ಮುಂಬೈ: ವಿಮಾನ ಹಾರಾಟ ನಡೆಸುತ್ತಿರುವಾಗಲೇ ಆಸ್ವಸ್ಥಗೊಂಡ ಸಹ ಪ್ರಯಾಣಿಕರೊಬ್ಬರಿಗೆ ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಭಾಗವತ್ ಕಿಶನ್ ರಾವ್ ಕರಡ್ ವಿಮಾನದಲ್ಲೇ ತುರ್ತು ಚಿಕಿತ್ಸೆ ನೀಡಿದ್ದಾರೆ. ಅವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
ಸಚಿವ ಭಾಗವತ್ ಅವರು ಸಹಪ್ರಯಾಣಿಕನ ನೆರವಿಗೆ ಧಾವಿಸಿದ ವಿಚಾರವನ್ನು ರಾಜ್ಯಸಭೆ ಸದಸ್ಯ ವಿನಯ್ ಸಹಸ್ತ್ರಬುದ್ಧೆ ಅವರು ಮಂಗಳವಾರ ಟ್ವೀಟ್ ಮಾಡಿದ್ದರು.
6ಇ171 ವಿಮಾನದಲ್ಲಿ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪ್ರಯಾಣಿಕರೊಬ್ಬರು ಹಠಾತ್ ಕುಸಿದು ಬಿದ್ದರು. ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಚಿವ ಭಾಗವತ್ ಕರಡ್ ಅವರು ರೋಗಿಯ ಬಳಿಗೆ ಧಾವಿಸಿ ಚಿಕಿತ್ಸೆ ನೀಡಿದ್ದಾರೆ. ಅವರ ಸೇವೆ ಶ್ಲಾಘನೀಯ, ಎಂದು ಹೇಳಿದ್ದಾರೆ.
ತಮ್ಮ ಕಾರ್ಯಕ್ಕಾಗಿ ಸಚಿವ ಭಾಗವತ್ ಅವರಿಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆಗಳು. ಸಹ ಪ್ರಯಾಣಿಕನಿಗೆ ನೆರವಾದ ನಿಮ್ಮ ಈ ನಡೆಯು ಸ್ಫೂರ್ತಿದಾಯಕ, ಎಂದು ವಿಮಾನಯಾನ ಸಂಸ್ಥೆ ಸಹ ಧನ್ಯವಾದ ಅರ್ಪಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……