ಸಂದರ್ಭ ಬರಲಿದೆ. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಪ್ರೀತಿ ಪಾತ್ರರ ಕಷ್ಟಗಳಿಗೆ ನೆರವಾಗಲಿದ್ದೀರಿ.

ತುಲಾ: ಈ ರಾಶಿಯವರು ಹೊಸ ಬಗೆಯ ಯೋಜನೆಗಳನ್ನು ಜಾರಿಗೆ ತರಲು ಇದು ಸಕಾಲ. ಕಟ್ಟಡ ಕಾಮಗಾರಿ ಕೆಲಸಗಳಿಗೆ ವಿಘ‍್ನಗಳು ತೋರಿಬಂದರೂ ಅಂತಿಮವಾಗಿ ಕೆಲಸ ಮುಂದುವರಿಯಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ವೃಶ್ಚಿಕ: ಈ ರಾಶಿಯವರು ಇಂದು  ಅಂದುಕೊಂಡ ಕೆಲಸ ಸುಗಮವಾಗಿ ನೆರವೇರಲಿದ್ದು, ಮನಸ್ಸಿಗೆ ಸಂತೋಷವಾಗುವುದು. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮನೆಯಲ್ಲಿ ಶುಭ ಮಂಗಳ ಕಾರ್ಯ ನೆರವೇರಿಸುವ ಸಾಧ್ಯತೆ.

ಧನಸ್ಸು: ಈ ರಾಶಿಯವರು ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸುವುದು ಉತ್ತಮ.

ಮಕರ: ಈ ರಾಶಿಯವರಿಗೆ ಬಹುದಿನಗಳ ಕನಸು ನನಸು ಮಾಡಲು ಮುಂದಾಗಲಿದ್ದಾರೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಸಂಗಾತಿಯ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆಯಿದೆ.

ಕುಂಭ: ಈ ರಾಶಿಯವರು ಕೌಟುಂಬಿಕವಾಗಿ ಸಮಸ್ಯೆಗಳನ್ನು ಸಂಗಾತಿಯೊಂದಿಗೆ ಪರಾಮರ್ಶಿಸಿ ಪರಿಹರಿಸಲಿದ್ದೀರಿ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ.

ಮೀನ: ಈ ರಾಶಿಯವರು ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ವಿನಾಕಾರಣ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಂವತ್ಸರ: ಶ್ರೀ ಪ್ಲವ ನಾಮ ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಕಾರ್ತಿಕ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ದ್ವಿತೀಯ 

ನಕ್ಷತ್ರ:  ಅನುರಾಧ ನಕ್ಷತ್ರ

ರಾಹುಕಾಲ: 09:13 ರಿಂದ 10:40

ಗುಳಿಕಕಾಲ: 06:18 ರಿಂದ 07:46

ಯಮಗಂಡಕಾಲ: 01:34 ರಿಂದ 03:01

ಈ ದಿನದ ವಿಶೇಷ: ಹಾಸನಾಂಬ ದೇವಾಲಯದ ಬಾಗಿಲು ಹಾಕುವುದು.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮುಸ್ಲಿಮರು ಹಿಂದೂಗಳಂತೆಯೇ ನಮಗೆ ಪ್ರಿಯರು: ನಿತಿನ್ ಗಡ್ಕರಿ

ಮುಸ್ಲಿಮರು ಹಿಂದೂಗಳಂತೆಯೇ ನಮಗೆ ಪ್ರಿಯರು: ನಿತಿನ್ ಗಡ್ಕರಿ

ಬಿಜೆಪಿ (BJP) ಸಿದ್ಧಾಂತವು ಜಾತಿ ಮತ್ತು ಧರ್ಮವನ್ನು ಲೆಕ್ಕಿಸದೆ ಎಲ್ಲರಿಗೂ ಕೆಲಸ ಮಾಡುವಂತೆ ಕಲಿಸುತ್ತದೆ ಮತ್ತು ಅದು ಮುಸ್ಲಿಮರ ವಿರುದ್ಧವಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ.

[ccc_my_favorite_select_button post_id="118311"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!