ಭಾರೀ ಮಳೆಗೆ ಮುದುಗಾನಕುಂಟೆ ಗ್ರಾಮದ ಶ್ರೀ ಗಂಗಾಭಾಗೀರಥಿ ದೇವಾಲಯ ಮುಳುಗಡೆ ಜಲಾವೃತ

ಚಿಕ್ಕಬಳ್ಳಾಪುರ: ವಾಯು ಭಾರ ಕುಸಿತ ಅಕಾಲಿಕ ಮಳೆಯಿಂದ ಬರದನಾಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮುದುಗಾನಕುಂಟೆ ಗ್ರಾಮದ ಶ್ರೀ ಗಂಗಾಭಾಗೀರಥಿ ದೇವಾಲಯ ಸಂಪೂರ್ಣ ಜಲಾವೃತವಾಗಿದೆ. 

ಮುದಗಾನಕುಂಟೆ ಮೈದುಂಬಿರುವ ಪರಿಣಾಮ ಕೆರೆಯ ಹಿನ್ನೀರಿನಲ್ಲಿ ದೇಗುಲ ಮುಳುಗಡೆಯಾಗಿದೆ. ದೇವಾಲಯ, ಕಲ್ಯಾಣಿ, ದೇವಿಯ ಪಾದಗಳು, ನೀರಿನಲ್ಲಿ ಮುಳುಗಡೆ ಆಗಿದ್ದು ಭಕ್ತರ ಪ್ರವೇಶಕ್ಕೆ ತಡೆ ಬಿದ್ದಿದೆ. ಅಂದಹಾಗೆ ಮುದಗಾನಕುಂಟೆಯ ಕೆರೆಯ ಹಿನ್ನೀರಿನ ಪ್ರದೇಶದಲ್ಲಿ ದೇವಾಲಯವಿದೆ. 

ಇನ್ನೂ ಪ್ರತಿ ಸೋಮವಾರ ಈ ದೇವಾಲಯಕ್ಕೆ ಸಾವಿರಾರು ಮಂದಿ ಮಹಿಳೆಯರು ಆಗಮಿಸಿ ಗಂಗಾ ಭಾಗೀರಥಿ ತಾಯಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಅದರಲ್ಲೂ ಮಕ್ಕಳಾಗದಂತಹ ದಂಪತಿಗಳು, ಹರಕೆ ಹೊತ್ತುಕೊಂಡು ಈ ದೇವಾಲಯಕ್ಕೆ ಆಗಮಿಸಿ, ಪೂಜೆ ಸಲ್ಲಿಸಿದ್ರೆ ಮಕ್ಕಳಾಗುತ್ತೆ ಎಂಬ ನಂಬಿಕೆ ಭಕ್ತರದ್ದು. ಹೀಗಾಗಿ ಸೋಮವಾರದಂದು ದೇವಾಲಯದ ಬಳಿ ಜಾತ್ರೆ ಹಬ್ಬದ ರೀತಿಯ ವಾತಾವರಣ ಇರುತ್ತೆ.

ದೇವಾಲಯಕ್ಕೆ ಬರುವ ಮಹಿಳಾ ಭಕ್ತರು ದೇವಾಲಯದ ಮುಂಭಾಗದ ಕಲ್ಯಾಣಿಯಲ್ಲಿ ಸ್ನಾನ ಮಾಡಿ, ದೇವಾಲಯದ ಆವರಣದಲ್ಲಿ ಬಾಳೆ ಎಲೆ ಹಾಕಿ 5 ಕಲ್ಲುಗಳನ್ನ ಇಟ್ಟು ಅಕ್ಕಿ, ಬೇಳೆ, ಬೆಲ್ಲ ಮುಡಿಪಿಟ್ಟು ತಾಯಿಗೆ ಪೂಜೆ ಸಲ್ಲಿಸುತ್ತಾರೆ. ತದನಂತರ ದೇವಾಲಯದ ಬಳಿಯ ಗಂಗಾಭಾಗೀರಥಿ ತಾಯಿಯ ಪಾದ ಪೂಜೆ ಮಾಡಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇನ್ನೂ ಸಂಜೆ ಸರ‍್ಯಾಸ್ತಮವಾದ ನಂತರ ಇಲ್ಲಿ ಯಾರು ಇರುವ ಆಗಿಲ್ಲ ಇರೋದಿಲ್ಲ..ಇಲ್ಲಿ ರಾತ್ರಿ ವೇಳೆ ದೇವಿ ಸಂಚಾರ ಮಾಡ್ತಾರೆ ಅನ್ನೋ ನಂಬಿಕೆ ಸಹ ಇದೆ.

22 ವರ್ಷಗಳ ನಂತರ ಜಲಾವೃತವಾದ ದೇಗುಲ: 22 ವರ್ಷಗಳ ಹಿಂದೆ ಅತಿಯಾದ ಮಳೆಯಾಗಿ ಮುದುಗಾನಕುಂಟೆ ಕೆರೆ ತುಂಬಿದ್ದ ಆಗ ದೇವಾಲಯ ಸಹ ಜಲಾವೃತವಾಗಿತ್ತು. ಅದಾದ ನಂತರ ಈಗ ಮತ್ತೆ ಅತಿಯಾದ ಮಳೆಯಿಂದ ಈ ಬಾರಿ ದೇಗುಲ ಜಲಮಯವಾಗಿದೆ. ಇನ್ನೂ ಎಂದಿನಂತೆ ಭಕ್ತರು ಬರಲು ಯಾವುದೇ ಅಡ್ಡಿ ಇಲ್ಲ. 

ಗಂಗಾಭಾಗೀರಥಿ ಅಮ್ಮನವರ ದರ್ಶನ ಮಾಡಲು ಆಗದಿದ್ರೂ ಕೆರೆಯ ನೀರಿನ ದಡದ ಬಳಿಯೇ ಪೂಜೆ ಮಾಡಿಕೊಂಡು ಹೋಗಬಹುದು, ಇನ್ನೂ ಕಲ್ಯಾಣಿಯಲ್ಲಿ ಸ್ನಾನ ಮಾಡಲು ಅವಕಾಶವಿಲ್ಲ.

ನಲ್ಲಿಗಳ ಸಂಪರ್ಕವಿದ್ದು ಅಲ್ಲಿ ಸ್ನಾನ ಮಾಡಿ ನಂತರ ಪೂಜೆ ಮಾಡಬಹುದು ಅಂತ ಮುದುಗಾನಕುಂಟೆ ಗ್ರಾಮಸ್ಥರು ದೇವಾಲಯದ ಧರ್ಮಕರ್ತರು ತಿಳಿಸಿದ್ದಾರೆ. ಇನ್ನೂ ಎರಡು ಮೂರು ದಿನ ಭಾರೀ ಮಳೆ ಸಾಧ್ಯತೆಯಿದ್ದು ಮತ್ತಷ್ಟು ಕೆರೆ ಮೈದುಂಬಿಕೊಂಡರೆ ದೇವಾಲಯ ಮತ್ತಷ್ಟು ಮುಳಗಡೆ ಆಗಲಿದೆ. ಈಗಾಗಲೇ 3-4ಅಡಿ ನೀರು ತುಂಬಿಕೊಂಡಿದೆ. ದೇವಾಲಯಕ್ಕೆ ಜಲದಿಗ್ಬಂದನವಾಗಲಿದೆ. 

ಕೆರೆ ಹೂಳೆತ್ತಿಸಿದ್ದ ಐಎಎಸ್ ಅಧಿಕಾರಿ ವರಪ್ರಸಾದ್ ರೆಡ್ಡಿ: ಇನ್ನೂ ಕೆರೆ ತುಂಬಿರೋದು ಜನರಿಗೆ ಬಹಳ ಸಂತಸ ತಂದಿದೆ. ಈ ಕೆರೆ 22 ವರ್ಷಗಳಿಂದ ತುಂಬೇ ಇರಲಿಲ್ಲ. ಕೆಎಎಸ್ ಅಧಿಕಾರಿಯಾದ ವರಪ್ರಸಾದ್ ರೆಡ್ಡಿಯವರು ಸ್ಥಳೀಯ ಆರ್ ಎಸ್ ಎಸ್ ಮುಖಂಡರ ಜೊತೆಗೂಡಿ ಸೇವಾ ಪ್ರತಿಷ್ಟಾನ ಸಂಸ್ಥೆಯ ಮೂಲಕ ಕೆರೆಯ ಹೂಳೆತ್ತಿಸಿದ್ರು. ಅದಲ್ಲದೇ ಕೆರೆಗೆ ಸಂಪರ್ಕಿಸುವ ಎಲ್ಲಾ ಕಾಲುವೆಗಳನ್ನ ಕ್ಲಿಯರ್ ಮಾಡಿಸಿದ್ರು. ಅದರ ಪರಿಣಾಮವೇ ಇಂದು ಕೆರೆ ತುಂಬಿಕೊಂಡಿದೆ. ಬಹಳ ಸಂತಸ ತಂದಿದೆ ಅಂತ ವರಪ್ರಸಾದ್ ರೆಡ್ಡಿಯವರ ಕಾರ್ಯವನ್ನ ಜನ ಶ್ಲಾಘಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!