ಈ ರಾಶಿಯವರ ಹೊಸ ವಾಹನ ಖರೀದಿ ಕನಸು ನನಸಾಗಲಿದೆ / ದಿನ ಭವಿಷ್ಯ: ಬುಧವಾರ ನವೆಂಬರ್ 24, 2021, ದೈನಂದಿನ ರಾಶಿ ಭವಿಷ್ಯ

ಮೇಷ: ಈ ರಾಶಿಯವರು ಸಣ್ಣ ಪುಟ್ಟ ವಿಚಾರಕ್ಕೆ ಕೋಪ ಮಾಡಿಕೊಳ್ಳಬೇಡಿ. ಕೌಟುಂಬಿಕವಾಗಿ ಹೊಂದಾಣಿಕೆ ಕಾಪಾಡಿಕೊಳ್ಳುವ ಜವಾಬ್ಧಾರಿ ನಿಮ್ಮದಾಗುವುದು. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ಖರ್ಚು ವೆಚ್ಚಗಳಾಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಈ ರಾಶಿಯವರು ವಾತಾವರಣ ಬದಲಾವಣೆಯಿಂದ ದೇಹಾರೋಗ್ಯದಲ್ಲಿ ಏರುಪೇರಾದೀತು. ಹೊಸ ಜನರ ಭೇಟಿ ಮನಸ್ಸಿಗೆ ಸಂತೋಷ ಕೊಡಲಿದೆ. ಆಪ್ತರೊಂದಿಗೆ ಕಿರು ಸಂಚಾರ ಮಾಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಮಿಥುನ: ಈ ರಾಶಿಯವರಿಗೆ ಬಹುದಿನಗಳ ನಂತರ ಆಪ್ತ ಮಿತ್ರರ ಭೇಟಿಯಾದ ಸಂತೋಷ. ಹಿರಿಯರಿಗೆ ಆರೋಗ್ಯ ಸಮಸ್ಯೆಯಾದರೂ ಆತಂಕ ಬೇಕಿಲ್ಲ. ಹೊಸ ವಾಹನ ಖರೀದಿ ಕನಸು ನನಸಾಗಲಿದೆ.

ಕಟಕ: ಈ ರಾಶಿಯವರು ಕುಟುಂಬದ ಹಿರಿಯರೊಂದಿಗೆ ಚರ್ಚಿಸಿ ಭವಿಷ್ಯದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಸಿಂಹ: ಈ ರಾಶಿಯವರು ದೈನಂದಿನ ಕೆಲಸಗಳಿಂದ ಬಿಡುವು ಸಿಗಲಿದೆ. ಸಾಂಸಾರಿಕವಾಗಿ ಸುಂದರ ದಿನವಾಗಿದ್ದು, ಆಪ್ತರೊಂದಿಗೆ ಸಮಯ ಕಳೆಯಲಿದ್ದೀರಿ. ಮಕ್ಕಳಿಗೆ ಉಡುಗೊರೆ ನೀಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕನ್ಯಾ: ಈ  ರಾಶಿಯವರು ಮನಸ್ಸಿಗೆ ಖುಷಿಯೆನಿಸುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಉದ್ಯೋಗ ರಂಗದಲ್ಲಿ ಬದಲಾವಣೆಯ ಪ್ರಯತ್ನಕ್ಕೆ ಫಲ ಸಿಗುವುದು. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಈ ರಾಶಿಯವರು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವ ಅನಿವಾರ್ಯತೆ ಎದುರಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ವೃಶ್ಚಿಕ: ಈ ರಾಶಿಯ ನೂತನ ದಂಪತಿಗಳಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ನಿರುದ್ಯೋಗಿಗಳು ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಪಡೆಯಲಿದ್ದಾರೆ. ಅನಗತ್ಯ ಮಾತುಗಳಿಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನಸ್ಸು: ಈ ರಾಶಿಯವರು ಅಸಮಾಧಾನಗಳನ್ನು ಬದಿಗೊತ್ತಿ ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲಿದ್ದೀರಿ. ಮಕ್ಕಳಿಗೆ ಖುಷಿ ಕೊಡುವ ಘಟನೆಗಳು ನಡೆಯಲಿವೆ. ಬಂಧು ಮಿತ್ರರ ಭೇಟಿ ಮಾಡಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಮಕರ: ಈ ರಾಶಿಯವರು ಮನಸ್ಸಿನಲ್ಲಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗುವುದು. ಹೊಸ ಮಿತ್ರರ ಸಂಪಾದಿಸಲಿದ್ದೀರಿ. ಮಹಿಳೆಯರಿಗೆ ಕೆಲಸದೊತ್ತಡ ಹೆಚ್ಚಾದೀತು.

ಕುಂಭ: ಈ ರಾಶಿಯವರು ಸಂಗಾತಿಯ ಅಸಮಾಧಾನಕ್ಕೆ ಗುರಿಯಾದೀತು. ತಾಳ್ಮೆ, ಸಂಯಮವಿರಲಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ.

ಮೀನ: ಈ ರಾಶಿಯವರು ವೃತ್ತಿರಂಗದಲ್ಲಿ ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟ ಭೀತಿ ಎದುರಾಗಲಿದೆ. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಪಡೆಯಲಿದ್ದೀರಿ.

ಸಂವತ್ಸರ: ಶ್ರೀ ಪ್ಲವ ನಾಮ ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಕಾರ್ತಿಕ ಮಾಸ

ಪಕ್ಷ: ಕೃಷ್ಣ ಪಕ್ಷ       

ತಿಥಿ: ಪಂಚಮಿ 

ನಕ್ಷತ್ರ: ಪುನರ್ವಸು ನಕ್ಷತ್ರ

ರಾಹುಕಾಲ: 12:09 ರಿಂದ 01:36

ಗುಳಿಕಕಾಲ: 10:43 ರಿಂದ 12:09

ಯಮಗಂಡಕಾಲ: 07:51 ರಿಂದ 09:17

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!