ಎಂಎಸ್ ಜಿಪಿ ತ್ಯಾಜ್ಯ ಸಂಸ್ಕರಣೆ ಘಟಕ ಪರಿಶೀಲಿಸಿದ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾಡಳಿತ / ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮನವಿಗೆ ಒಪ್ಪದ ಧರಣಿ ನಿರತರು

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಬರುತ್ತಿರುವ ಲಾರಿಗಳನ್ನು ತಡೆದು ಸ್ಥಳೀಯ ಗ್ರಾಮಸ್ಥರು ಗುರುವಾರ ಧರಣಿ ಆರಂಭಿಸಿರುವುದರಿಂದ ಕಸ ತುಂಬಿದ ಲಾರಿಗಳು ದಾಬಸ್ಪೇಟೆ- ದೊಡ್ಡಬಳ್ಳಾಪುರ ಹೆದ್ದಾರಿಯುದ್ದಕ್ಕು ಸಾಲುಗಟ್ಟಿನಿಂತಿವೆ.

ಧರಣಿ ನಿರತ ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್ ಭೇಟಿ ನೀಡಿ ನಡೆಸಿದ ಮಾತುಕತೆಗೆ ಧರಣಿ ನಿರತರು ಮನ್ನಣೆ ನೀಡದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಬರಿಗೈಯಲ್ಲಿ ಹಿಂದಿರುಗಿದ್ದಾರೆ.

ಈ ಹಿಂದೆ ಎಂಎಸ್ ಜಿಪಿ ಘಟಕದಲ್ಲಿನ ಅವೈಜ್ಞಾನಿಕ ಕಸ ವಿಲೇವಾರಿ ವಿರುದ್ಧ ಧರಣಿ ನಡೆಸಿದ್ದ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ನೀಡಿದ್ದ ಎಲ್ಲಾ ಭರವಸೆಗಳು ಸುಳ್ಳಾಗಿವೆ. ಬೆಂಗಳೂರು ನಗರದಲ್ಲಿ ಕಸದ ರಾಶಿ ಹೆಚ್ಚಾದಾಗ ಹೋರಾಟಗಾರರ ಎಲ್ಲಾ ಮಾತುಗಳನ್ನು ಕೇಳಿ ಭರವಸೆ ನೀಡುವ ಅಧಿಕಾರಿ ಮತ್ತೆ ಮರೆಯುತ್ತ ಅದೇ ಹಳೇ ಚಾಳಿ ಮುಂದುವರೆಸಿ ಕಸದ ರಾಶಿ ತಂದು ಹಾಕುತ್ತಿರುವುದು ಮುಂದುವರೆದೇ ಇದೆ. ಹೀಗಾಗಿ ಬಿಬಿಎಂಪಿ ವ್ಯಾಪ್ತಿಯಿಂದ ಇಲ್ಲಿನ ಕಸ ವಿಲೇವಾರಿ ಘಟಕಕ್ಕೆ ಲಾರಿಗಳು ಕಸ ತಂದು ಸುರಿಯುವುದನ್ನು ನಿಲ್ಲಿಸದ ಹೊರತು ನಮ್ಮ ಧರಣಿಯನ್ನು ಹಿಂದಕ್ಕೆ ಪಡೆಯುವ ಅಥವಾ ಅಧಿಕಾರಿಗಳೊಂದಿಗೆ ಯಾವುದೇ ರೀತಿಯ ಮಾತುಕತೆ ನಡೆಸಲು ಸಿದ್ದರಿಲ್ಲ ಎಂದು ಧರಣಿಯಲ್ಲಿ ಭಾಗವಹಿಸಿರುವ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಯ್ಯ, ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗೀತಾ ಗೋವಿಂದರಾಜು,  ನವ ಬೆಂಗಳೂರು ಹೋರಾಟ ಸಮಿತಿ ಗೌರವಾಧ್ಯಕ್ಷ ಕೆ.ವಿ.ಸತ್ಯಪ್ರಕಾಶ್ ತಿಳಿಸಿದರು.

ಧರಣಿ ಆರಂಭಕ್ಕು ಮುನ್ನ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಎಲ್ಲಾ ಹಂತದ ಅಧಿಕಾರಿಗಳಿಗು ಇಲ್ಲಿನ ಕಸದ ಸಮಸ್ಯೆ ಕುರಿತು ಮನವಿಗಳನ್ನು ಸಲ್ಲಿಸಲಾಗಿತ್ತು. ಆದರೆ ನಮ್ಮ ಯಾವುದೇ ಮನವಿಗೂ ಸ್ಪಂಧಿಸದ ಅಧಿಕಾರಿಗಳು ಕಸದ ಲಾರಿಗಳನ್ನು ತಡೆದು ಧರಣಿ ಆರಂಭಿಸುತ್ತಿದ್ದಂತೆ ಹೋರಾಟಗಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಹೋರಾಟದ ದಿಕ್ಕುತಪ್ಪಿಸುವ ಹುನ್ನಾರನಡೆಸುತ್ತಿದ್ದಾರೆ. ನಮ್ಮ ಬದುಕಿನ ಅಳಿವು ಉಳಿವಿಗಾಗಿ ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕು ಪ್ರಯತ್ನ ಮಾಡಿದರೆ ಅದಕ್ಕೆ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ಅಥವಾ ಜಿಲ್ಲಾಡಳಿತದೊಂದಿಗೆ ನಡೆಸಿರುವ ಎಲ್ಲಾ ಮಾತುಕತೆಗಳು ಸುಳ್ಳಾಗಿರುವ ಹಿನ್ನೆಲೆಯಲ್ಲಿ ಈಗ ನಮ್ಮ ಏಕೈಕ ಬೇಡಿಕೆ ಕಸ ಇಲ್ಲಿಗೆ ಬರುವುದು ನಿಲ್ಲಬೇಕು ಎನ್ನುವುದು ಮಾತ್ರ ಎಂದರು.

ಧರಣಿಯಲ್ಲಿ ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿ ಸದಸ್ಯರಾದ ಗಂಗಹನುಮಯ್ಯ, ಕೃಷ್ಣಮೂರ್ತಿ, ಹನುಮಂತೇಗೌಡ, ಶ್ರೀಲತಾ, ಪ್ರತಿಮಾಉಮೇಶ್, ರವಿಕುಮಾರ್, ರಾಜಣ್ಣ, ರಾಮಲಕ್ಷ್ಮಮ್ಮ, ಪ್ರಸನ್ನ ಸೇರಿದಂತೆ ಗ್ರಾಮಸ್ಥರು ಧರಣಿಯಲ್ಲಿ ಭಾಗವಹಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!