ರೈತರೊಂದಿಗೊಂದು ದಿನ: ಶಿಳ್ಳೆ ಚಪ್ಪಾಳೆ ಇದ್ದರೇನೇ ಬದುಕು: ಬಿ.ಸಿ.ಪಾಟೀಲ್

ಹಾವೇರಿ: ಶಿಳ್ಳೆ‌,ಚಪ್ಪಾಳೆ ಇದ್ದರೆನೇ ಕಲಾವಿದರ ಜೀವನ.ಚಿತ್ರಮಂದಿರಗಳಲ್ಲಿ ಚಲನಚಿತ್ರಗಳನ್ನು ನೋಡುವ ಮೂಲಕ ಚಿತ್ರರಂಗವನ್ನು ಕಲಾವಿದರನ್ನು ಜನರು ಬೆಳೆಸಬೇಕು ಎಂದು ಚಲನಚಿತ್ರ ನಟರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಹಿರೇಕೆರೂರಿ ತಾಲೂಕಿನಲ್ಲಿ ನಡೆದ ರೈತರೊಂದಿಗೊಂದು ದಿನ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಛಲದೋಳ್ ದುರ್ಯೋಧನ. ನಾನು ಆಧುನಿಕ ಕೌರವನ ಪಾತ್ರ ಮಾಡಿದ್ದೆ.ಪೌರಾಣಿಕ ಕೌರವ ಧುರ್ಯೋಧನನಾಗಿದ್ದು ನಟ ದರ್ಶನ್‌. ಬಹಳ ವರ್ಷ ನಾನು ಸಿನಿಮ ಮಾಡಿರಲಿಲ್ಲ. ಯಶಸ್ ಸೂರ್ಯ ನಟನನ್ನು ಪರಿಚಯಿಸಿ ಚಿತ್ರರಂಗದಲ್ಲಿ ಬೆಳೆಸುವ ದೃಷ್ಟಿಯಿಂದ ದರ್ಶನ್ ಅವರ ಸ್ಫೂರ್ತಿ ಡಿ ಬಾಸ್ ಶಕ್ತಿಯಿಂದ ಮುಂದಾಗಿದ್ದೇವೆ. ಅದರಂತೆ ಗರಡಿ ಚಿತ್ರ ನಿರ್ಮಾಣವಾಗುತ್ತಿದೆ ಎಂದರು.

ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ಮೆಚ್ಚಿ ಹಿರೇಕೆರೂರೊಗೆ ಬಂದಿದ್ದಾರೆ.ಯಾವುದೇ ಗಾಡ್ ಫಾದರ್ ಇಲ್ಲದೇ ಬೆಳೆದವರು ನಟ ದರ್ಶನ್‌ಗೆ ರಾಜ್ಯದ ಜನತೆಯೇ ಅಭಿಮಾನಿಗಳು.ಗಾಡ್ ಫಾದರ್. ದುರ್ಗಾದೇವಿ ಪಾದಾರವಿಂದಗಳಿಗೆ ನಮಸ್ಕರಿಸೋ ಮೂಲಕ ಗರಡಿ ಚಿತ್ರಕ್ಕೆ ಕ್ಲ್ಯಾಪಿಂಗ್ ಮಾಡಿದ್ದೇವೆ. ಡಿ ಬಾಸ್ ಎಂದರೆನೇ ದರ್ಶನ್. ಶಿಳ್ಳೆ ಚಪ್ಪಾಳೆ ಇದ್ದರೆನೇ ಜೀವ. ಜನತೆ ನನ್ನನ್ನು ಶಾಸಕರನ್ನಾಗಿ ಮಾಡಿ ಕೃಷಿಕರ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ರಾಜ್ಯದ ರೈತರ ಹಿತ ಕಾಯಲು ಕೃಷಿ ಅಭಿಮಾನಿ ರೈತನೂ ಆಗಿರುವುದರಿಂದ ರೈತರ ಮೇಲಿನ ಅಭಿಮಾನದಿಂದ ಕೃಷಿ ಇಲಾಖೆಯ ರಾಯಭಾರಿಯಾಗಿದ್ದಾರೆ.ಇದೇ ಪ್ರೀತಿಯಿಂದ ಹಿರೇಕೆರೂರಿನಲ್ಲಿ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ಬಿಸಿಪಿ ಹೇಳಿದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತನಾಡಿ,ಪೊಲೀಸನಾಗಿ, ನಟ,ನಿರ್ಮಾಪಕನಾಗಿ ನಂತರ ಇದೀಗ ಸಚಿವನಾಗುವುದು ಬಹಳ ಸುಲಭದ ಕೆಲಸವಲ್ಲ. ಏನೇ ಕೆಲಸವಾಗಲೀ ಅದನ್ನು ಗುರಿಯಿಟ್ಟು ಮಾಡಿದರೆ ಯಶಸ್ಸು ಕಟ್ಟಿಟ್ಟಬುತ್ತಿ. ಇದಕ್ಕೆ ಬಿ.ಸಿ.ಪಾಟೀಲರೇ ಸಾಕ್ಷಿ. ಬಿ.ಸಿ.ಪಾಟೀಲರನ್ನು ನಾನು ಪ್ರೀತಿಯಿಂದ ಕಾಕವರೇ ಎನ್ನುತ್ತೇನೆ.ರೈತರು ಪ್ರೀತಿಯಿಂದ ಬಹಳ ಕಷ್ಟಪಟ್ಟು ಬೆಳೆ ಬೆಳಯುತ್ತಾರೆ.ರೈತರು ಮತ್ತು ಸೈನಿಕರು ದೇಶದ ಬೆನ್ನೆಲಬು.ಭೂಮಿತಾಯಿಯನ್ನು ನಂಬಿ ಕಷ್ಟಪಟ್ಟು ದುಡಿಯುತ್ತಾನೆ.ರೈತ ತಂತ್ರಜ್ಞಾನ ಇಲಾಖೆಯ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಫಸಲು ಬೆಳೆದಲ್ಲಿ ತಮ್ಮ ಆದಾಯ ದ್ವಿಗುಣಗೊಳಿಸಬಹುದು ಎಂದು ಕರೆ ನೀಡಿದರು.

ಕಲಾವಿದರ ದೇಹ ಇರುವುದು ಅಭಿಮಾನಿಗಳಿಂದ.ಕಲಾವಿದರು ಪ್ರೀತಿ ಪ್ರೋತ್ಸಾಹದಿಂದ ಬೆಳೆಯುತ್ತಾರೆ. ನಿರ್ದೇಶಕ ಯೋಗರಾಜ್ ಭಟ್ ಗರಡಿ ಚಿತ್ರ ನಿರ್ದೇಶಿಸುತ್ತಿದ್ದಾರೆ.ಯಶಸ್ ಸೂರ್ಯ ನಮ್ಮ ಹಿರೋ.ಯಶಸ್ ಸೂರ್ಯ ಸೇರಿದಂತೆ ಎಲ್ಲಾ ಕಲಾವಿದರ ಮೇಲೆ ಅಭಿಮಾನ ಪ್ರೀತಿಯಿರಲಿ ಎಂದು ದರ್ಶನ್ ಮನವಿ ಮಾಡಿದರು.

ರೈತಗೀತೆಯೊಂದಿಗೆ ವೇದಿಕೆ ಕಾರ್ಯಕ್ರಮಕ್ಕೆ ದೀಪಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.ಇತ್ತೀಚೆಗೆ ಅಗಲಿದ ಚಿತ್ರನಟ ದಿ.ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕೃಷಿ ಸಚಿವ ಬಿ.ಸಿ.ಪಾಟೀಲ್ ವೇದಿಕೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನವನ್ನು ರೈತರ ಹೆಸರಿನಲ್ಲಿ ಸಾರ್ವಜನಿಕವಾಗಿ ಆಚರಿಸಿಕೊಂಡರು.

ದರ್ಶನ್ ಅಭಿಮಾನಿಗಳಿಂದ ಬಿ.ಸಿ.ಪಾಟೀಲರು ಹಾಗೂ ದರ್ಶನ್‌ರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ನಿರ್ದೆಶಕ ಯೋಗರಾಜ್ ಭಟ್ ಅವರಿಂದ ವೇದಿಕೆಯಲ್ಲಿ ಸೌಮ್ಯ ಬ್ಯಾನರ್ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಗರಡಿ ಚಲನಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ,ಈ ಚಲನಚಿತ್ರದ ಹಿಂದೆ ಆಲದ ಮರದ ತರಹ ನಿಂತವರು ನಟ ದರ್ಶನ್ ನೂತನ ಯಶಸ್ ಸೂರ್ಯರಂತವರನ್ನು ಕೈಹಿಡಿದು ನಡೆಸಬೇಕಾಗಿದೆ ಎಂದರು.

ಪ್ರಾಸ್ತಾವಿಕವಾಗಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಮಾತನಾಡಿದರು.

ವೇದಿಕೆಯಲ್ಲಿ ನಿರ್ದೇಶಕ ಯೋಗರಾಜ್‌‌ಭಟ್, ನಟ ಶ್ರೇಯಸ್ ಸೂರ್ಯ, ಬಿಜೆಪಿ ಯುವನಾಯಕಿ ಸೃಷ್ಟಿಪಾಟೀಲ್, ದೊಡ್ಡಗೌಡಪಾಟೀಲ್, ಗುರುಶಾಂತ್ ಯತ್ನಾಳ್, ಸಿದ್ದರಾಜ್ ಕಲ್ಬಡ್ಡಿ ಸೇರಿದಂತೆ ಮತ್ತಿತ್ತರು ಪ್ರಮುಖರು ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ

[ccc_my_favorite_select_button post_id="119746"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!