ದಿನ ಭವಿಷ್ಯ: ಮಂಗಳವಾರ ನವೆಂಬರ್ 16, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ

ಮೇಷ: ಈ ರಾಶಿಯವರು ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಗಳು ನಿಮ್ಮದಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.

ವೃಷಭ: ಈ ರಾಶಿಯವರು ಗಣ್ಯರ ಭೇಟಿ ಮಾಡಲಿದ್ದು, ಸಾಮಾಜಿಕವಾಗಿ ನಿಮ್ಮ ಕೀರ್ತಿ ಹೆಚ್ಚಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಈ ರಾಶಿಯವರು ಬೇರೆಯವರ ಬಗ್ಗೆ ಅನಗತ್ಯ ಮಾತು, ಚರ್ಚೆಗಳು ಬೇಡ. ನಿಮ್ಮ ವೃತ್ತಿರಂಗದಲ್ಲಿ ಸ್ಥಾನ ಮಾನ ಸುಧಾರಣೆಗೆ ಪ್ರಯತ್ನ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಕಟಕ: ಈ ರಾಶಿಯವರು ಕೌಟುಂಬಿಕವಾಗಿ ನಡೆಸುವ ಕೆಲವೊಂದು ನಿರ್ಧಾರಗಳು ವೈಯಕ್ತಿಕವಾಗಿ ನಿಮಗೆ ಕಿರಿ ಕಿರಿಯೆನಿಸೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ತಾಳ್ಮೆಯಿರಲಿ.

ಸಿಂಹ: ಈ ರಾಶಿಯವರು ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ವ್ಯಾವಹಾರಿಕವಾಗಿ ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಭೂಮಿ, ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ನಿಮ್ಮದಾಗಲಿದೆ.

ಕನ್ಯಾ: ಈ  ರಾಶಿಯವರ ದೂರ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಆಪ್ತರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ.

ತುಲಾ: ಈ ರಾಶಿಯವರು ವ್ಯಾಪಾರಿಗಳಿಗೆ ನಿವ್ವಳ ಲಾಭ ಗಳಿಸಲು ಸಕಾಲ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಸ್ನೇಹಿತರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮಾತಿನ ಮೇಲೆ ಸಂಯಮವಿರಲಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಈ ರಾಶಿಯವರಿಗೆ ಬಹುದೂರದ ಸಂಬಂಧಿಗಳು ಹತ್ತಿರವಾಗಲಿದ್ದಾರೆ. ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದ್ದು, ಇಷ್ಟ ಭೋಜನ ಮಾಡಲಿದ್ದೀರಿ. ಯಂತ್ರೋಪಕರಣಗಳಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ. ಆಕಸ್ಮಿಕ ದೂರ ಪ್ರಯಾಣ 

ಧನಸ್ಸು: ಈ ರಾಶಿಯವರು ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ನೆಂಟರಿಷ್ಟರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಈ ರಾಶಿಯವರು ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳದಿರಿ. ವ್ಯಾಪಾರಿ ವರ್ಗದವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ.

ಕುಂಭ: ಈ ರಾಶಿಯವರ ನೂತನ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಬೆಲೆ ಕೊಡುವುದು ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ಈ ರಾಶಿಯವರು ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಸಂವತ್ಸರ: ಶ್ರೀ ಪ್ಲವ ನಾಮ  ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಕಾರ್ತಿಕ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ದ್ವಾದಶಿ

ನಕ್ಷತ್ರ:  ರೇವತಿ ನಕ್ಷತ್ರ 

ರಾಹುಕಾಲ: 03:02 ರಿಂದ 04:29

ಗುಳಿಕಕಾಲ: 12:08 ರಿಂದ 1:35

ಯಮಗಂಡಕಾಲ: 09:14 ರಿಂದ 10:41

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!