ಬಿಬಿಎಂಪಿ ಕಸ ಕಂಟಕದ ವಿರುದ್ದ ಧರಣಿ: ರಾತ್ರೋರಾತ್ರಿ ರಾಗಿ ಹೊಲಕ್ಕೆ ಹರಿದ ಕೊಳಚೆ ನೀರು…! / ಸಚಿವರ ಮಾತಿಗೆ ಕಿಮ್ಮತ್ತು ನೀಡದ ಧರಣಿನಿತರು / ಜಿಲ್ಲಾಧಿಕಾರಿ ಆದೇಶಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕಕ್ಕೆ ಬಿಬಿಎಂಪಿ ವ್ಯಾಪ್ತಿಯಿಂದ ಕಸ ತಂದು ಸುರಿಯುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ನಡೆಸುತ್ತಿರುವ ಧರಣಿ ಸ್ಥಕ್ಕೆ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಭೇಟಿ ನೀಡಿ ನಡೆಸಿದ ಮಾತುಕತೆ ವಿಫಲವಾಗಿದೆ. ಕಸ ತಂದು ಇಲ್ಲಿಗೆ ರಾಶಿ ಹಾಕುತ್ತಿರುವುದನ್ನು ನಿಲ್ಲಿಸುವವರೆಗೂ ಧರಣಿಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ. ಹೀಗಾಗಿ ಧರಣಿ ಮುಂದುವರೆದಿದೆ.

ಕಸ ವಿಲೇವಾರಿ ಘಟಕದ ಸುತ್ತಲು ಉಂಟಾಗಿರುವ ಪರಿಸರ ಹಾನಿಯ ಕುರಿತು ವೀಕ್ಷಣೆ ಮಾಡಿದ ಜಿಲ್ಲಾ ಉಸ್ತುವಾರಿ ಸವಿಚ ಎಂ.ಟಿ.ಬಿ.ನಾಗರಾಜ್, ಸೂಕ್ತ ನಿರ್ವಹಣೆ ಕೊರತೆ ಹಾಗೂ ಮಳೆ ಹೆಚ್ಚಾಗಿದ್ದರಿಂದ ಸಮಸ್ಯೆ ಉಂಟಾಗಿದೆ. ಸೂಕ್ತ ನಿರ್ವಹಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳುವ ಬಗ್ಗೆ ಬಿಬಿಎಂಪಿ ಹಾಗೂ ಎಂಎಸ್ಜಿಪಿ ಕಸ ವಿಲೇವಾರಿ ಘಟಕದವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕಲುಷಿತ ನೀರು ಹೊರ ಹೋಗದಂತೆ ಹಾಗೂ ಕಸದಿಂದ ವಾಸನೆ ಹೊರ ಹೋಗದಂತೆ ತುರ್ತು ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಲಿದ್ದಾರೆ. ಆದರೆ ಏಕಾಏಕಿ ಕಸ ಬರುವುದನ್ನು ಸಂಪೂರ್ಣವಾಗಿ ನಿಲ್ಲಿಸುವುದು ಕಷ್ಟವಾಗಲಿದೆ.ಇಲ್ಲಿನ ಸಮಸ್ಯೆ ಕುರಿತು ಮುಖ್ಯಮಂತ್ರಿಗಳೊಂದಿಗು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಕುರಿತಂತೆ ಚರ್ಚಿಸಲಾಗುವುದು. ಧರಣಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮನವಿ ಮಾಡಿದರು. 

ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಕೇಂದ್ರ ವಲಯ ಐಜಿಪಿ ಚಂದ್ರಶೇಖರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನ ವಂಶಿಕೃಷ್ಣ, ತಹಶೀಲ್ದಾರ್ ಟಿ.ಎಸ್ ಶಿವರಾಜು, ಬಿಬಿಎಂಪಿ ಘನ ತ್ಯಾಜ್ಯ ನಿರ್ವಹಣೆ ವಿಶೇಷ ಆಯುಕ್ತ ಸರ್ಫರಾಜ್ ಇದ್ದರು.

ಸಚಿವರ ಮಾತಿಗೆ ಕಿಮ್ಮತ್ತು ನೀಡದ ಧರಣಿನಿತರು: ಧರಣಿ ಆರಂಭಿಸಿದಾಗಿನಿಂದಲು ನಮ್ಮ ಏಕೈಕ ಒತ್ತಾಯ ಕಸದ ಲಾರಿಗಳು ಇಲ್ಲಿಗೆ ಬರುವುದನ್ನು ನಿಲ್ಲಿಸಬೇಕು ಎನ್ನುವುದಾಗಿದೆ. ನಮ್ಮ ಈ ಒತ್ತಾಯಕ್ಕೆ ಒಪ್ಪುವ ಅಧಿಕಾರಿಗಳು, ಸಚಿವರು ಮಾತ್ರ ಧರಣಿ ಸ್ಥಳಕ್ಕೆ ಬಂದು ಮಾತುಕತೆ ನಡೆಸಬಹುದಾಗಿದೆಯೇ ಹೊರತು ವಿನಾಕಾರಣ ಭೇಟಿ ನೀಡಿ ಮೇಲಾಧಿಕಾರಿಗಳನ್ನು ಮೆಚ್ಚಿಸುವ ಕೆಲಸ ಮಾಡುವವರು ಸಮಸಯ ವ್ಯರ್ಥ ಮಾಡಲು ಇಲ್ಲಿಗೆ ಬರುವ ಅಗತ್ಯವೇ ಇಲ್ಲ ಎಂದು ಧರಣಿ ನಿರತ ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಭಕ್ತರಹಳ್ಳಿ, ಸಾಸಲು, ಆರೂಢಿ, ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. 

ಇತ್ತೀಚೆಗಷ್ಟೇ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಬಿಬಿಎಂಪಿ ಕಸ ಇಲ್ಲಿಗೆ ಬರುವುದನ್ನು ನಿಲ್ಲಿಸಲು ಹೋರಾಟ ನಡೆಸಲಾಗುವುದು ಎಂದು ಮತದಾರರಿಗೆ ಭರವಸೆ ನೀಡಿದ್ದೆವೆ. ಹೀಗಾಗಿ ಈಗ ಕಸ ಇಲ್ಲಿಗೆ ಬರುವುದನ್ನು ನಿಲ್ಲುವುದೇ ನಮ್ಮ ಪ್ರಮುಖ ಆಗ್ರಹವಾಗಿದೆ. ಕಸ ತಂದು ಇಲ್ಲಿಗೆ ಹಾಕುವುದನ್ನು ನಿಲ್ಲಿಸುವ ನಮ್ಮ ಬೇಡಿ ಈಡೇರದಿದ್ದರೆ ಡಿ.10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆ ಬಹಿಷ್ಕರಿಸುವ ಕುರಿತಂತೆ ಒಂದೆರಡು ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಧರಣಿಯಲ್ಲಿ ಭಾಗವಹಿಸಿರುವ ಭಕ್ತರಹಳ್ಳಿ, ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ತಿಳಿಸಿದ್ದಾರೆ.

ರಾಗಿ ಹೊಲಕ್ಕೆ ಹರಿದ ಕೊಳಚೆ ನೀರು: ಚಿಗರೇನಹಳ್ಳಿಯ ಎಂಎಸ್ಜಿಪಿ ಕಸ ವಿಲೇವಾರಿ ಘಟಕದಿಂದ ಹೊರ ಬಂದು ಚಕ್ಡ್ಯಾಮಿನಲ್ಲಿ ಶೇಖರಣೆಯಾಗಿದ್ದ ರಾಸಾಯನಿಕ ಯುಕ್ತ ಕಲುಷಿತ ಕೊಳಚೆ ನೀರಿನ ಕುರಿತಂತೆ ಸೋಮವಾರ ಸ್ಥಳಕ್ಕೆ ಭೇಟಿ ನೀಡಿದ್ದ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಲಿ ಅಧಿಕಾರಿಗಳು ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ಮಾಲೀಕರನ್ನು ತೀವ್ರ ತರಾಟೆ ತೆಗೆದುಕೊಂಡಿದ್ದರು. ಇದೇ ಚಕ್ಡ್ಯಾಮಿನಿಂದ ಕಲುಷಿತ ನೀರಿನ ಮಾದರಿಯನ್ನು ಸಂಗ್ರಹ ಮಾಡಿಕೊಂಡಿದ್ದರು. ಅಲ್ಲದೆ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಬಿಬಿಎಂಪಿ ಹಿರಿಯ ಅಧಿಕಾರಿಗಳು ಭೇಟಿ ನೀಡುವ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಚಕ್ಡ್ಯಾಮಿನಿಂದ ನೀರು ಹೊರಗೆ ಸಾಗಿಸುವ ಅತುರದಲ್ಲಿ ಅಕ್ಕಪಕ್ಕದಲ್ಲಿನ ರೈತರ ರಾಗಿ ಹೊಲಗಳಿಗೆ ಜನರೇಟರ್ ಮೂಲಕ ಹರಿದು ಬಿಟ್ಟಿದ್ದಾರೆ. ಇದರಿಂದ ಮುಡ್ಲುಕಾಳೇನಹಳ್ಳಿ ಗ್ರಾಮರ ರೈತ ಮಹಿಳೆ ಹನುಮಕ್ಕ ಅವರ ರಾಗಿ ಹೊಲದ ತುಂಬಾ ಕಲುಷಿತ ನೀರು ತುಂಬಿಕೊಂಡಿದೆ. ಇದರಿಂದಾಗಿ ಕೊಯ್ಲಿಗೆ ಬಂದಿದ್ದ ರಾಗಿ ಹೊಲ ಹಾಳಗಾಗಿರುವ ಕುರಿತಂತೆ ಹನುಮಕ್ಕ ಅವರು ಕಂದಾಯ ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ. 

ಜಿಲ್ಲಾಧಿಕಾರಿ ಆದೇಶಕ್ಕೆ ಆಕ್ರೋಶ: ರಾಜ್ಯದಲ್ಲಿ ಒಮೈಕ್ರೋನ್ ಹಾವಳಿಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಹಲವಾರು ನಿಯಮಗಳನ್ನು ಜಾರಿಗೆ ತರುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಮಾತ್ರ ರಾಜ್ಯ ಸರ್ಕಾರ ನೀಡಿರುವ ಸೂಚನೆಗಳಷ್ಟೇ ಅಲ್ಲದೆ ಪ್ರತಿಭಟನೆ,ಧರಣಿ ಸೇರಿದಂತೆ ಎರಡು ಗಂಟೆಗಳಿಗು ಹೆಚ್ಚಿನ ಸಮಯ ಗುಂಪು ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಬಿಬಿಎಂಪಿ ಕಸ ಕಂಟಕದ ವಿರುದ್ಧ ರೈತರು ನಡೆಸುತ್ತಿರುವ ಧರಣಿಯನ್ನು ಹತ್ತಿಕ್ಕುವ ಸಲುವಾಗಿಯೇ ಈ ಆದೇಶವನ್ನು ಹೊರಡಿಸಿದ್ದಾರೆ. ಧರಣಿ ನಿರತ ರೈತರಿಗೆ ಉತ್ತರ ನೀಡಲಾಗದೆ ಅಡ್ಡದಾರಿಯ ಮೂಲಕ ಧರಣಿಯನ್ನು ನಿಲ್ಲಿಸಲು ಹೊರಡಿಸಲಾಗಿರುವ ಆದೇಶವನ್ನು ಉಲ್ಲಂಘಿಸಿಯೇ ಧರಣಿ ನಡೆಸಲಾಗುವುದು. 

ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವಂತೆ ಲಾಕ್ಡೌನ್ ಜಾರಿ ಇದ್ದಾಗಿನಿಂದಲು ದೆಹಲಿಯ ಗಡಿ ಸುತ್ತ ಲಕ್ಷಾಂತರ ಸಂಖ್ಯೆಯಲ್ಲಿ ರೈತರು ಇಂದಿಗೂ ಧರಣಿ ನಡೆಸುತ್ತಿದ್ದಾರೆ. ಅವರಿಗೆ ಅನ್ವಯಸದ ನಿಯಮ ನಮಗೂ ಅನ್ವಯಿಸುವುದಿಲ್ಲ. ನಾವೆಲ್ಲರೂ ಅಂಬೇಡ್ಕರ್ ಅವರ ಸಂವಿಧಾನದ ಮೂಲಕ ಜಾರಿಗೆ ಬಂದಿರುವ ಕಾನೂನುಗಳ ಅಡಿಯಲ್ಲೇ ಬದುಕುತ್ತಿರುವುದು, ಪ್ರತಿಭಟನೆ ನಡೆಸುತ್ತಿರುವುದು ಎಂದು ಧರಣಿ ನಿತರು ಮುಖಂಡರು ತಿಳಿಸಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

BJP ಯತ್ನಾಳ್ಗೆ ಎಚ್ಚರಿಕೆ ನೀಡಲು ವಿಜಯೇಂದ್ರ ಹಿಂದೇಟು..!

BJP ಯತ್ನಾಳ್ಗೆ ಎಚ್ಚರಿಕೆ ನೀಡಲು ವಿಜಯೇಂದ್ರ ಹಿಂದೇಟು..!

ರಮೇಶ್ ಜಾರಕಿಹೊಳಿ ವಿಷಯದಲ್ಲಿ ಮಾತಾಡಿದ ಹಾಗೆ ತನ್ನ ಬಗ್ಗೆ ಮಾತಾಡಿದರೆ ಪರಿಣಾಮ ನೆಟ್ಟಗಿರೋದಿಲ್ಲ ಎಂದು ಯತ್ನಾಳ್ BJP

[ccc_my_favorite_select_button post_id="101125"]
MB Patila: ಅಖಂಡತೆಯಿಂದ ಮಾತ್ರ ಲಿಂಗಾಯತರ ಏಳ್ಗೆ: ಎಂಬಿ ಪಾಟೀಲ

MB Patila: ಅಖಂಡತೆಯಿಂದ ಮಾತ್ರ ಲಿಂಗಾಯತರ ಏಳ್ಗೆ: ಎಂಬಿ ಪಾಟೀಲ

ಲಿಂಗಾಯತ ಸಮುದಾಯ ರಾಜ್ಯದ ಉದ್ದಕ್ಕೂ ಇದೆ. ಆದರೆ ನಮ್ಮಲ್ಲಿ ಅಖಂಡತೆಯ ಪ್ರಜ್ಞೆ ಇಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. MB Patila

[ccc_my_favorite_select_button post_id="101136"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

ಚಾಲಕನೊಂದಿಗೆ ಓಂಶಕ್ತಿ ಮಾಲಾಧಾರಿ ಮಹಿಳೆಯಿದ್ದು, ಆಕೆಯನ್ನು ಆಲಹಳ್ಳಿ ಬಿಟ್ಟು ನಂತರ ಯಶೋಧಮ್ಮ ಅವರನ್ನು ಮನೆಗೆ ಬಿಡುವುದಾಗಿ ಚಾಲಕ ಕರೆದೊಯ್ದಿದ್ದಾನೆ. Doddaballapura

[ccc_my_favorite_select_button post_id="101115"]

ATM: ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾದ

[ccc_my_favorite_select_button post_id="101113"]

Crime news: 23 ಕೋಟಿ ರೂ. ಮೌಲ್ಯದ

[ccc_my_favorite_select_button post_id="101107"]

Doddaballapura ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ..!|

[ccc_my_favorite_select_button post_id="101094"]

News update: ಸೈಫ್ ಅಲಿ ಖಾನ್‌ಗೆ ಚಾಕು

[ccc_my_favorite_select_button post_id="101085"]
ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ ಸಮೇತ ಸೋದರ ಮಾವನ ದಾರುಣ ಸಾವು…!| Accident

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ

ಎರಡು ಬಸ್ ಗಳ ನಡುವೆ ಸಿಲುಕಿದ ಬೈಕ್ ಸವಾರ ಅಪಘಾತಕ್ಕೀಡಾಗಿ ತನ್ನ ತಂಗಿಯ ಮಗಳ ಜೊತೆಗೆ ತಾನು ದಾರುಣವಾಗಿ ಸಾವನ್ನಪ್ಪಿದ್ದಾನೆ. Accident

[ccc_my_favorite_select_button post_id="101076"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!