ದಿನ ಭವಿಷ್ಯ: ಭಾನುವಾರ, ನವೆಂಬರ್ 21, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯ ವ್ಯಾಪಾರಿಗಳಿಗೆ ಹಿತ ಶತ್ರುಗಳ ಕಾಟ

ಮೇಷ: ಈ ರಾಶಿಯವರು ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ತೊಂದರೆ ಎದುರಾದೀತು. ಹಳೆಯ ಸಂಬಂಧಗಳು ಮತ್ತೆ ಕೂಡಿಕೊಳ್ಳಲಿದೆ. ಚಿಂತೆ ಬೇಡ.

ವೃಷಭ: ಈ ರಾಶಿಯವರು ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ.

ಮಿಥುನ: ಈ ರಾಶಿಯವರು ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಆಪ್ತರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಕಟಕ: ಈ ರಾಶಿಯವರು ಮನಸ್ಸು ಬಯಸಿದ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನೆಮ್ಮದಿ ಕಾಣಲಿದ್ದೀರಿ. ಉದ್ಯೋಗ ಬದಲಾವಣೆ ಪ್ರಯತ್ನಕ್ಕೆ ತಕ್ಕ ಮಟ್ಟಿಗಿನ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಸಿಂಹ: ಈ ರಾಶಿಯವರು ವೃತ್ತಿರಂಗದಲ್ಲಿ ಹೆಚ್ಚಿನ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಹೊಸ ಹೊಣೆಗಾರಿಕೆಗಳಿಗೆ ಸಿದ್ಧರಾಗಿ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಿದ್ದು, ಸಂಗಾತಿಯ ಪ್ರೀತಿ ಸಿಗಲಿದೆ. ತಾಳ್ಮೆ, ಸಂಯಮವಿರಲಿ.

ಕನ್ಯಾ: ಈ ರಾಶಿಯವರು ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವರು. ವ್ಯಾಪಾರಿಗಳಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು. ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಅನಗತ್ಯ ಚಿಂತೆ ಬೇಡ.

ತುಲಾ: ಈ ರಾಶಿಯವರಿಗೆ ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಭೂಮಿ, ವಾಹನ ಖರೀದಿಯಲ್ಲಿ ಲಾಭವಾದೀತು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ವೃಶ್ಚಿಕ: ಈ ರಾಶಿಯವರು ವಾಸ್ತವ ಸ್ಥಿತಿ ಅರಿತು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುವುದು. ಸಂಗಾತಿಯ ಮಾತುಗಳು ಹಿತವೆನಿಸಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಧನಸ್ಸು: ಈ ರಾಶಿಯವರು ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ಸಂತೋಷ ಸಿಗುವುದು. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ.

ಮಕರ: ಈ ರಾಶಿಯವರು ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಪ್ರಸಂಗಗಳು ಎದುರಾದೀತು. ಹೊಸ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಉಲ್ಲಾಸವಾಗಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಈ ರಾಶಿಯವರು ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು. ಕೆಲಸ ಕಾರ್ಯಗಳಲ್ಲಿ ಸಫಲತೆ ಕಂಡುಬರಲಿದೆ. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮೀನ: ಈ ರಾಶಿಯವರು ಬಹುದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರುವುದು. ಮಕ್ಕಳ ಸಂತೋಷಕ್ಕಾಗಿ ಪ್ರಯಾಣ ಮಾಡಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಸಂವತ್ಸರ: ಶ್ರೀ ಪ್ಲವ ನಾಮ    ಸಂವತ್ಸರ

ಆಯನ:
ದಕ್ಷಿಣಾಯನ

ಋತು:
ಶರದ್ ಋತು

ಮಾಸ:
ಕಾರ್ತಿಕ ಮಾಸ

ಪಕ್ಷ:
ಕೃಷ್ಣ ಪಕ್ಷ      

ತಿಥಿ:
ದ್ವಿತೀಯ

ನಕ್ಷತ್ರ:
ಮೃಗಶಿರಾ ನಕ್ಷತ್ರ


ರಾಹುಕಾಲ:
04:29 ರಿಂದ 05:55

ಗುಳಿಕಕಾಲ:
03:02 ರಿಂದ 04:29

ಯಮಗಂಡಕಾಲ:
12:09 ರಿಂದ 01:36

ಈ ದಿನದ ವಿಶೇಷ: ನಂಜನಗೂಡು ಶ್ರೀಕಂಠೇಶ್ವರ  ತ್ರಿರಥ (ಚಿಕ್ಕ ಜಾತ್ರೆ )

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!