ದುರ್ಬಲರಿಗೆ ನ್ಯಾಯಾ ಕಲ್ಪಿಸುವಲ್ಲಿ ಕಾನೂನು ಸೇವಾ ಸಮಿತಿ ಸದಾ ಸಿದ್ದವಿದೆ: ಅರವಿಂದ ಸಾಯಿಬಣ್ಣ ಹಾಗರಗಿ

ದೊಡ್ಡಬಳ್ಳಾಪುರ: ಕಾನೂನು ಸೇವೆಗಳ ಪ್ರಾಧಿಕಾರ ಜಾರಿಗೆ ಬಂದ ನಂತರ ಜನರಲ್ಲಿ ಕಾನೂನಿನ ಅರಿವು ಹೆಚ್ಚಾಗುತ್ತಿದ್ದು, ದುರ್ಬಲರಿಗೆ ಉಚಿತ ಕಾನೂನು ನೆರವು ಹಾಗೂ ಲೋಕ ಅದಾಲತ್ಗಳ ಮೂಲಕ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸಿ ಕೌಟುಂಬಿಕ ನೆಮ್ಮದಿ ತಂದಿವೆ ಎಂದು ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಅರವಿಂದ ಸಾಯಿಬಣ್ಣ ಹಾಗರಗಿ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ತಾಲ್ಲೂಕು ಕಾನೂನು ಸೇವಾ ಸಮಿತಿ, ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ರೀತಿಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಕಾನೂನು ಸೇವೆ ನೀಡುತ್ತಿದೆ. ರಾಜ್ಯದ ಎಲ್ಲಾ ತಾಲ್ಲೂಕುಗಳು ಜನಸಾಮಾನ್ಯರಿಗೆ ಉಚಿತ ಕಾನುನಿನ ಅರಿವು ನೆರವು ಕಾರ್ಯಕ್ರವನ್ನು ಹಮ್ಮಿಕೊಂಡು ಅರಿವು ಮೂಡಿಸಬೇಕೆಂದು ರಾಷ್ರ್ಟೀಯ ಕಾನೂನು ಪ್ರಾಧಿಕಾರದಿಂದ ನಿರ್ದೇಶನ ನೀಡಲಾಗಿದೆ. 1987ರಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಜಾರಿಗೆ ಬಂದ ನಂತರ ಜನರಲ್ಲಿ ಕಾನೂನಿನ ಅರಿವು ಮೂಡಿಸಲಾಗುತ್ತಿದೆ. ಸರ್ಕಾರವೇ ಸ್ವಂತ ಖರ್ಚಿನದಲ್ಲಿ ಕಾನೂನು ನೆರವು ನೀಡುತ್ತಿದೆ.ಇದಕ್ಕಾಗಿ ಸರ್ವೋಚ್ಚ ನ್ಯಾಯಾಲಯ ಸಮಿತಿಗಳನ್ನು ರಚಿಸಲು ಸೂಚಿಸಿದೆ. ಕೆಲ ಕಾಲ ನಿಸ್ತೇಜವಾಗಿದ್ದ ಈ ಸಮಿತಿ 1995ರ ನಂತರ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಕಾನೂನು ಸೇವಾ ಸಮಿತಿ ಜನರಿಗೆ ಕಾನೂನಿನ ಬಗ್ಗೆ ಅರಿವು,ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರಾದವರಿಗೆ ಕಾನೂನು ನೆರವು ಹಾಗೂ ಲೋಕ ಅದಾಲತ್ಗಳನ್ನು ನಡೆಸುವ ಮೂಲಕ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸುವ ಕಾರ್ಯಗಳನ್ನು ಮಾಡುತ್ತಿದೆ. ಮುಖ್ಯವಾಗಿ ರಾಜಿ ಸಂಧಾನಗಳಿಂದ ಹಲವಾರು ಪ್ರಕರಣಗಳು ಇತ್ಯರ್ಥವಾಗಿದ್ದು, ಕುಟುಂಬದ ನೆಮ್ಮದಿಗೆ ಕಾರಣವಾಗಿದೆ.

ಉಚಿತ ಕಾನೂನು ನೆರವು ಅಥವಾ ಸಲಹೆ ಪಡೆಯಲು ಶುಲ್ಕ ರಹಿತ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು ಮಾನಸಿಕ ಅಥವಾ ಬೇರಾವುದೋ ನ್ಯೂನ್ಯತೆಯನ್ನು ಹೊಂದಿರುವವರು ಮೊದಲಾಗಿ ವಾರ್ಷಿಕ ಆದಾಯ ರೂ1 ಲಕ್ಷ ಕ್ಕಿಂತ ಕಡಿಮೆ ಇರುವ ಎಲ್ಲಾ ವರ್ಗದ, ಜಾತಿಯ ಜನರು ಅರ್ಹರಾಗಿರುತ್ತಾರೆ. ಕಾನೂನು ಸೇವೆಗೆ ವಕೀಲರ ಸಹಕಾರ ಅಗತ್ಯವಾಗಿದ್ದು, ಯುವ ವಕೀಲರು ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಕೀಲರಾದ ಡಿ.ಕೆ.ಲಕ್ಷ್ಮೀನಾರಾಯಣ ಮಾತನಾಡಿ, ಹುಟ್ಟಿನಿಂದ ಸಾಯುವವರಿಗೂ ಒಂದಲ್ಲ ಒಂದು ರೀತಿ ನಮಗೆ ಕಾನೂನಿನ ಅಗತ್ಯವಿದ್ದು, ಈ ಬಗ್ಗೆ ಅರಿವು ಅಗತ್ಯ.ಈ ಹಿಂದೆ ಉಳ್ಳವರಿಗಷ್ಟೇ  ಕಾನೂನು, ಬಡವರಿಗೆ ಶೋಷಿತರಿಗೆ ಹಣ ಇಲ್ಲದೇ ನ್ಯಾಯ ಸಿಗುವುದಿಲ್ಲ ಎನ್ನುವ ಅಪವಾಧವಿತ್ತು. ಈಗ ಕಾನೂನು ಸೇವಾ ಸಮಿತಿ ಹಾಗೂ ಕಾನೂನು ಪ್ರಾಧಿಕಾರದಿಂದ ಆರ್ಥಿಕವಾಗಿ ದುರ್ಬಲರಾದವರಿಗೂ ಕಾನೂನು ಸೇವೆ ದೊರೆಯಲಿದೆ ಎಂದರು.

ವಕೀಲರಾದ ಬಿ.ಎಸ್.ರೇಖಾ, ಜೆ.ಮಂಜುಳಾ, ಜನಸಾಮಾನ್ಯರಿಗೆ ಕಾನೂನು ಅರಿವಿನ ಅಗತ್ಯ ಹಾಗೂ  ಕಾನೂನು ಸೇವಾ ಸಮಿತಿ ಹಾಗೂ ಕಾನೂನು ಪ್ರಾಧಿಕಾರ ಕಾರ್ಯ ವೈಖರಿಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಂ.ಬೈರೇಗೌಡ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯಾಧೀಶರಾದ ಜ್ಯೋತಿ ಎಸ್.ಕಾಳೆ, ಪ್ರಧಾನ ಸಿವಿಲ್ ನ್ಯಾಯಾದೀಶರಾದ ಕೆ.ಆರ್.ದೀಪ, ಹೆಚ್ಚುವರಿ ಸಿವಿಲ್ನ್ಯಾಯಾಧೀಶರಾದ ಮಮತಾ ಶಿವಪೂಜೆ, ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ವಕೀಲರಾದ ರಾ.ಬೈರೇಗೌಡ, ರೇಣುಕಾರಾಧ್ಯ, ಎ.ವಿ.ಮುರುಳಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!