ಕಾಂಪ್ಲೆಕ್ಸ್ ಬಳಕೆಗೆ ಹೆಚ್ಚಿನ ಗಮನ ನೀಡುವಂತೆ ಕ್ರಮ: ಬಿ.ಸಿ.ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯೂ ಸಹ ಬಿತ್ತನೆ ಹೆಚ್ಚಾಗಿದ್ದು, ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಬಳಕೆ ಮಾಡದಂತೆಯೂ ಮೂಲಗೊಬ್ಬರವಾದ ಕಾಂಪ್ಲೆಕ್ಸ್ ಗೊಬ್ಬರ ಬಳಕೆಯತ್ತವೂ ರೈತರು ಹೆಚ್ಚಿನ ಗಮನ ನೀಡುವಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರೊಂದಿಗೆ ನಡೆದ ರಸಗೊಬ್ಬರ ಸರಬರಾಜು ಸಂಬಂಧ ವಿಡಿಯೋ ಸಂವಾದವನ್ನುದ್ದೇಶಿಸಿ ಅವರು ಮಾತನಾಡಿದರು.

ಡಿಎಪಿ ಬದಲಾಗಿ ಕಾಂಪ್ಲೆಕ್ಸ್ ರಸಗೊಬ್ಬರ ಬಳಕೆಗೆ ಈಗಾಗಲೇ ಎಲ್ಲಾ ರೈತ ಸಪರ್ಕ ಕೇಂದ್ರಗಳು ಹಾಗೂ ಮಾರಾಟಗಾರರಿಗೆ ಅಗತ್ಯ ತರಬೇತಿ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಡಿಎಪಿ ಬದಲಿಗೆ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ರೈತರು ಬಳಸಲು ಪ್ರಚಾರ ಕೈಗೊಂಡಿರುವ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಅಲ್ಲದೇ ರಾಜ್ಯಕ್ಕೆ ಕೇಂದ್ರದಿಂದ ಹಂಚಿಕೆಯಾದ 5 ಲಕ್ಷ ಬಾಟಲ್ ನ್ಯಾನೋ ಯೂರಿಯಾದಲ್ಲಿ ಈಗಾಗಲೇ 3 ಲಕ್ಷ ಬಾಟಲ್ ನ್ಯಾನೋ ಯೂರಿಯಾ ಬಳಕೆಯಾಗಿದ್ದು, ಅಂದಾಜು 16 ಸಾವಿರ ಮೆ.ಟನ್ ರಸಗೊಬ್ಬರ ಈ ನ್ಯಾನೋ ಯೂರಿಯಾ ಬಳಕೆಯಿಂದ ಉಳಿತಾಯವಾಗಿದೆ ಎಂಬುದನ್ನು ಕೇಂದ್ರಕ್ಕೆ ಸಚಿವರು ವಿವರಿಸಿದರು.

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದ ರೈತರಿಗೆ ಕೊರತೆಯಾಗದಂತೆ ಈ ಹಿಂದಿನಿಂದಲೂ ಸಮರ್ಪಕವಾದ ರೀತಿಯಲ್ಲಿ ರಸಗೊಬ್ಬರವನ್ನು ಪೂರೈಸುತ್ತಿದ್ದು, ಈ ಬಾರಿಯೂ ಬಿತ್ತನೆ ಹೆಚ್ಚಾಗಿರುವುದರಿಂದ ರಸಗೊಬ್ಬರಕ್ಕೆ ಬೇಡಿಕೆಯೂ ಹೆಚ್ಚಾಗಿದೆ. ರೈತರ ಬೇಡಿಕೆಯನುಸಾರ ಕೇಂದ್ರಕ್ಕೆ ರಸಗೊಬ್ಬರ ಪೂರೈಸುವಂತೆ ಮನವಿ ಮಾಡಲಾಗುತ್ತಿದೆ. ಬೀಳು ಭೂಮಿಯಲ್ಲಿಯೂ ಸಹ ಬೆಳೆ ತೆಗೆಯುವ ಭರವಸೆ ರೈತ ಸಮುದಾಯದಲ್ಲಿ ಪ್ರಸಕ್ತ ಮಳೆ ಮೂಡಿಸಿದ್ದು, ಮಳೆಯಾಶ್ರಿತ ಬೆಳೆಗಳಿಗೆ ಪ್ರಮುಖ ರಸಗೊಬ್ಬರ ಮೂಲಗಳಾದ ಡಿಎಪಿ ಮತ್ತು ಯೂರಿಯಾ ರಸಗೊಬ್ಬರಗಳ ಬೇಡಿಕೆಯನ್ನು ಹೆಚ್ಚಿಸಿದೆ. ರಸಗೊಬ್ಬರ ಬೇಡಿಕೆಯನುಸಾರ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಪೂರೈಸುತ್ತಿದೆ.

ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಗುರಿಗಿಂತ ಹೆಚ್ಚಿನ ಅಂದರೆ 78.51 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದ್ದು, ಮುಂಗಾರುಹಂಗಾಮಿನಲ್ಲಿ ಬೇಡಿಕೆಯಿದ್ದ ವಿವಿಧ ರಸಗೊಬ್ಬರ ಬೇಡಿಕೆಯನ್ನು ತೃಪ್ತಿದಾಯಕವಾಗಿ ಈಡೇರಿಸಿರುವುದಕ್ಕೆ ಸಚಿವರು ಕೇಂದ್ರ ಸಚಿವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಹಿಂಗಾರು ಮತ್ತು ಬೇಸಿಗೆಗೆ 16.94 ಸಾವಿರ ಹೆ ಟನ್ ಬೇಡಿಕೆಯಿದ್ದು, ಹಾಲಿ 10 ಲಕ್ಷದ 74 ಸಾವಿರ ಮೆ.ಟನ್ ದಾಸ್ತಾನು ರಸಗೊಬ್ಬರವಿದ್ದು, ಅಗತ್ಯಾನುಸಾರ ಬೇಡಿಕೆಗಳನ್ನು ರಾಜ್ಯ ಪೂರೈಸುತ್ತಿದೆ. ಇದೇ ರೀತಿ ಹಿಂಗಾರಿಗೆ ಅಗತ್ಯವಿರುವ ಪೊಟ್ಯಾಷ್ ರಸಗೊಬ್ಬರವನ್ನು ತಕ್ಷಣವೇ ಪೂರೈಸುವಂತೆ ಕೇಂದ್ರ ಸಚಿವರಿಗೆ ಬಿ.ಸಿ.ಪಾಟೀಲ್ ಮನವಿ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!