ಬದುಕಿನ ನೆಮ್ಮದಿಗೆ ಆದ್ಯಾತ್ಮಿಕ ನೆಲೆಗಟ್ಟಿರಬೇಕು: ಡಾ.ನಿರ್ಮಲಾನಂದ ಸ್ವಾಮೀಜಿ / ನೇರಳೆಘಟ್ಟ ಗ್ರಾಮದಲ್ಲಿ ಆಂಜನೇಯಸ್ವಾಮಿ ಹಾಗೂ ಗ್ರಾಮದೇವತೆ ಮಹೇಶ್ವರಿ ಅಮ್ಮನವರ ನೂತನ ದೇವಾಲಯ ಹಾಗೂ ಬಿಂಬ ಪ್ರತಿಷ್ಟಾಪನಾ ಮಹೋತ್ಸವ

ದೊಡ್ಡಬಳ್ಳಾಪುರ: ವಿಜ್ಞಾನದಿಂದ ಇಂದು ಬದುಕು ಅರಳುವ ಬದಲು ನರಳುತ್ತಿದ್ದು, ಎಷ್ಟೇ ಸೌಲಭ್ಯಗಳಿದ್ದರೂ ಸಹ ಮನಶ್ಯಾಂತಿ ಇಲ್ಲದಂತಾಗಿದೆ. ಈ ದಿಸೆಯಲ್ಲಿ ಧ್ಯಾನ ಹಾಗೂ ದೇವತಾ ಕಾರ್ಯಗಳು ನಮ್ಮನ್ನು  ನಾವು ಅರ್ಥ ಮಾಡಿಕೊಂಡು ನೆಮ್ಮದಿ ಕಾಣಲು ಸಹಕಾರಿಯಾಗುತ್ತವೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದ ಸ್ವಾಮೀಜಿ ತಿಳಿಸಿದರು.

ತಾಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ಆಂಜನೇಯಸ್ವಾಮಿ ಹಾಗೂ ಗ್ರಾಮದೇವತೆ ಮಹೇಶ್ವರಿ ಅಮ್ಮನವರ ನೂತನ ದೇವಾಲಯ ಹಾಗೂ ಬಿಂಬ ಪ್ರತಿಷ್ಟಾಪನಾ ಮಹೋತ್ಸವದ ಉದ್ಘಾಟನಾ ಸಮಾರಂಭದ ಸಾನಿಧ್ಯವಹಿಸಿ ಅವರು ಮಾತನಾಡಿದರು.

ವಾಹನಗಳು, ಸಂಪರ್ಕ ಕ್ರಾಂತಿ ಮೊದಲಾಗಿ ಹಿಂದೆ ಚಕ್ರವರ್ತಿಗಳೂ ಅನುಭವಿಸದೇ ಇರುವ ಸೌಲಭ್ಯಗಳನ್ನು ಇಂದು ಜನಸಾಮಾನ್ಯರು ಅನುಭವಿಸುವಂತೆ ಮಾಡಿರುವುದು ವಿಜ್ಞಾನ ಮತ್ತು ತಂತ್ರಜ್ಞಾನದ ಹೆಗ್ಗಳಿಕೆಯಾಗಿದೆ. ಆದರೆ ಮನಸ್ಸಿನಲ್ಲಿ ದುಃಖ, ದುಗುಡ, ದುಮ್ಮಾನಗಳು ಹೆಚ್ಚಾಗುತ್ತಿವೆ. 110 ವರ್ಷಗಳ ಹಿಂದೆಯೇ ಖ್ಯಾತ ವಿಜ್ಞಾನ ಐನ್ಸ್‍ಟಿನ್ ವಿಜ್ಞಾನ ಮುಂದೆ ಮಾನವೀಯ ಸಂಬಂಧಗಳು ಕಸಿಯುವ ಹಾಗೂ ಸಮಾಜದಲ್ಲಿ ಅಶಾಂತಿ ನೆಲೆಸಲು ಬಳಕೆಯಾಗುವ ಕುರಿತು ಆತಂಕ ವ್ಯಕ್ತಪಡಿಸಿದ್ದನು. ಆಕಾಶಕ್ಕೆ ಯಾನ ಮಾಡುವ ನಾವು ಮನೆಯ ಒಳಗೆ ಕೆಲ ಕಾಲ ನಿರ್ಮೂಲವಾಗಿರಲು ಆಗುತ್ತಿಲ್ಲ. ಈ ದಿಸೆಯಲ್ಲಿ ಹಿರಿಯರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಡೆಯಬೇಕಿದೆ. ಎಲ್ಲೆಡೆ ಭಗವಂತ ಇದ್ದಾನೆ ಎನ್ನುವುದಿದ್ದರೂ ದೇವಾಲಯಗಳನ್ನು ನಿರ್ಮಿಸುವುದು ದೇವರನ್ನು ಮರೆಯಬಾರದು ಎನ್ನುವ ಕಾರಣದಿಂದಾಗಿ. ಆದ್ಯಾತ್ಮಿಕ ನೆಲೆಗಟ್ಟಿನಲ್ಲಿ ನಿರ್ಮಿತವಾದ ಬದುಕು ಸುಖ ಸಂತೋಷ ಕಾಣುತ್ತದೆ.

ಮಕ್ಕಳಿಗೆ ಉತ್ತಮ ಸಂಸ್ಕಾರ, ಧ್ಯಾನ ಹಾಗೂ ಧಾರ್ಮಿಕ ಚಿಂತನೆಗಳನ್ನು ಕಲಿಸಬೇಕಿದೆ. ಇಂದು ನಿರ್ಮಿಸಿರುವ ಆಂಜನೇಯ ಸ್ವಾಮಿಯ ಸ್ವಾಮಿ ನಿಷ್ಟೆ, ಭಕ್ತಿ ಜ್ಞಾನಗಳನ್ನು ಮಾದರಿಯಾಗಿಸಿಕೊಳ್ಳಬೇಕಿದೆ. ತಾಯಿ ಹೃದಯವನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ದೇವಾಲಯಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾಗಲಿದ್ದು, ಊರಿಗೊಂದು ದೇವಾಲಯಗಳ ಅಗತ್ಯವಿದೆ ಎಂದರು.

ಸಮಾರಂಭದಲ್ಲಿ  ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದಸ್ವಾಮೀಜಿ, ಮುಖಂಡರಾದ ಬಿ.ಮುನೇಗೌಡ, ಎನ್.ಗೋಪಾಲಯ್ಯ, ಚಿಕ್ಕರಾಮಕೃಷ್ಣಪ್ಪ, ಡಾ.ಆಂಜಿನಪ್ಪ, ನರಸಿಂಹಯ್ಯ,  ಎಚ್.ಅಪ್ಪಯ್ಯಣ್ಣ, ಆರ್.ಗೋವಿಂದರಾಜು, ರವಿ, ದೇವಾಲಯಗಳ ಜೀರ್ಣೋದ್ದಾರ ಸಮಿತಿಯ ಎನ್.ಸಿ.ಮುನಿರಾಜು, ಚನ್ನಕೃಷ್ಣಯ್ಯ, ಎನ್.ಸಿ.ರಮೇಶ್, ಹನುಮಂತೇಗೌಡ ಮೊದಲಾದ ಗಣ್ಯರು ಭಾಗವಹಿಸಿದ್ದರು.

ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ, ವಿಶೇಷ ಹೋಮ, ಪೂಜಾ ಕಾರ್ಯಕ್ರಮಗಳು ನಡೆದವು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದರ್ಗಾಜೋಗಿಹಳ್ಳಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಬಸವ ಜಯಂತಿ ಅಂಗವಾಗಿ ಸಿದ್ದೇಶ್ವರ ದೇವಾಲಯದ 15ನೇ ವಾರ್ಷಿಕೋತ್ಸವ ಹಾಗೂ ಶ್ರೀ ಸಿದ್ದೇಶ್ವರ ಭವನದ (Sri Siddeshwara Bhavan) ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

[ccc_my_favorite_select_button post_id="121189"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!