ದೊಡ್ಡಬಳ್ಳಾಪುರ: ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ದೊಡ್ಡ ತಿಮ್ಮನಹಳ್ಳಿ ಗ್ರಾಮದಲ್ಲಿ ಮನೆ ಕುಸಿದ್ದು, ಅದೃಷ್ಟವಶಾತ್ ಕುಟುಂಬ ಅಪಾಯದಿಂದ ಪಾರಾಗಿದೆ.
ತೂಬಗೆರೆ ಹೋಬಳಿಯ ದೊಡ್ಡತಿಮ್ಮನಹಳ್ಳಿ ಗ್ರಾಮದ ರಾಮಕೃಷ್ಣ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದ ಗೋಡೆಗಳು ಹಾಗೂ ಶೀಟು ಕುಸಿದಿವೆ.
ಶುಕ್ರವಾರ ಗೋಡೆ ಬಿರುಕು ಬಿಟ್ಟಿದ್ದನ್ನು ಕಂಡಿದ್ದ ರಾಮಕೃಷ್ಣ, ರಾತ್ರಿ ಕೇಳಿಬಂದ ಸದ್ದಿಗೆ, ಮಕ್ಕಳು ಹಾಗೂ ಮನೆಯವರೊಂದಿಗೆ ಹೊರಗೋಡಿದ್ದು, ನಂತರ ಗೋಡೆ ಕುಸಿದು ಬಿದ್ದಿದೆ.
ಮನೆ ಕುಸಿದು ಬಿದ್ದಿರುವ ಕಾರಣ, ಈ ಬಡ ಕುಟುಂಬ ಅನ್ಯರ ಮನೆಯಲ್ಲಿ ಆಶ್ರಯ ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ತಾಲೂಕು ಆಡಳಿತ, ಗ್ರಾಮ ಪಂಚಾಯಿತಿಯ ಅಥವಾ ದಾನಿಗಳು ನೆರವಾಗಬೇಕೆಂದು ರಾಮಕೃಷ್ಣ ಕುಟುಂಬ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….