ಮಳೆ ಹಾವಳಿ: ಪೈರು ಬಂದ ರಾಗಿ, ಹಾಳಾದ ತರಕಾರಿ, ಹಣ್ಣುಗಳು

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಮಳೆ ಕೊಂಚ ಮಟ್ಟಿಗೆ ಬಿಡುವು ಕೊಟ್ಟಿದೆ. ಆದರೆ ಮಳೆಯಿಂದಾಗಿ ರಾಗಿ, ಜೋಳ, ಅವರೆ ಮೊದಲಾದ ಕೃಷಿ ಬೆಳೆಗಳು, ಬಾಳೆ, ದ್ರಾಕ್ಷಿ, ತರಕಾರಿ ಮೊದಲಾಗಿ ತೋಟಗಾರಿಕೆ ಬೆಳೆಗಳು ಹಾಳಾಗಿ ರೈತರನ್ನು ಆತಂಕಕ್ಕೀಡು ಮಾಡಿವೆ.

ಹುಸಿಯಾದ ಉತ್ತಮ ರಾಗಿ ನಿರೀಕ್ಷೆ: ತಾಲೂಕಿನ ಹೋಬಳಿಗಳಲ್ಲಿ 2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆಯ ಬೆಳೆ ಪ್ರಗತಿಯನ್ವಯ ಏಕದಳ ಧಾನ್ಯಗಳ ಬಿತ್ತನೆಯಲ್ಲಿ ಶೇ.101ರಷ್ಟು ತನ್ನ ಗುರಿಯನ್ನು ಮುಟ್ಟಿದೆ. ರಾಗಿ, ಮುಸುಕಿನ ಜೋಳ, ಭತ್ತ, ತೃಣಧಾನ್ಯ, ಮೇವಿನ ಜೋಳ, ಪಾಪ್‍ಕಾರ್ನ್ (ಏಕದಳ) ತೊಗರಿ, ಅಲಸಂದೆ, ಅವರೆ, ಉದ್ದು, ಹೆಸರು, ಹುರುಳಿ (ದ್ವಿದಳ), ನೆಲೆಗಡಲೆ, ಹರಳು, ಸಾಸುವೆ, ಹುಚ್ಚೆಳ್ಳು (ಎಣ್ಣೆಕಾಳು), ಸೇರಿದಂತೆ ಎಲ್ಲಾ ಬೆಳೆಗಳ 22,210ಹೆಕ್ಟೇರ್‍ಗಳ ಗುರಿಗೆ 23,883 ಹೆಕ್ಟೇರ್‍ಗಳ ಗುರಿ ತಲುಪಿದೆ.

13,793 ಹೆಕ್ಟೇರ್‍ಗಳ ಗುರಿಯನ್ನು ಹೊಂದಿದ್ದ ರಾಗಿ ಬೆಳೆ 16,710 ಹೆಕ್ಟೇರ್‍ಗಳಲ್ಲಿ ಹಾಗೂ 7,270 ಹೆಕ್ಟೇರ್‍ಗಳ ಗುರಿಯನ್ನು ಹೊಂದಿದ್ದ ಮುಸುಕಿನ ಜೋಳದ ಬೆಳೆ 5,415 ಹೆಕ್ಟೇರ್ ಗಳಲ್ಲಿ ಬೆಳೆಯಲಾಗಿದೆ.

ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ರಾಗಿ ಖರೀದಿ ಮಾಡುತ್ತಿರುವುದರಿಂದ ನಿಗದಿತ ಬೆಲೆ, ಸೂಕ್ತ ಸಮಯಕ್ಕೆ ಹಣ ಬರುವ ನಿರೀಕ್ಷೆ ಹಾಗೂ ರಾಸುಗಳಿಗೆ ಒಣ ಹುಲ್ಲು ದೊರೆಯುವ ನಿರೀಕ್ಷೆಯಲ್ಲಿದ್ದ ರೈತರಿಗೆ ಈಗ ನಿರಾಸೆಯುಂಟಾಗಿದೆ.

ಸತತ ಒಂದು ವಾರದಿಂದಲು ಸುರಿಯುತ್ತಲೇ ಇದ್ದ ಮಳೆಯಿಂದಾಗಿ ರಾಗಿ ಹೊಲಗಳು ಸಂಪೂರ್ಣವಾಗಿ ನೆಲಕಚ್ಚಿದ್ದು, ರಾಗಿ ತೆನೆಗಳು ಮೊಳಕೆಯೊಡೆದು ಪೈರು ಬೆಳೆದಿವೆ. ಈಗ ಮಳೆ ನಿಂತರು ಹುಲ್ಲು ಸಹ ಮೇವಿಗೆ ಹುಲು ಸಹ ದೊರಕದಂತಾಗಿದೆ.

ಹಾಳಾದ ತರಕಾರಿ, ದ್ರಾಕ್ಷಿ ಬೆಳೆ: ಪಾಲಿಹೌಸ್‍ಗಳಲ್ಲಿ ಬೆಳೆಸಲಾಗಿರುವ ಒಂದಿಷ್ಟು ತರಕಾರಿ, ಹೂವುಗಳನ್ನು ಹೊರತು ಬಯಲಿನಲ್ಲಿ ಬೆಳೆಸಲಾಗಿದ್ದ ಬಹುತೇಕ ತರಕಾರಿ, ಹೂವು ಬೆಳೆ ಮಳೆಯಿಂದಾಗಿ ನಾಶವಾಗಿದೆ. ಅಳಿದುಳಿದಿರುವ ಟೊಮೋಟೋ ಕಾಯಿಗಳ ತೊಟ್ಟುಗಳು ಕಪ್ಪಾಗಿ ಗಿಡದಿಂದ ಬಿದ್ದು ಹೋಗುತ್ತಿವೆ. ಕ್ಯಾರೆಟ್, ಮೂಲಂಗಿ, ಭೂಮಿಯಲ್ಲಿಯೇ ಕೊಳೆತು ಹೋಗಿವೆ.  ಹೂವುಗಳು ನೀರು ತುಂಬಿಕೊಂಡು ಬಾಡಿದಂತಾಗಿವೆ. ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಏರಿಕೆಯಾಗಿದ್ದರು ರೈತರಿಗೆ ಅದರ ಲಾಭ ಸಿಗುತ್ತಿಲ್ಲ. 

ಮಳೆಯಿಂದಾಗಿ ಈ ಬಾರಿ ಕಟಾವಿಗೆ ಬಂದಿದ್ದ ದ್ರಾಕ್ಷಿ ಗಿಡದಲ್ಲಿಯೇ ಕೊಳೆಯುತ್ತಿದ್ದು, ದ್ರಾಕ್ಷಿಗೆ ಬೆಲೆ ಕಡಿಮೆಯಾಗಿದೆ. ಬಾಳೆ, ಆಲೂಗಡ್ಡಿ, ಬೀನ್ಸ್ ಮೊದಲಾದ ಬೆಳೆಗಳು ಹಾಳಾಗಿವೆ. ಪರಿಸ್ಥಿತಿ ಸುಧಾರಿಸಬೇಕಾದರೆ ಇನ್ನೂ ಮೂರು ತಿಂಗಳು ಕಾಯಬೇಕಿದೆ ಎನ್ನುತ್ತಾರೆ ವಡ್ಡರಹಳ್ಳಿಯ ರೈತ ಶ್ರೀನಿವಾಸ ರೆಡ್ಡಿ.

ಮಾಹಿತಿ ಸಂಗ್ರಹ: ತಾಲೂಕಿನಲ್ಲಿ ಈವರೆಗೆ ಅಂದಾಜು 120ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ. ತೋಟಗಾರಿಕೆ, ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸರ್ವೆ ನಡೆಸಲಾಗುತ್ತಿದ್ದು, ಇನ್ನು ಮೂರು ದಿನಗಳೊಳಗೆ ವರದಿ ಸಲ್ಲಿಸಲಾಗುವುದು. ಬೆಳೆ ಹಾನಿಗೊಳಗದ ರೈತರ ಎಫ್‍ಐಡಿ ಮಾಹಿತಿಯನ್ನು ತಂತ್ರಾಂಶದಲ್ಲಿ ಅಪ್‍ಲೋಡ್ ಮಾಡಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆಯ ತಾಲೂಕು ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!