ಬಿಬಿಎಂಪಿ ಕಸ ಮಾಫಿಯಕ್ಕೆ ಗ್ರಾಮೀಣ ಜನರ ಆರೋಗ್ಯ ಹಾಳಾಗುತ್ತಿದೆ: ಸಿದ್ಧರಾಮ ಚೈತನ್ಯಸ್ವಾಮಿ

ದೊಡ್ಡಬಳ್ಳಾಪುರ: ಕಸ ಟೆಂಡರ್ ಪಡೆದವರ ಏಕೈಕ ಉದ್ದೇಶ ಬೆಂಗಳೂರು ನಗರದಿಂದ ಕಸ ಹೊರ ಹೋಗಬೇಕು ಎನ್ನುವುದೇ ಹೊರತು ಕಸದ ರಾಶಿ ಹಾಕುವ ಪ್ರದೇಶದಲ್ಲಿನ ಜನರ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದಾಗಿದೆ ಎಂದು ಕುಣಿಗಲ್ ತಾಲ್ಲೂಕಿನ ಕಿತ್ನಾಮಂಗಲ-ಕಾಡುಮತ್ತಿಕೆರೆ ಶ್ರೀಅರೆಶಂಕರಮಠದ ಸಿದ್ಧರಾಮಚೈತನ್ಯ ಮಹಾಸ್ವಾಮೀ ದೂರಿದ್ದಾರೆ.

ತಾಲ್ಲೂಕಿನ ಚಿಗರನೇಹಳ್ಳಿಯ ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ವಿರುದ್ಧ ಗ್ರಾಮಸ್ಥರು ನಡೆಸುತ್ತಿರುವ ಧರಣಿಯಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದರು.

ಅವೈಜ್ಞಾನಿಕ ಕಸ ವಿಲೇವಾರಿಯಿಂದಾಗಿ ಇಲ್ಲಿನ ಗ್ರಾಮಗಳ ಜನರ ಬದುಕು ನರಕಮಯವಾಗಿದೆ. ಈ ಕುರಿತಂತೆ ಹಲವಾರು ಬಾರಿ ಪ್ರತಿಭಟನೆಗಳನ್ನು ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವಕಾಶ ನೀಡಿದ್ದಾರೆ. ಅದರೂ ಸಹ ತಮ್ಮ ತಪ್ಪುಗಳನ್ನು ತಿದ್ದಿಕೊಂಡಿಲ್ಲ. ಹೀಗಾಗಿ ಕಸ ಇಲ್ಲಿಗೆ ಬರುವುದನ್ನು ನಿಲ್ಲಿಸುವವರೆಗೂ ಧರಣಿಯನ್ನು ಮುಂದುವರೆಸುವುದೇ ಅಂತಿಮ ನಿರ್ಧಾರವಾಗಬೇಕಿದೆ. ಜನಪರವಾದ ಹೋರಾಟಗಳನ್ನು ನಡೆಸುವ ಮುಂದಾಳತ್ವವಹಿಸುವವರ ಮೇಲೆ ಆರೋಪಗಳು ಬರುವುದು ಸಹಜ. ಈ ಎಲ್ಲಾ ಆರೋಪಗಳನ್ನು ಮೆಟ್ಟಿನಿಂತಾಗ ಮಾತ್ರ ನಮ್ಮ ಮತ್ತು ನಮ್ಮ ಮುಂದಿನ ಪೀಳಿಗೆಯ  ಜನರ ಬದುಕು ಸುಧಾರಿಸಲು ಸಾಧ್ಯ. ನಮ್ಮ ಸುತ್ತಲಿನ ಪರಿಸರ ಕೆಟ್ಟರೆ ಮತ್ತೆ ಸರಿಪಡಿಸಲು ದಶಕಗಳೇ ಬೇಕಾಗಲಿದೆ. ಕಸದ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ರಾಜಕೀಯ ಲಾಭಗಳನ್ನು ಹುಡುಕದೆ ಪ್ರಮಾಣಿಕ ಹೋರಾಟ ನಡೆಸಬೇಕಿದೆ ಎಂದರು.

ಧರಣಿಯ ಮುಂದಾಳತ್ವ ವಹಿಸಿರುವ ನವ ಬೆಂಗಳೂರು ಹೋರಾಟ ಸಮಿತಿ ಗೌರವ ಅಧ್ಯಕ್ಷ ಕೆ.ವಿ.ಸತ್ಯಪ್ರಕಾಶ್, ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಆರ್.ಸಿದ್ದಲಿಂಗಯ್ಯ ಮಾತನಾಡಿ, 2015 ರಿಂದಲೆ ಕಸ ವಿಲೇವಾರಿಯನ್ನು ವಿರೊಧಿಸುತ್ತಲೇ ಬಂದಿದ್ದೇವೆ. ದಿನಕ್ಕೆ 400 ಮೆಟ್ರಿಕ್ ಟನ್ ಕಸ ವಿಲೇವಾರಿ ಮಾಡುವುದಾಗಿ ಹೇಳಲಾಗಿತ್ತು. ಈಗ ಘಟಕದ ಕಸ ವಿಲೇವಾರಿ ಸಾಮರ್ಥ್ಯವನ್ನು ಮೀರಿ ದಿನಕ್ಕೆ 4,500 ಸಾವಿರ ಮೆಟ್ರಿಕ್ ಟನ್ ಬೆಂಗಳೂರಿನ ಕಸವನ್ನು ಇಲ್ಲಿಗೆ ತಂದು ಸುರಿಯಲಾಗುತ್ತಿದೆ. ನಮ್ಮ ಗ್ರಾಮಗಳಿಗೆ ಬಿಬಿಎಂಪಿ ನೀಡುವ ಸೌಲಭ್ಯಗಳು ಬೇಕಿಲ್ಲ. ಎಂಎಸ್ ಪಿ ಘಟಕವನ್ನು ಇಲ್ಲಿಂದ ಎತ್ತಂಗಡಿ ಮಾಡಿ ನಮ್ಮ ಬದುಕನ್ನು ಉಳಿಸಲಿ ಎಂದು ಆಗ್ರಹಿಸಿದರು.

ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ ಹಾಗೂ ಜೆಡಿಎಸ್ ಮುಖಂಡ ಹರೀಶ್ ಗೌಡ ಧರಣಿ ಸ್ಥಳಕ್ಕೆ ಭೇಟಿ ಮಾಹಿತಿ ಪಡೆದಿದ್ದಲ್ಲದೆ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಪ್ರತಿಭಟನೆಯಲ್ಲಿ ನವ ಬೆಂಗಳೂರು ಹೋರಾಟ ಸಮಿತಿ ಅಧ್ಯಕ್ಷ ಜಿ.ಎನ್.ಪ್ರದೀಪ್, ಮುಖಂಡರಾದ ಅಶ್ವತ್ಥನಾರಾಯಣ, ದೇವರಾಜಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಲತಾ,ಪ್ರಸನ್ನ ಸೇರಿದಂತೆ ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಗ್ರಾಮಸ್ಥರು ಧರಣಿಯಲ್ಲಿ ಭಾಗವಹಿಸಿದ್ದಾರೆ.

ಕದ್ದುಮುಚ್ಚಿ ಭೇಟಿ: ಎಂಎಸ್ಜಿಪಿ ಕಸ ವಿಲೇವಾರಿ ಘಟಕ ಇಷ್ಟೊಂದು ದಾರಿತಪ್ಪಿ ನಡೆಯಲು  ಪರಿಸರ ಮಾಲಿನ್ಯ ನಿಯಂತ್ರ ಮಂಡಲಿಯರವರೇ ಹೊಣೆ. ಹೀಗಾಗಿ ಇಲ್ಲಿಗೆ ಭೇಟಿ ನೀಡಲು ಅವಕಾಶ ನೀಡುವುದಿಲ್ಲ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಧರಣಿ ನಿರತರಿಗೆ ತಿಳಿಯದಂತೆ ಎಂಎಸ್ ಜಿಪಿ ಘಟಕ ಪ್ರವೇಶ ಮಾಡಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿಯ ಪರಿಸರ ಅಧಿಕಾರಿ ಸುನಿತಾ, ಸಹಾಯಕ ಅಧಿಕಾರಿ ವಾಣಿ ಅವರನ್ನು ಹಿಂಬಾಲಿಸಿ ಹೋಗಿ ಕಸದಿಂದ ಹೊರ ಬಂದಿರುವ ಕಲುಷಿತ ನೀರನ್ನು ಸಂಗ್ರಹ ಮಾಡಿಕೊಳ್ಳುವಂತೆ ಹಾಗೂ ಅಲ್ಲಿನ ವಾಸ್ತವ ಸ್ಥಿತಿಯ ಕುರಿತು ವರದಿ ನೀಡುವಂತೆ ಮನವಿ ಮಾಡಿದರು.

‘ಇಲ್ಲಿನ ಕಸ ವಿಲೇವಾರಿ ಘಟಕದಿಂದ ಆಗುತ್ತಿರುವ ತೊಂದರೆಗಳ ಕುರಿತಂತೆ ಹಲವಾರು ಬಾರಿ ಮಾಲಿನ್ಯ ನಿಯಂತ್ರಣ ಮಂಡಲಿ ಅಧಿಕಾರಿಗಳಿಗೆ ನೋಂದಾಯಿತ ಅಂಚೆ ಮೂಲಕ ದೂರು ನೀಡಿದ್ದರು ಒಂದು ಪತ್ರಕ್ಕು ಉತ್ತರ ನೀಡಿಲ್ಲ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ಮಾಡಿಲ್ಲ. ಧರಣಿ ಆರಂಭಿಸಿದ್ದರಿಂದ ಇಂದು ಇಲ್ಲಿಗೆ ಭೇಟಿ ನೀಡಿದ್ದೀರಿ. ಈಗಲಾದರು ಸರಿಯಾದ ರೀತಿಯಲ್ಲಿ ವರದಿ ನೀಡಿ’ ಎಂದು  ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಯ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ಉತ್ತರಿಸಿದ ಪರಿಸರ ನಿಯಂತ್ರಣ ಮಂಡಲಿ ಅಧಿಕಾರಿಗಳಾದ ಸುನಿತಾ ‘ನಮಗೆ ಇದುರೆಗೂ ಯಾವುದೇ ಮನವಿಯು ಬಂದಿಲ್ಲ’ ಎಂದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!