ದಿನ ಭವಿಷ್ಯ: ಸೋಮವಾರ ನವೆಂಬರ್ 08, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ

ಮೇಷ: ಈ ರಾಶಿಯವರು ಬಹು ದಿನಗಳಿಂದ ಕಾಡುತ್ತಿದ್ದ ಚಿಂತೆಗೆ ಪರಿಹಾರ ಕಂಡುಗೊಂಡು ನೆಮ್ಮದಿ ನಿಮ್ಮದಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಾದೀತು. ಆದರೆ ಸಂಗಾತಿಯ ಸಹಕಾರ ಮನಸ್ಸಿಗೆ ನೆಮ್ಮದಿ ಕೊಡುವುದು. ಅನಗತ್ಯ ಚಿಂತೆ ಬೇಡ.

ವೃಷಭ: ಈ ರಾಶಿಯವರು  ಮಹಿಳೆಯರಿಂದ ನಿಮ್ಮ ಸುಖ-ಸಂತೋಷ ಇಮ್ಮಡಿಯಾಗಲಿದೆ. ವ್ಯಾಪಾರಿಗಳಿಗೆ ಧನ ಲಾಭವಾದೀತು. ನೆರೆಹೊರೆಯವರ ಚಾಡಿಮಾತುಗಳನ್ನು ಅಲಕ್ಷಿಸುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಈ ರಾಶಿಯವರು ಮನೆಯಲ್ಲಿ ಶುಭಮಂಗಳ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದಾರೆ. ವೈಯಕ್ತಿಕ ಜೀವನದಲ್ಲಿ ಪ್ರಗತಿ ಉಂಟಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

ಕಟಕ: ಈ ರಾಶಿಯವರ ಆತುರದ ನಿರ್ಧಾರಗಳಿಂದ ಅನಾಹುತವೇ ಹೆಚ್ಚು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಗಾತಿಯ ಸಲಹೆ ಪಡೆಯುವುದು ಉತ್ತಮ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.

ಸಿಂಹ: ಈ ರಾಶಿಯವರು ಪ್ರೀತಿ ಪಾತ್ರರ ಪ್ರೋತ್ಸಾಹಕರ ಮಾತುಗಳು ನಿಮ್ಮ ಉತ್ಸಾಹ ಹೆಚ್ಚಿಸಲಿದೆ. ಕೌಟುಂಬಿಕವಾಗಿ ಸಂತೋಷದಾಯಕ ದಿನಗಳಾಗಿವೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಿದ್ದರೂ ಆದಾಯಕ್ಕೆ ತೊಂದರೆಯಾಗದು.

ಕನ್ಯಾ: ಈ  ರಾಶಿಯವರು ಬಹುದಿನಗಳ ನಂತರ ಇಷ್ಟ ವ್ಯಕ್ತಿಗಳ ಭೇಟಿಯಾದ ಸಂತೋಷ ದೊರಕಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಟ್ಟಡ ಕಾಮಗಾರಿ ಕೆಲಸಗಳನ್ನು ಮುಂದೂಡುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ಸಂತೋಷ ಸಿಗುವುದು. ದೂರದ ನೆಂಟರಿಷ್ಟರನ್ನು ಭೇಟಿಯಾಗುವ ಸಾಧ್ಯತೆ. ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ವೃಶ್ಚಿಕ: ಈ ರಾಶಿಯವರಿಗೆ ಅನಿವಾರ್ಯ ಕಾರಣಗಳಿಗೆ ದೂರ ಸಂಚಾರ ಮಾಡಬೇಕಾಗಿ ಬಂದೀತು. ಸ್ವಜನರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು.

ಧನಸ್ಸು: ಈ ರಾಶಿಯವರು ಹೊಸದಾಗಿ ಆರಂಭಿಸಿರುವ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮಕರ: ಈ ರಾಶಿಯವರು ಕೆಲಸ ಕಾರ್ಯಗಳಲ್ಲಿನ ತಲ್ಲೀನತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ಅಗತ್ಯ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ.

ಕುಂಭ: ಈ ರಾಶಿಯವರು ಸರಕಾರಿ ನೌಕರರಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗವಿದೆ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದೆ.

ಮೀನ: ಈ ರಾಶಿಯ ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಆಸ್ತಿ, ವಾಹನಾದಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಚಿಂತೆ ಬೇಡ.

ಸಂವತ್ಸರ: ಶ್ರೀ ಪ್ಲವ ನಾಮ    ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಕಾರ್ತಿಕ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ಚತುರ್ಥಿ 

ನಕ್ಷತ್ರ: ಮೂಲ ನಕ್ಷತ್ರ

ರಾಹುಕಾಲ: 07:46 ರಿಂದ 09:13

ಗುಳಿಕಕಾಲ: 01:31 ರಿಂದ 03:01

ಯಮಗಂಡಕಾಲ: 10:40 ರಿಂದ 12:07

ಈ ದಿನದ ವಿಶೇಷ: ಮೊದಲನೇ ಕಾರ್ತಿಕ ಸೋಮವಾರ 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!