ನಮ್ಮೂರ ಕೆರೆ ನಮ್ಮ ಹೆಮ್ಮೆ ಎನ್ನುವ ಭಾವನೆ ಮೂಡದ ಹೊರತು, ಕೆರೆಗಳ ಉಳಿವು ಸಾಧ್ಯವಿಲ್ಲ: ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ನಮ್ಮೂರ ಕೆರೆ ನಮ್ಮ ಹೆಮ್ಮೆ ಎನ್ನುವ ಭಾವನೆ ಮೂಡದ ಹೊರತು ಸರ್ಕಾರ ಎಷ್ಟೇ ಖರ್ಚು ಮಾಡಿ ಕೆರೆ ಅಭಿವೃದ್ಧಿಗೊಳಿಸಿದರು ಕೆರೆ ಗಲೀಜು ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಹೇಳಿದರು.

ನಗರದ ಮುತ್ತೂರು ಕೆರೆ ಹಾಗೂ ನಾಗರಕೆರೆಯಲ್ಲಿ ಬುಧವಾರ ನಡೆದ ಗಂಗಾ ಪೂಜೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಎರಡು ವರ್ಷಗಳ ಹಿಂದೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ನಾಗರಕೆರೆ, ಮುತ್ತೂರು ಕೆರೆ ಅಭಿವೃದ್ಧಿಗೆ ಮುಂದಾದಾಗ ನಗರದ ಬಸ್ ನಿಲ್ದಾಣದಲ್ಲಿನ ಫುಟ್ಪಾತ್ನಲ್ಲಿ ಕುಳಿತು ಚಪ್ಪಲಿ ಮಾರಾಟ ಮಾಡುವ ರತ್ನಮ್ಮ ಅವರು ಸಹ ರೂ10 ದೇಣಿಗೆ ನೀಡಿದ್ದರು. ಕಂಪನಿಗಳವರು ರೂ25 ಲಕ್ಷ ನೀಡಿದ್ದರು. ಆದರೆ ಕೆರೆ ಉಳಿಸಬೇಕು ಎನ್ನುವ ಮನೋಭಾವದಿಂದ ರೂ10 ದೇಣಿಗೆ ನೀಡಿದ್ದು ಸಹ ಸ್ಮರಣೀಯ. ಕೆರೆಗೆ ನಿಜವಾದ ವಾರುಸುದಾರರು ಇಂತಹ ಜನ. ಹೀಗಾಗಿಯೇ 20 ವರ್ಷಗಳ ನಂತರ ನಾಗರಕೆರೆ ಕೋಡಿ ಬಿದ್ದಿರುವ ಸಂದರ್ಭದಲ್ಲಿ ರತ್ನಮ್ಮ ಅವರಿಂದಲೇ ಗಂಗಾಪೂಜೆ ಮಾಡಿಸಲಾಗಿದೆ. ಜನರಲ್ಲಿ ಕೆರೆಯ ಬಗ್ಗೆ ಪ್ರೀತಿ ಬೆಳೆಯದಿದ್ದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗಷ್ಟೇ ಅಲ್ಲ ಮಳೆಗಾಲದಲ್ಲಿ ಬರುವ ನೀರು ತಡೆದು ಜೀವ ರಕ್ಷಣೆ ಮಾಡಿಕೊಳ್ಳಲು ಕಷ್ಟವಾಗಲಿದೆ ಎಂದರು.

ನಗರದ ಹೃದಯ ಭಾಗದಲ್ಲಿನ ಮುತ್ತೂರು, ನಾಗರಕೆರೆಗಳನ್ನು ಶುದ್ಧವಾಗಿಟ್ಟುಕೊಳ್ಳುವ ಕಡೆಗೆ ಸಾರ್ವಜನಿಕರು ಸಂಕಲ್ಪ ಮಾಡದೇ ಇದ್ದರೆ ಜೀವಜಲ ಕೆಡುವ ಜೊತೆಗೆ ಪ್ರಾಣಿಸಂಕುಲ, ಮನುಷ್ಯರ ಆರೋಗ್ಯವು ಹಾಳಾಗಲಿದೆ ಎಂದರು.

ಗಂಗಾಪೂಜೆಯಲ್ಲಿ ಐಟಿ ಉದ್ಯೋಗಿ ಜಿ.ರಾಜಶೇಖರ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು,ಉದ್ಯಮಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಇದ್ದರು. 

ತೆಪ್ಪದಲ್ಲಿ ಸುತ್ತಾಡಿ ಖುಷಿ ಪಟ್ಟರು: ಎರಡು ವರ್ಷಗಳ ಹಿಂದೆ ಈ ಕೆರೆಗೂ ನೀರು ಬರುತ್ತವೆ ಎನ್ನುವುದನ್ನು ಕಲ್ಪಿಸಿಕೊಳ್ಳಲು ಸಹ ಸಾಧ್ಯವಿಲ್ಲದಷ್ಟು ಹೂಳು ಹಾಗೂ ಜಾಲಿ ಮರಗಳು ಬೆಳೆದು ನಿಂತಿದ್ದವು. ಆದರೆ ಇಂದು ಇಡೀ ಕೆರೆ ನೀರಿನಿಂದ ತುಂಬಿಕೊಂಡಿದ್ದು, ಕೆರೆಯ ಸುತ್ತಲು ವಿವಿಧ ಜಾತಿಯ ಗಿಡಗಳನ್ನು ಬೆಳೆಸಲಾಗಿದೆ.

ಬುಧವಾರ ಬೆಳಿಗ್ಗೆ ಕೆರೆಯಲ್ಲಿ ನಡೆದ ಗಂಗಾಪೂಜೆ ನಂತರ ತೆಪ್ಪದಲ್ಲಿ ಕುಳಿತು ಇಡೀ ಕೆರೆಯನ್ನು ಒಂದು ಸುತ್ತ ಬಂದ ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಹಾಗೂ ಕೆರೆಯ ಅಭಿವೃದ್ಧಿಯಲ್ಲಿ ಕೈಜೋಡಿಸಿದ್ದವರು ಖುಷಿಪಟ್ಟು ಸಂತಸಹ ವ್ಯಕ್ತಪಡಿಸಿದರು.

ತೆಪ್ಪದಲ್ಲಿ ಕುಳಿತು ಕೆರೆಯ ಮಧ್ಯ ಭಾಗಕ್ಕೆ ಹೋಗಿ ಮಹಿಳೆಯರು ಪೂಜೆಸಲ್ಲಿಸಿ ಬಾಗಿನ ಅರ್ಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!