ಬಿಬಿಎಂಪಿ ಕಸ ಕಂಟಕದ ವಿರುದ್ದ ಧರಣಿ: ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ಹಿಂತಿರುಗಿದ ಅಧಿಕಾರಿಗಳು

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿ ಸಮೀಪದ ಎಂಎಸ್ಜಿಪಿ ಕಸ ವಿಲೇವಾರಿ ಘಟಕದಿಂದ ಹೊರ ಬರುತ್ತಿರುವ ರಾಸಾಯನಿಕ ಯುಕ್ತ ಕೊಳಚೆ ನೀರು ತಡೆದು ನಿಲ್ಲಿಸಲು ತಡೆಗೋಡೆ ನಿರ್ಮಿಸುವ ಸಲುವಾಗಿ ಕಟ್ಟಡ ಸಾಮಗ್ರಿಗಳನ್ನು ಸಾಗಾಣಿಕೆ ಮಾಡಲು ರಸ್ತೆ ತಡೆ ತೆರವು ಮಾಡುವಂತೆ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಮಾಡಿದ ಮನವಿಗೆ ಧರಣಿ ನಿರತ ಗ್ರಾಮಸ್ಥರು ನಿರಾಕರಿಸಿದ್ದು ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ಭಾನುವಾರ ಅಧಿಕಾರಿಗಳು ವಾಪಾಸಾಗಿದ್ದಾರೆ.

ತಹಶೀಲ್ದಾರ್ ಟಿ.ಎಸ್.ಶಿವರಾಜ್, ಡಿವೈಎಸ್ಪಿ ನಾಗರಾಜ್ ಅವರು ಧರಣಿ ನಿರತರೊಂದಿಗೆ ಮಾತುಕತೆ ನಡೆಸಿ ಕಸದಿಂದ ಉಂಟಾಗಿರುವ ಎಲ್ಲಾ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸುವ ಹಾಗೂ ಕೊಳಚೆ ನೀರು ಗ್ರಾಮಗಳ ಕಡೆಗೆ ಹಳ್ಳಗಳ ಮೂಲಕ ಹರಿದು ಬರದಂತೆ ತಡೆಯುವುದು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವುದಾಗಿ ತಿಳಿಸಿದರು‌. ಆದರೆ ಧರಣಿ ನಿತರು ಈ ಎಲ್ಲಾ ಸಮಸ್ಯೆಗಳಿಗೆ ಮೂಲ ಕಾರಣವಾಗಿರುವ ಕಸ ಇಲ್ಲಿಗೆ ಬರುವುದನ್ನು ನಿಲ್ಲಿಸಿ. ಉಳಿದೆಲ್ಲಾ ಸಮಸ್ಯೆಗಳು ತಾವಿಗೇ ಬಗೆಹರಿಯಲಿವೆ ಎಂದು ಹೇಳುವ ಮೂಲಕ ಧರಣಿಯನ್ನು ಮುಂದುವರೆಸಿದ್ದಾರೆ.

ಧರಣಿಯಲ್ಲಿ ಭಾಗವಹಿಸಿರುವ ಕೆ.ವಿ.ಸತ್ಯಪ್ರಕಾಶ್, ಅಶ್ವತ್ಥನಾರಾಯಣಗೌಡ, ಗೋವಿಂದರಾಜು, ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಯ್ಯ ಮಾತನಾಡಿ, ತಾಲ್ಲೂಕು ಆಡಳಿತ ಸೇರಿದಂತೆ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡುತ್ತಿರುವ ಎಲ್ಲಾ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಕುರಿತು ಬಣ್ಣದ ಮಾತುಗಳನ್ನು ಹೇಳುತ್ತಿದ್ದಾರೆ. ಇದೇ ರೀತಿಯ ಬಣ್ಣದ ಮಾತುಗಳನ್ನು ಎರಡು ವರ್ಷಗಳ ಹಿಂದೆ ಧರಣಿ ನಡೆಸಿದಾಗಲು ಹೇಳಲಾಗಿತ್ತು. ಇವರ ಮಾತುಗಳನ್ನು ನಂಬಿಯೇ ಅಂದು ಧರಣಿಯನ್ನು ಹಿಂದಕ್ಕೆ ಪಡೆಯಲಾಗಿತ್ತು. ಆದರೆ ಧರಣಿ ಅಂತ್ಯಗೊಂಡ ದಿನ ಕಣ್ಮರೆಯಾದ ಅಧಿಕಾರಿಗಳು  ಈಗ ಧರಣಿ ಆರಂಭವಾಗುತ್ತಿದ್ದಂತೆ ಮತ್ತೆ ತಮ್ಮ ಹಳೇ ಚಾಳಿಯನ್ನು ಮುಂದುವರೆಸುತ್ತ ಭರವಸೆಯ ನಾಟಕದ ಮಾತುಗಳನ್ನು ಜನರ ಮುಂದೆ ಪುಂಕಾನುಪುಂಕವಾಗಿ ಹೇಳುವ ಮೂಲಕ ನಾವು ಧರಣಿ ನಡೆಸುತ್ತಿರುವುದೇ ದೊಡ್ಡ ತಪ್ಪು ಎನ್ನುವಂತೆ ಬಿಂಬಿಸಲು ಹಾಗೂ ತಾವು ಧರಣಿ ನಿಲ್ಲಿಸಲು ಎಷ್ಟೆಲ್ಲಾ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಸಚಿವರುಗಳನ್ನು ಮೆಚ್ಚಿಸಲು ನಾಟಕ ಮಾಡುತ್ತಿದ್ದಾರೆ.

ಈ ಬಾರಿ ಧರಣಿ ಆರಂಭಕ್ಕು ಮುನ್ನ ಅಧಿಕಾರಿಗಳ, ಸಚಿವರುಗಳ ಯಾವುದೇ ಭರವಸೆಗಳನ್ನು ನಂಬದೆ ಬೆಂಗಳೂರಿನ ಕಸ ಇಲ್ಲಿಗೆ ತರುವುದನ್ನು ನಿಲ್ಲಿಸುವ ಕುರಿತಂತೆ ಲಿಖಿತವಾಗಿ ಮಾಹಿತಿ ನೀಡಿದರಷ್ಟೆ ಧರಣಿಯನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಹೇಳಿದ್ದಾರೆ.

ನಾಳೆ ಪರಿಸರ ಮಾಲಿನ್ಯ ನಿಯಂತ್ರ ಮಂಡಳಿ ಅಧಿಕಾರಿಗಳು ಎಂಎಸ್ ಜಿಪಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!