ನ.10ರಂದು ರಾಜ್ಯ ರೈತ ಸಂಘದಿಂದ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುತ್ತಿಗೆ

ದೊಡ್ಡಬಳ್ಳಾಪುರ: ರೈತರಿಗೆ ಮಾಹಿತಿ ಹಾಗೂ ಪರಿಹಾರ ನೀಡದೆ ತಾಲ್ಲೂಕಿನ ತಳಗವಾರ, ಕೋಳೂರು, ಕಂಟನಕುಂಟೆ, ಅರಳುಮಲ್ಲಿಗೆ, ಅಣಗಲಪುರ ಮುಂತಾದ ತಾಲೂಕಿನ ಸುಮಾರು 20 ಗ್ರಾಮಗಳ ಮೂಲಕ ಹಾದು ಹೋಗಿದ್ದ ಅಲ್ಪ ಪ್ರಮಾಣದ ವಿದ್ಯುತ್ ಲೈನ್ಗೆ ಬದಲಾಗಿ ಬೃಹತ್ ಕಂಬಗಳು ಹಾಗೂ ಬಹು ಮಾರ್ಗದ ಲೈನ್ ಅಳವಡಿಸಲು ಮುಂದಾಗಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನವೆಂಬರ್ 10ರಂದು ತಾಲೂಕು ಕಚೇರಿ ಮುತ್ತಿಗೆ ಹಾಕಲಾಗುವುದೆಂದು ರೈತ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಸತೀಶ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಹಲವಾರು ಕಾರಣಗಳಿಂದಾಗಿ ರೈತರಿಗೆ ಈಗ ಉಳಿದಿರುವುದೇ ತುಂಡು ಭೂಮಿ. ಅಲ್ಪಸ್ವಲ್ಪ ಕೃಷಿ ಭೂಮಿಯಲ್ಲಿ ಬೃಹತ್ ಗಾತ್ರದ ವಿದ್ಯುತ್ ಕಂಬಗಳನ್ನು ಅಳವಡಿಸಿದರೆ ಕೃಷಿ ಮಾಡಲು ಸಾಧ್ಯವೇ ಇಲ್ಲದಾಗಲಿದೆ. ಈ ಕಾಮಗಾರಿ ಕೆಪಿಟಿಸಿಎಲ್ ಮಾಡುತ್ತಿದೆಯೋ, ಗ್ರೀಡ್ ಮಾಡುತ್ತಿದೆಯೋ ಮಾಹಿತಿಯೇ ಇಲ್ಲವಾಗಿದೆ.

ರೈತರಿಗೆ ಯಾವುದೇ ಮಾಹಿತಿ ನೀಡದೆ ಕಂಬಗಳನ್ನು ಅಳವಡಿಸಲು ಗುಂಡಿಗಳನ್ನು ತೋಡಲು ಮುಂದಾಗಿರುವುದು ಖಂಡನಿಯ. ಭೂಮಿ ಕಳೆದುಕೊಳ್ಳುವ ರೈತರಿಗೆ ನಿಯಮದ ಪ್ರಕಾರ ಸೂಕ್ತ ಪರಿಹಾರ ನೀಡದೆ ಹಾಗೂ ರೈತರ ಅನುಮತಿ ಇಲ್ಲದೆ ಜಮೀನಿಗೆ ಪ್ರವೇಶಿಸಿ ಗುರುತು ಮಾಡುತ್ತಿರುವುದು ಖಂಡನೀಯ. ಕಂದಾಯ ಇಲಾಖೆ ಅಧಿಕಾರಿಗಳು ಭೂಮಿ ಸರ್ವೆ ನಡೆಸಿ ಪರಿಹಾರ ನಿಗದಿ ಮಾಡಬೇಕಿದೆ, ಇದನ್ನು ಹೊರತು ಪಡಿಸಿ ಬಲವಂತದಿಂದ ಕಾಮಗಾರಿ ನಡೆಸಲು ಮುಂದಾದರೆ ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಬಚ್ಚಹಳ್ಳಿ ಸತೀಶ್ ಮಾತನಾಡಿ, ಗೌರಿಬಿದನೂರಿನಿಂದ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶ ಮತ್ತು ತೊಂಡೆಬಾವಿಯಿಂದ ದೊಡ್ಡಬಳ್ಳಾಪುರಕ್ಕೆ 220 ರಿಂದ 400ಕೆವಿ ವಿದ್ಯುತ್ ಕಾರಿಡಾರ್ ಮಾರ್ಗಗಳನ್ನು ಮಾಡಲಾಗುತ್ತಿದೆ. ಇದರ ಕುರಿತು ರೈತರಿಗೆ ಮಾಹಿತಿಯೇ ನೀಡದೆ, ಜಮೀನುಗಳಿಗೆ ಅತಿಕ್ರಮ ಪ್ರವೇಶ ಮಾಡಿ ಗುರುತು ಮಾಡುತ್ತಿದ್ದಾರೆ.

ಈ ಮುಂಚೆ ಅಳವಡಿಸಿದ ಕಂಬಗಳಿಂದ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಿಲ್ಲ. ನಿಯಮಗಳ ಅನ್ವಯ ಪರಿಹಾರ ನೀಡದೆ ಕಂಬಗಳ ಅಳವಡಿಕೆಗೆ ಮುಂದಾಗಿರುವುದು ಸರಿಯಲ್ಲ, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ, ತಾಲೂಕು ದಂಡಾಧಿಕಾರಿಗಳ ಗಮನ ಸೆಳೆಯಲು ಸುಮಾರು ಒಂದು ಸಾವಿರಕ್ಕೂ ಹೆಚ್ಚು ರೈತರೊಂದಿಗೆ ತಾಲೂಕು ಕಚೇರಿ ಮುತ್ತಿಗೆ ಹಾಕಲಾಗುತ್ತಿದೆ.

ನವೆಂಬರ್ 10ರಂದು ಬೆಳಗ್ಗೆ ನೆಲದಾಂಜನೇಯ ಸ್ವಾಮಿ ದೇವಾಲಯದಿಂದ ಮೆರವಣಿಗೆ ಹೊರಟು ತಾಲೂಕು ಕಚೇರಿ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ರೈತರಾದ ವಿಶ್ವನಾಥ್, ಮೋಹನ್ ಮೂರ್ತಿ, ಗೀತಾ ವಸಂತ್ ಗೌಡ, ಮುನಿಯಪ್ಪ, ಕೆಂಪರಾಜು ಮತ್ತಿತರರಿದ್ದರು…

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]