ಬಿಬಿಎಂಪಿ ಕಸ ಕಂಟಕದ ವಿರುದ್ದ ಧರಣಿ: ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ಹಿಂತಿರುಗಿದ ಅಧಿಕಾರಿಗಳು

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿ ಸಮೀಪದ ಎಂಎಸ್ಜಿಪಿ ಕಸ ವಿಲೇವಾರಿ ಘಟಕದಿಂದ ಹೊರ ಬರುತ್ತಿರುವ ರಾಸಾಯನಿಕ ಯುಕ್ತ ಕೊಳಚೆ ನೀರು ತಡೆದು ನಿಲ್ಲಿಸಲು ತಡೆಗೋಡೆ ನಿರ್ಮಿಸುವ ಸಲುವಾಗಿ ಕಟ್ಟಡ ಸಾಮಗ್ರಿಗಳನ್ನು ಸಾಗಾಣಿಕೆ ಮಾಡಲು ರಸ್ತೆ ತಡೆ ತೆರವು ಮಾಡುವಂತೆ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಮಾಡಿದ ಮನವಿಗೆ ಧರಣಿ ನಿರತ ಗ್ರಾಮಸ್ಥರು ನಿರಾಕರಿಸಿದ್ದು ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ಭಾನುವಾರ ಅಧಿಕಾರಿಗಳು ವಾಪಾಸಾಗಿದ್ದಾರೆ.

ತಹಶೀಲ್ದಾರ್ ಟಿ.ಎಸ್.ಶಿವರಾಜ್, ಡಿವೈಎಸ್ಪಿ ನಾಗರಾಜ್ ಅವರು ಧರಣಿ ನಿರತರೊಂದಿಗೆ ಮಾತುಕತೆ ನಡೆಸಿ ಕಸದಿಂದ ಉಂಟಾಗಿರುವ ಎಲ್ಲಾ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸುವ ಹಾಗೂ ಕೊಳಚೆ ನೀರು ಗ್ರಾಮಗಳ ಕಡೆಗೆ ಹಳ್ಳಗಳ ಮೂಲಕ ಹರಿದು ಬರದಂತೆ ತಡೆಯುವುದು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವುದಾಗಿ ತಿಳಿಸಿದರು‌. ಆದರೆ ಧರಣಿ ನಿತರು ಈ ಎಲ್ಲಾ ಸಮಸ್ಯೆಗಳಿಗೆ ಮೂಲ ಕಾರಣವಾಗಿರುವ ಕಸ ಇಲ್ಲಿಗೆ ಬರುವುದನ್ನು ನಿಲ್ಲಿಸಿ. ಉಳಿದೆಲ್ಲಾ ಸಮಸ್ಯೆಗಳು ತಾವಿಗೇ ಬಗೆಹರಿಯಲಿವೆ ಎಂದು ಹೇಳುವ ಮೂಲಕ ಧರಣಿಯನ್ನು ಮುಂದುವರೆಸಿದ್ದಾರೆ.

ಧರಣಿಯಲ್ಲಿ ಭಾಗವಹಿಸಿರುವ ಕೆ.ವಿ.ಸತ್ಯಪ್ರಕಾಶ್, ಅಶ್ವತ್ಥನಾರಾಯಣಗೌಡ, ಗೋವಿಂದರಾಜು, ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಯ್ಯ ಮಾತನಾಡಿ, ತಾಲ್ಲೂಕು ಆಡಳಿತ ಸೇರಿದಂತೆ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡುತ್ತಿರುವ ಎಲ್ಲಾ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಕುರಿತು ಬಣ್ಣದ ಮಾತುಗಳನ್ನು ಹೇಳುತ್ತಿದ್ದಾರೆ. ಇದೇ ರೀತಿಯ ಬಣ್ಣದ ಮಾತುಗಳನ್ನು ಎರಡು ವರ್ಷಗಳ ಹಿಂದೆ ಧರಣಿ ನಡೆಸಿದಾಗಲು ಹೇಳಲಾಗಿತ್ತು. ಇವರ ಮಾತುಗಳನ್ನು ನಂಬಿಯೇ ಅಂದು ಧರಣಿಯನ್ನು ಹಿಂದಕ್ಕೆ ಪಡೆಯಲಾಗಿತ್ತು. ಆದರೆ ಧರಣಿ ಅಂತ್ಯಗೊಂಡ ದಿನ ಕಣ್ಮರೆಯಾದ ಅಧಿಕಾರಿಗಳು  ಈಗ ಧರಣಿ ಆರಂಭವಾಗುತ್ತಿದ್ದಂತೆ ಮತ್ತೆ ತಮ್ಮ ಹಳೇ ಚಾಳಿಯನ್ನು ಮುಂದುವರೆಸುತ್ತ ಭರವಸೆಯ ನಾಟಕದ ಮಾತುಗಳನ್ನು ಜನರ ಮುಂದೆ ಪುಂಕಾನುಪುಂಕವಾಗಿ ಹೇಳುವ ಮೂಲಕ ನಾವು ಧರಣಿ ನಡೆಸುತ್ತಿರುವುದೇ ದೊಡ್ಡ ತಪ್ಪು ಎನ್ನುವಂತೆ ಬಿಂಬಿಸಲು ಹಾಗೂ ತಾವು ಧರಣಿ ನಿಲ್ಲಿಸಲು ಎಷ್ಟೆಲ್ಲಾ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಸಚಿವರುಗಳನ್ನು ಮೆಚ್ಚಿಸಲು ನಾಟಕ ಮಾಡುತ್ತಿದ್ದಾರೆ.

ಈ ಬಾರಿ ಧರಣಿ ಆರಂಭಕ್ಕು ಮುನ್ನ ಅಧಿಕಾರಿಗಳ, ಸಚಿವರುಗಳ ಯಾವುದೇ ಭರವಸೆಗಳನ್ನು ನಂಬದೆ ಬೆಂಗಳೂರಿನ ಕಸ ಇಲ್ಲಿಗೆ ತರುವುದನ್ನು ನಿಲ್ಲಿಸುವ ಕುರಿತಂತೆ ಲಿಖಿತವಾಗಿ ಮಾಹಿತಿ ನೀಡಿದರಷ್ಟೆ ಧರಣಿಯನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಹೇಳಿದ್ದಾರೆ.

ನಾಳೆ ಪರಿಸರ ಮಾಲಿನ್ಯ ನಿಯಂತ್ರ ಮಂಡಳಿ ಅಧಿಕಾರಿಗಳು ಎಂಎಸ್ ಜಿಪಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!